ಎಲ್ಲರ ಕನ್ನಡ ಓದುಕೂಟಕ್ಕೆ ತಪ್ಪದೇ ಬನ್ನಿ

ನುಡಿಯೆನ್ನುವುದು ಒಂದು ಜನಾಂಗದ ಸಂಸ್ಕೃತಿ, ಇತಿಹಾಸ, ಬದುಕುಗಳಿಗೆ ಹಿಡಿದ ಕನ್ನಡಿ. ಸಮಾಜವೊಂದರ ಏಳಿಗೆಯ ಜೀವನಾಡಿ ಅದರ ನುಡಿ. ಪ್ರಪಂಚದ ಮುಂದುವರೆದ ಜನಾಂಗಗಳೆಲ್ಲಾ ತಮ್ಮ ಕಲಿಕೆ, ದುಡಿಮೆಗಳನ್ನು ತಾಯ್ನುಡಿಯ ಸುತ್ತಲೇ ಕಟ್ಟಿಕೊಂಡಿರುವುದನ್ನು ಮುಂದುವರೆದ ದೇಶಗಳನ್ನು ನೋಡಿ ತಿಳಿಯಬಹುದು. ಕನ್ನಡಿಗರ ಏಳಿಗೆಗೂ ಕನ್ನಡವೇ ಸಾಧನ. ಆದರೆ ಕನ್ನಡ ನುಡಿಯು ಇಂದು ಕನ್ನಡಿಗರ ಕಲಿಕೆ ಬದುಕುಗಳನ್ನು ಕಟ್ಟಿಕೊಡಲು ಮತ್ತಷ್ಟು ಶಕ್ತವಾಗಬೇಕಾಗಿದೆ. ಹಾಗಾಗಲು, ನಮ್ಮ ನುಡಿಯ ವೈಜ್ಞಾನಿಕ ಅಧ್ಯಯನವೂ ವೇಗ ಪಡೆದುಕೊಳ್ಳಬೇಕಾಗಿದೆ ಎನ್ನುವ ಉದ್ದೇಶವಿಟ್ಟುಕೊಂಡು, ಕನ್ನಡ ನುಡಿಯ ವೈಜ್ಞಾನಿಕ ಅಧ್ಯಯನಕ್ಕೆ ಉತ್ತೇಜನ ನೀಡುವ ಸಲುವಾಗಿ ಈ ಸಮ್ಮೇಳನವನ್ನು ಹಮ್ಮಿಕೊಳ್ಳಲಾಗಿದೆ.
ಈ ಓದುಕೂಟಕ್ಕೆಂದೇ ಏರ್ಪಡಿಸಿದ್ದ ಪ್ರಬಂಧ ಸ್ಪರ್ಧೆಯಲ್ಲಿ ಭಾಗವಹಿಸುತ್ತಿರುವ, ಕರ್ನಾಟಕದ ನಾನಾ ವಿಶ್ವವಿದ್ಯಾಲಯಗಳಲ್ಲಿ ಭಾಷಾ ಅಧ್ಯಯನದಲ್ಲಿ ತೊಡಗಿರುವ ಉತ್ಸಾಹಿಗಳು, ನಾಡಿನ ಹಿರಿಯ ಭಾಷಾವಿಜ್ಞಾನಿಗಳ ಮಾರ್ಗದರ್ಶನದಲ್ಲಿ ಸಂಶೋಧನಾ ಪ್ರಬಂಧಗಳನ್ನು ಸಿದ್ಧಪಡಿಸಿದ್ದು, ಸದರಿ ಸಮ್ಮೇಳನದಲ್ಲಿ ಆಯ್ದಪ್ರಬಂಧಗಳನ್ನು ಮಂಡಿಸಲಾಗುತ್ತದೆ. ಅತ್ಯುತ್ತಮ ಪ್ರಬಂಧಗಳಿಗೆ ಬಹುಮಾನ ನೀಡುವ ಕಾರ್ಯಕ್ರಮವೂ ಇದೆ. ಈ ಮೂಲಕ ಕನ್ನಡದ ವೈಜ್ಞಾನಿಕ ಅಧ್ಯಯನ ಕ್ಷೇತ್ರದಲ್ಲೊಂದು ಹೊಸ ಅಧ್ಯಾಯವನ್ನು ಆರಂಭಿಸಲು ಮುಂದಾಗುತ್ತಿದ್ದೇವೆ. ಹಾಗೆಯೇ, ಭಾಷಾ ವಿಜ್ಞಾನದಲ್ಲಿ ಆಗಬೇಕಾದ ಕೆಲಸಗಳೇನು, ಅಧ್ಯಯನ ಮಾಡುವ ರೀತಿ ಎಂತಹುದು, ಸಂಶೋಧನೆಯಲ್ಲಿ ತೊಡಗಿಕೊಳ್ಳುವುದು ಹೇಗೆ ಎಂಬಿತ್ಯಾದಿ ಮಾಹಿತಿಯನ್ನು ಭಾಷಾ ವಿಜ್ಞಾನದ ವಿಧ್ಯಾರ್ಥಿಗಳಿಗೆ ಈ ಸಮ್ಮೇಳನ ಕೊಡಲಿದೆ.
ಕನ್ನಡಿಗರ ಏಳಿಗೆಯ ದೃಷ್ಟಿಯಿಂದ ಅತ್ಯಂತ ಮಹತ್ವದ್ದಾದ ಈ ಕಾರ್ಯಕ್ರಮಕ್ಕೆ ತಮ್ಮನ್ನು ಈ ಮೂಲಕ ಆಹ್ವಾನಿಸುತ್ತಿದ್ದೇವೆ. ಈ ಕಾರ್ಯಕ್ರಮಕ್ಕೆ ಬರುವವರು ಮುಂಚೆಯೇ ನೋಂದಾಯಿಸಿಕೊಳ್ಳಬೇಕಾಗಿರುವುದರಿಂದ ತಮ್ಮ ವಿವರಗಳನ್ನು [email protected] ವಿಳಾಸಕ್ಕೆ ಮಿಂಚೆ ಕಳಿಸುವ ಮೂಲಕ ಖಚಿತಪಡಿಸಬೇಕಾಗಿ ಕೇಳಿಕೊಳ್ಳುತ್ತೇವೆ. ಬರುವ ಶುಕ್ರವಾರ ಅಂದರೆ 18ನೇ ಮಾರ್ಚ್ ನೋಂದಾಯಸಿಕೊಳ್ಳಲು ಕೊನೆಯ ದಿನವಾಗಿದೆ.
ಗಮನಿಸಿ: ಈ ಕಾರ್ಯಕ್ರಮಕ್ಕೆ ಮೊದಲೇ ನೋಂದಾಯಿಸಿಕೊಂಡವರಿಗೆ ಮಾತ್ರವೇ ಅವಕಾಶವಿರುವ ಕಾರಣ, ತಪ್ಪದೇ ತಮ್ಮ ಬರುವಿಕೆಯನ್ನು ಮೇಲೆ ಕೊಟ್ಟ ವಿಳಾಸಕ್ಕೆ ಮಿಂಚೆ ಕಳಿಸುವಮೂಲಕ ನಿಕ್ಕಿ ಮಾಡಿಕೊಳ್ಳಿ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications