ದ್ವಿತೀಯ ಪಿಯುಸಿ ಪರೀಕ್ಷೆ ಇಂದಿನಿಂದ

ಕಳೆದ ವರ್ಷಕ್ಕೆ ಹೋಲಿಸಿದರೆ 28 ಸಾವಿರ ಕಡಿಮೆ ವಿದ್ಯಾರ್ಥಿಗಳು ಈ ಬಾರಿ ಪರೀಕ್ಷೆ ಬರೆಯಲಿದ್ದಾರೆ. ಕಳೆದ ವರ್ಷ 6.52 ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಕುಳಿತಿದ್ದರು. ಪಾಸ್ ಆಗುವವರ ಪ್ರಮಾಣ ಹೆಚ್ಚಾಗಿದ್ದರಿಂದ (ಶೇ.6) ಈ ಬಾರಿ ವಿದ್ಯಾರ್ಥಿಗಳ ಸಂಖ್ಯೆ ಕಡಿಮೆಯಾಗಿದೆ.
ಬೆಳಿಗ್ಗೆ 9ರಿಂದ ಮಧ್ಯಾಹ್ನ 12.15 ಮತ್ತು ಮಧ್ಯಾಹ್ನ 2ರಿಂದ 5.15 ಕಾಲಾವಧಿಯಲ್ಲಿ ಪರೀಕ್ಷೆ ಜರುಗಲಿವೆ. ಪ್ರಶ್ನೆ ಪತ್ರಿಕೆ ಅರಿತುಕೊಳ್ಳಲೆಂದು ಪರೀಕ್ಷೆ ಪ್ರಾರಂಭವಾಗುತ್ತಿದ್ದಂತೆ 15 ನಿಮಿಷಗಳ ಹೆಚ್ಚುವರಿ ಕಾಲಾವಧಿ ನೀಡಲಾಗಿದೆ. 23ರಂದು ಕರ್ನಾಟಕ ಸಂಗೀತ, ಹಿಂದೂಸ್ತಾನಿ ಸಂಗೀತ ಮತ್ತು ಮನಶಾಸ್ತ್ರ ಹಾಗು 29ರಂದು ಉರ್ದು ಹೊರತುಪಡಿಸಿ ಎಲ್ಲ ಪರೀಕ್ಷೆಗಳು ಬೆಳಗ್ಗೆ ಆರಂಭವಾಗುತ್ತಿವೆ.
ಗುರುವಾರ ರಸಾಯನ ಶಾಸ್ತ್ರ ಮತ್ತು ಬಿಜಿನೆಸ್ ಸ್ಟಡೀಸ್ ಪರೀಕ್ಷೆ ಇದ್ದು, ಶುಕ್ರವಾರ ಕನ್ನಡ, ತಮಿಳು, ಮಲಯಾಳಂ, ಮರಾಠಿ, ಅರೇಬಿಕ್ ಮತ್ತು ಫ್ರೆಂಚ್ ಭಾಷಾ ಪರೀಕ್ಷೆಗೆ ವಿದ್ಯಾರ್ಥಿಗಳು ಕುಳಿತುಕೊಳ್ಳಲಿದ್ದಾರೆ. [ಪರೀಕ್ಷಾ ವೇಳಾಪಟ್ಟಿ]
ಅಕ್ರಮ ತಡೆಯಲು ಕ್ರಮ : ಪರೀಕ್ಷೆ ನಡೆಯುವಾಗ ವಿದ್ಯಾರ್ಥಿಗಳಿಂದ ಅಕ್ರಮ ಜರುಗದಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಜಾಗೃತ ದಳ ರಚಿಸಿದೆ. ಯಾವುದೇ ಅಕ್ರಮ ನಡೆಯದಂತೆ ತಡೆಗಟ್ಟಲು ಆಯಾ ಜಿಲ್ಲಾ ಶಿಕ್ಷಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಯಾವುದೇ ಅಕ್ರಮ ಜರುಗಿದರೆ, ಪರೀಕ್ಷಾ ವಿಭಾಗದ ಜಂಟಿ ನಿರ್ದೇಶಕ ಆರ್ ಬಸವರಾಜಪ್ಪ 96630 92522 ಸಂಖ್ಯೆಗೆ ದೂರು ನೀಡಬಹುದು.
ಹಾಗೆಯೆ, ಪ್ರವೇಶ ಪರೀಕ್ಷೆ ಮರೆಯದೆ ತರಲು ಮತ್ತು ಮೊಬೈಲನ್ನು ಮನೆಯಲ್ಲೇ ಮರೆತುಬರಲು ವಿದ್ಯಾರ್ಥಿಗಳಿಗೆ ಸೂಚನೆ ನೀಡಲಾಗಿದೆ. ಹೆಚ್ಚುವರಿ ಹಾಳೆಗಳಿಗೂ ನೊಂದಣಿ ಸಂಖ್ಯೆ ನಮೂದಿಸಬೇಕೆಂದು ವಿದ್ಯಾರ್ಥಿಗಳಿಗೆ ಸೂಚಿಸಲಾಗಿದೆ.
ಪಾಲಕರೇ ನಿಮ್ಮ ಜವಾಬ್ದಾರಿ : ನಿಮ್ಮಮಕ್ಕಳ ಮನಸ್ಸುಪ್ರಫುಲ್ಲವಾಗಿರುವಂತೆ ನೋಡಿಕೊಳ್ಳಿ. ಪ್ರವೇಶ ಪತ್ರ, ಬರೆಯಲು ಅಗತ್ಯವಾಗಿ ಬೇಕಾಗಿರುವ ಸಾಮಗ್ರಿಗಳು ಸರಿಯಾಗಿವೆಯೇ ಇಲ್ಲವೆ ಎಂಬುದರತ್ತ ಗಮನಹರಿಸಿ. ಪರೀಕ್ಷೆಗೆ ಹೋಗುವ ಮೊದಲು ತಿಂಡಿ ತಿನ್ನಿಸಿ ಕಳಿಸಿ. ಪರೀಕ್ಷೆ ಸರಿಯಾಗಿ ಬರೆಯದಿದ್ದರೆ ಅಪ್ಪಿತಪ್ಪಿಯೂ ಗದರಿಸಬೇಡಿ, ಜಗತ್ತೇನು ಮುಳುಗಿಹೋಗುವುದಿಲ್ಲ. ಪರೀಕ್ಷೆ ಮುಗಿಯುವವರೆಗೆ ಕೆಲಸ ಭೊಗಸಿ ಒತ್ತಟ್ಟಿಗಿಟ್ಟು ಮಕ್ಕಳ ಬಗ್ಗೆ ಹೆಚ್ಚು ನಿಗಾವಹಿಸಿ. ಆಲ್ ದಿ ಬೆಸ್ಟ್.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications