ಪತ್ರಿಕೋದ್ಯಮ ಹೇಳಿಕೊಟ್ಟರೆ ಬರುವಂಥದ್ದಲ್ಲ : ಜಾರ್ಜ್

ಅವರು ಜ್ಞಾನಜ್ಯೋತಿ ಸಭಾಂಗಣದಲ್ಲಿ ಬೆಂಗಳೂರು ವಿಶ್ವವಿದ್ಯಾಲಯದ ಸಂವಹನ ಇಲಾಖೆ ಆಯೋಜಿಸಿರುವ, ಯುಜಿಸಿ-ಎಸ್ಎಪಿ ಪ್ರಾಯೋಜಿಸಿರುವ, 'ಹೊಸ ಮಾಧ್ಯಮ ಮತ್ತು ರಾಷ್ಟ್ರೀಯ ಬೆಳವಣಿಗೆ' ಕುರಿತ ಎರಡು ದಿನಗಳ ವಿಚಾರ ಸಂಕಿರಣವನ್ನು ಉದ್ಘಾಟಿಸಿ ಆಶಯ ಭಾಷಣ ಮಾಡಿದರು. ಪತ್ರಿಕೋದ್ಯಮ ಇಂದು ಎದುರಿಸುತ್ತಿರುವ ಸವಾಲುಗಳನ್ನು ಮೆಟ್ಟಿನಿಲ್ಲಲು ಪತ್ರಿಕೋದ್ಯಮದ ಅಧ್ಯಾಪಕರಿಗೆ ವಸ್ತುಸ್ಥಿತಿಯನ್ನು ಗ್ರಹಿಸುವಂಥ ವಾಸನೆಯಿರಬೇಕು ಎಂದು ಮಾರ್ಮಿಕವಾಗಿ ನುಡಿದರು. [ಗ್ಯಾಲರಿ ನೋಡಿರಿ]
ಆದರೂ, ಪತ್ರಿಕೋದ್ಯಮ ಅತ್ಯಂತ ಪ್ರಭಾವಶಾಲಿಯಾಗಿ ಮತ್ತು ಬಲಶಾಲಿಯಾಗಿ ಬೆಳೆಯುತ್ತಿದ್ದು, ಭಾರತದ ನಾಲ್ಕನೇ ಸ್ತಂಭವಾಗಿ ಹೊರಹೊಮ್ಮಿದೆ ಎಂದು ದಿ ಲೈಫ್ ಇಂಡ್ ಟೈಮ್ಸ್ ಆಫ್ ನರ್ಗಿಸ್ ಮುಂತಾದ ಪುಸ್ತಕಗಳನ್ನು ಬರೆದಿರುವ ಟಿಜೆಎಸ್ ಜಾರ್ಜ್ ಹೇಳಿದರು. ವಿದ್ಯಾರ್ಥಿಗಳು ಕೂಡ ಇಂಜಿನಿಯರಿಂಗ್, ವೈದ್ಯಕೀಯ ಮತ್ತು ಶಿಕ್ಷಕ ವೃತ್ತಿಯನ್ನು ಮಾತ್ರ ನೆಚ್ಚಿಕೊಳ್ಳುತ್ತಿಲ್ಲ, ಪತ್ರಿಕೋದ್ಯಮವನ್ನೂ ಅಪ್ಪಿಕೊಳ್ಳುತ್ತಿದ್ದಾರೆ ಎಂದು ಅವರು ಸಂತಸ ವ್ಯಕ್ತಪಡಿಸಿದರು.
ಅಧ್ಯಕ್ಷೀಯ ಭಾಷಣವನ್ನು ಮಾಡಿದ ಬೆಂಗಳೂರು ವಿಶ್ವವಿದ್ಯಾಲಯದ ಉಪ-ಕುಲಪತಿ ಎನ್ ಪ್ರಭುದೇವ್ ಅವರು, ಮಾಧ್ಯಮದಲ್ಲಿ ಮೌಲ್ಯಗಳ ಅಧಃಪತನವಾಗುತ್ತಿದ್ದು, ವ್ಯವಸ್ಥಿತವಾಗಿ ಭ್ರಷ್ಟಾಚಾರ ನಾಟಿಕೊಳ್ಳುತ್ತಿದೆ ಎಂದು ಆತಂಕ ವ್ಯಕ್ತಪಡಿಸಿದರು. ಇದಕ್ಕೆ ಪ್ರತಿಕ್ರಿಯಿಸಿದ ಟಿಜೆಎಸ್ ಜಾರ್ಜ್ ಅವರು, ಮಾಹಿತಿಯ ಹಸಿವು ಮತ್ತು ಬೆಳೆಯಬೇಕೆಂಬ ಆಸಕ್ತಿ ಮಾತ್ರ ಪತ್ರಿಕೋದ್ಯಮಕ್ಕೆ ಸಹಕಾರಿಯಾಗಬಲ್ಲದು ಎಂದು ಹೇಳಿದರು.
ಎರಡು ದಿನಗಳ ಕಾಲ ನಡೆಯುತ್ತಿರುವ ಈ ಮಹತ್ವದ ವಿಚಾರ ಸಂಕಿರಣದಲ್ಲಿ ಆನ್ ಲೈನ್ ಪತ್ರಿಕೋದ್ಯಮಕ್ಕೆ ಹೆಜ್ಜೆ ಇಟ್ಟವರಲ್ಲಿ ಮೊದಲಿಗರಾಗಿರುವ ಒನ್ ಇಂಡಿಯಾ ಸಿಇಓ ಬಿಜಿ ಮಹೇಶ್ ಅವರು ಸೇರಿದಂತೆ ಹಲವಾರು ಗಣ್ಯರು ತಮ್ಮ ಅನುಭವಗಳನ್ನು ಹಂಚಿಕೊಂಡರು. ಬಿಜಿ ಮಹೇಶ್ ಅವರು ಆನ್ ಲೈನ್ ಪತ್ರಿಕೋದ್ಯಮ : ನಿನ್ನೆ ಮತ್ತು ಇಂದು ಎಂಬ ವಿಷಯ ಕುರಿತು ವಿಷಯ ಮಂಡನೆ ಮಾಡಿದರು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications