ಕ್ವಾಟರ್ ಫೈನಲ್ ಗೆ ಭಾರತ, ಏಕೋ ಅನುಮಾನ?
ಚೆನ್ನೈ, ಮಾ. 15: ವಿಶ್ವಕಪ್ 2011ನಲ್ಲಿ ವೆಸ್ಟ್ ಇಂಡೀಸ್ ವಿರುದ್ಧದ ಮಹತ್ವದ ಲೀಗ್ ಪಂದ್ಯವನ್ನು ಆಡಲು ಇಲ್ಲಿಗೆ ಧೋನಿ ಪಡೆ ಆಗಮಿಸಿದೆ. ದಕ್ಷಿಣ ಆಫ್ರಿಕಾಪ ಪಂದ್ಯಕ್ಕೂ ಮುನ್ನ ಮೂರು ಜಯ ಹಾಗೂ ಒಂದು ಟೈ ಫಲಿತಾಂಶ ದಾಖಲಿಸಿದ್ದ ಭಾರತ ಕ್ವಾರ್ಟರ್ ಫೈನಲ್ ತಲುಪಿತು ಎಂದೇ ನಂಬಲಾಗಿತ್ತು. ಆದರೆ ಈಗ ಹೊಸ ಲೆಕ್ಕಾಚಾರದ ಪ್ರಕಾರ ಸ್ವಲ್ಪ ಎಡವಟ್ಟು ಸಂಭವಿಸಿದ್ದರೂ ಭಾರತದ ನಿರೀಕ್ಷೆಗಳು ಹುಸಿಯಾಗುವ ಸಾಧ್ಯತೆಯಿದೆ. ಗುರು ಗ್ಯಾರಿ, ನಾಯಕ ಧೋನಿ, ಹಿರಿಯ ಆಟಗಾರರು ರಣತಂತ್ರ ರೂಪಿಸುವಲ್ಲಿ ಮಗ್ನರಾಗಿದ್ದಾರೆ.
'ಬಿ" ಗುಂಪಿನಲ್ಲಿ ದುರ್ಬಲ ತಂಡಗಳು ಅನಿರೀಕ್ಷಿತ ಫಲಿತಾಂಶ ನೀಡಿರುವುದು ಭಾರತದ ಕ್ವಾರ್ಟರ್ ಹಾದಿಯನ್ನು ಕಠಿಣಗೊಳಿಸಿದೆ. ಪ್ರಸಕ್ತ ಅಗ್ರಸ್ಥಾನದಲ್ಲಿರುವ ಭಾರತ ಐದು ಪಂದ್ಯಗಳಿಂದ +0.768 ರನ್ ಸರಾಸರಿಯೊಂದಿಗೆ ಏಳು ಪಾಯಿಂಟ್ ಹೊಂದಿದೆ. ಹಾಗೆಯೇ ವಿಂಡೀಸ್ ಉತ್ತಮ ರನ್ ಸರಾಸರಿಯೊಂದಿಗೆ (+2.206) (6 ಪಾಯಿಂಟ್), ದಕ್ಷಿಣ ಆಫ್ರಿಕಾ (6 ಪಾಯಿಂಟ್), ಮತ್ತು ಬಾಂಗ್ಲಾದೇಶ (4 ಪಾಯಿಂಟ್) ಹೊಂದಿದ್ದು, ಇನ್ನೂ ಎರಡು ಪಂದ್ಯಗಳನ್ನು ಆಡಬೇಕಾಗಿದೆ. ಭಾರತದಷ್ಟೇ ಪಂದ್ಯಗಳನ್ನು ಆಡಿರುವ ಇಂಗ್ಲೆಂಡ್ ತೆಕ್ಕೆಯಲ್ಲಿ ಐದು ಅಂಕವಿದೆ.

ಚೆನ್ನೈನಲ್ಲಿ ನಡೆಯಲಿರುವ ಕೊನೆಯ ಲೀಗ್ ಪಂದ್ಯದಲ್ಲಿ ವಿಂಡೀಸ್ ವಿರುದ್ಧ ಸೋತಲ್ಲಿ ಭಾರತ ಏಳು ಪಾಯಿಂಟ್ನಲ್ಲಿಯೇ ಉಳಿಯಲಿದೆ. ಹಾಗೆಯೇ ದಕ್ಷಿಣ ಆಫ್ರಿಕಾ ಮತ್ತು ಐರ್ಲೆಂಡ್ ವಿರುದ್ಧದ ಉಳಿದೆರಡು ಲೀಗ್ ಪಂದ್ಯವನ್ನು ಗೆದ್ದಲ್ಲಿ ಬಾಂಗ್ಲಾದೇಶ ಪಾಯಿಂಟ್ ಬಲ 8 ಕ್ಕೆ ಏರಿಕೆಯಾಗಲಿದೆ. ತನ್ನ ಕೊನೆಯ ಲೀಗ್ ಪಂದ್ಯದಲ್ಲಿ ಐರ್ಲೆಂಡ್ ವಿರುದ್ಧ ಗೆದ್ದಲ್ಲಿ ದಕ್ಷಿಣ ಆಫ್ರಿಕಾ ಪಾಯಿಂಟ್ ಕೂಡಾ 8 ಆಗುತ್ತದೆ. ಆದರೆ ವಿಂಡೀಸ್ ವಿರುದ್ಧದ ಕೊನೆಯ ಲೀಗ್ ಪಂದ್ಯವನ್ನು ಭಾರಿ ರನ್ರೇಟ್ನಲ್ಲಿ ಗೆದ್ದಲ್ಲಿ ಇಂಗ್ಲೆಂಡ್ ಪಾಯಿಂಟ್ ಬಲ ಕೂಡಾ ಭಾರತದಷ್ಟೇ ಆಗುತ್ತದೆ.
ಮತ್ತೆ ಮುಳುವಾದ ಬಾಂಗ್ಲಾ: ಆಗ ನೇಟ್ ರನ್ರೇಟ್ನಲ್ಲಿ ಭಾರತವನ್ನು ಹಿಂದಿಕ್ಕಲಿರುವ ಇಂಗ್ಲೆಂಡ್ ಕ್ವಾರ್ಟರ್ ಪ್ರವೇಶಿಸಲಿದೆ. ಉಳಿದಂತೆ ತಲಾ ಎಂಟು ಅಂಕ ಹೊಂದಿರುವ ವೆಸ್ಟ್ಇಂಡೀಸ್, ದಕ್ಷಿಣ ಆಫ್ರಿಕಾ ಮತ್ತು ಬಾಂಗ್ಲಾದೇಶ ಕ್ವಾರ್ಟರ್ ಪ್ರವೇಶ ಮಾಡಲಿದೆ. ಇದರಿಂದಾಗಿ ಭಾರತ ನಿರ್ಗಮನದ ಹಾದಿ ಹಿಡಿಯಬೇಕಾಗುತ್ತದೆ. ಆದರೆ ಇಲ್ಲಿ ಗಮನಿಸಬೇಕಾದ ಅಂಶವೆಂದರೆ ಭಾರತಕ್ಕಿಂತ ಉತ್ತಮ ರನ್ರೇಟ್ ಕಾಯ್ದುಕೊಳ್ಳುವುದು ಆಂಗ್ಲರಿಗೆ ಮುಖ್ಯವೆನಿಸಲಿದೆ. ಭಾನುವಾರ ವಿಂಡೀಸ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಭಾರತ ಗೆದ್ದರೆ ಈ ಲೆಕ್ಕಾಚಾರಗಳು ಪರಿಗಣನೆಗೆ ಬರುವುದಿಲ್ಲ. ವಿಶ್ವಕಪ್ ನ ಕನಸು ನನಸಾಗಬೇಕಾದರೆ ಗೆಲುವಿನ ಮಂತ್ರವನ್ನು ಟೀಂ ಇಂಡಿಯಾ ಜಪಿಸುವುದು ಒಳಿತು.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications