ಪತ್ರಿಕೋದ್ಯಮ ಹೇಳಿಕೊಟ್ಟರೆ ಬರುವಂಥದ್ದಲ್ಲ : ಜಾರ್ಜ್

ಅವರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಇಲಾಖೆ ಆಯೋಜಿಸಿರುವ, ಯುಜಿಸಿ-ಎಸ್ಎಪಿ ಪ್ರಾಯೋಜಿಸಿರುವ, 'ಹೊಸ ಮಾಧ್ಯಮ ಮತ್ತು ರಾಷ್ಟ್ರೀಯ ಬೆಳವಣಿಗೆ' ಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಆಶಯ ಭಾಷಣ ಮಾಡಿದರು. ಪತ್ರಿಕೋದ್ಯಮ ಇಂದು ಎದುರಿಸುತ್ತಿರುವ ಸವಾಲುಗಳನ್ನು ಮೆಟ್ಟಿನಿಲ್ಲಲು ಪತ್ರಿಕೋದ್ಯಮದ ಅಧ್ಯಾಪಕರಿಗೆ ವಸ್ತುಸ್ಥಿತಿಯನ್ನು ಗ್ರಹಿಸುವಂಥ ವಾಸನೆಯಿರಬೇಕು ಎಂದು ಮಾರ್ಮಿಕವಾಗಿ ನುಡಿದರು. [ಗ್ಯಾಲರಿ ನೋಡಿರಿ]
ಆದರೂ, ಪತ್ರಿಕೋದ್ಯಮ ಅತ್ಯಂತ ಪ್ರಭಾವಶಾಲಿಯಾಗಿ ಮತ್ತು ಬಲಶಾಲಿಯಾಗಿ ಬೆಳೆಯುತ್ತಿದ್ದು, ಭಾರತದ ನಾಲ್ಕನೇ ಸ್ತಂಭವಾಗಿ ಹೊರಹೊಮ್ಮಿದೆ ಎಂದು ದಿ ಲೈಫ್ ಇಂಡ್ ಟೈಮ್ಸ್ ಆಫ್ ನರ್ಗಿಸ್ ಮುಂತಾದ ಪುಸ್ತಕಗಳನ್ನು ಬರೆದಿರುವ ಟಿಜೆಎಸ್ ಜಾರ್ಜ್ ಹೇಳಿದರು. ವಿದ್ಯಾರ್ಥಿಗಳು ಕೂಡ ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಶಿಕ್ಷಕ ವೃತ್ತಿಯನ್ನು ಮಾತ್ರ ನೆಚ್ಚಿಕೊಳ್ಳುತ್ತಿಲ್ಲ, ಪತ್ರಿಕೋದ್ಯಮವನ್ನೂ ಅಪ್ಪಿಕೊಳ್ಳುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷೀಯ ಭಾಷಣವನ್ನು ಮಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಉಪ-ಕುಲಪತಿ ಎನ್ ಪ್ರಭುದೇವ್ ಅವರು, ಮಾಧ್ಯಮದಲ್ಲಿ ಮೌಲ್ಯಗಳ ಅಧಃಪತನವಾಗುತ್ತಿದ್ದು, ವ್ಯವಸ್ಥಿತವಾಗಿ ಭ್ರಷ್ಟಾಚಾರ ನಾಟಿಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಜೆಎಸ್ ಜಾರ್ಜ್ ಅವರು, ಮಾಹಿತಿಯ ಹಸಿವು ಮತ್ತು ಬೆಳೆಯಬೇಕೆಂಬ ಆಸಕ್ತಿ ಮಾತ್ರ ಪತ್ರಿಕೋದ್ಯಮಕ್ಕೆ ಸಹಕಾರಿಯಾಗಬಲ್ಲದು ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆಯುತ್ತಿರುವ ಈ ಮಹತ್ವದ ವಿಚಾರ ಸಂಕಿರಣದಲ್ಲಿ ಆನ್ ಲೈನ್ ಪತ್ರಿಕೋದ್ಯಮಕ್ಕೆ ಹೆಜ್ಜೆ ಇಟ್ಟವರಲ್ಲಿ ಮೊದಲಿಗರಾಗಿರುವ ಒನ್ ಇಂಡಿಯಾ ಸಿಇಓ ಬಿಜಿ ಮಹೇಶ್ ಅವರು ಸೇರಿದಂತೆ ಹಲವಾರು ಗಣ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಿಜಿ ಮಹೇಶ್ ಅವರು ಆನ್ ಲೈನ್ ಪತ್ರಿಕೋದ್ಯಮ : ನಿನ್ನೆ ಮತ್ತು ಇಂದು ಎಂಬ ವಿಷಯ ಕುರಿತು ವಿಷಯ ಮಂಡನೆ ಮಾಡಿದರು.
-
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
Bengaluru Property: ಬೆಂಗಳೂರಿನ 3 ಲಕ್ಷಕ್ಕೂ ಅಧಿಕ ಆಸ್ತಿ ಮಾಲೀಕರಿಗೆ ಶುಭ ಸುದ್ದಿ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
3 ವರ್ಷಕ್ಕೆ 1.17 ಕೋಟಿ: ಮಲೈಕಾ ಅರೋರಾ ಅಪಾರ್ಟ್ಮೆಂಟ್ ಬಾಡಿಗೆ ಬಹಿರಂಗ -
Karnataka Weather: ಬೇಸಿಗೆ ಬಿಸಿಲ ನಡುವೆ ರಾಜ್ಯದ ಹಲವೆಡೆ ಗುಡುಗು-ಮಿಂಚು ಸಹಿತ ಮಳೆ; ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ -
April 4 Horoscope: ಇಂದು ನಿಮ್ಮ ರಾಶಿ ಏನು ಹೇಳುತ್ತದೆ? ಏಪ್ರಿಲ್ 4 ಭವಿಷ್ಯ ಇಲ್ಲಿದೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
Bengaluru: ಆಟೋ LPG ಕೊರತೆ ಬಗೆಹರಿಯುವ ವಿಶ್ವಾಸ: ಪೂರೈಕೆ ಹೆಚ್ಚಿಸಿದ ಇಂಡಿಯನ್ ಆಯಿಲ್ -
ರಾಜ್ಯಪಾಲರೇ ಗಂಟುಮೂಟೆ ಕಟ್ಟಿಕೊಂಡು ನಿಮ್ಮ ರಾಜ್ಯಕ್ಕೆ ತೊಲಗಿ: ಕರವೇ ನಾರಾಯಣಗೌಡ ಎಚ್ಚರಿಕೆ -
ಲಲಿತ್ಪುರ ಫಾರ್ಮಾ ಪಾರ್ಕ್ ಅನ್ನು ಜಾಗತಿಕ ರಫ್ತು ಕೇಂದ್ರವನ್ನಾಗಿ ಮಾಡುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆ -
40 ವರ್ಷ ಮೇಲ್ಪಟ್ಟವರಿಗೆ ಸರ್ಕಾರದಿಂದಲೇ ಉಚಿತ ದೃಷ್ಟಿ ತಪಾಸಣೆ, ಕನ್ನಡಕ ವಿತರಣೆ -
Bengaluru: ಸತತ 3ನೇ ವರ್ಷವೂ ರಾಜ್ಯಕ್ಕೇ ಪ್ರಥಮ ಸ್ಥಾನ: 1,273 ಕೋಟಿ ರೂ. ಆದಾಯ ಸಂಗ್ರಹಿಸಿದ ಬೆಂಗಳೂರು ಕೇಂದ್ರ RTO












Click it and Unblock the Notifications