ಹಿಂದೂ ಮುಸ್ಲಿಂ ಸಾಮರಸ್ಯದ ತಾಳವಾಡಿ ಉತ್ಸವ

ತಾಳವಾಡಿ ತಮಿಳುನಾಡು ಗಡಿ ಜಿಲ್ಲೆ ಈರೋಡು ತಾಲ್ಲೂಕಿನ ಸತ್ಯಮಂಗಲಂ ತಾಲ್ಲೂಕಿನ ಹೋಬಳಿ ಕೇಂದ್ರ. ಚಾಮರಾಜನಗರದಿಂದ ಕೇವಲ 22 ಕಿ.ಮೀ. ದೂರದಲ್ಲಿರುವ ಗಡಿ ಗ್ರಾಮ. ತಾಳವಾಡಿ ತಮಿಳುನಾಡಿನಲ್ಲಿದ್ದರೂ ಆ ಹೋಬಳಿಯ (ಫಿರ್ಕಾ) ಎಲ್ಲಾ 56 ಗ್ರಾಮಗಳಲ್ಲಿ ಬಹುತೇಕ ಕನ್ನಡಿಗರೇ ಇರುವುದು ವಿಶೇಷ. ಕನ್ನಡ ವರನಟ ಡಾ.ರಾಜ್ಕುಮಾರ್ ಅವರ ಹುಟ್ಟೂರು ಗಾಜನೂರು ಕೂಡ ತಾಳವಾಡಿಯಿಂದ ಕೇವಲ 1 ಕಿ.ಮೀ. ದೂರದಲ್ಲಿದೆ.
ತಾಳವಾಡಿ ತಮಿಳುನಾಡಿನಲ್ಲಿದ್ದರೂ ಅವರ ವ್ಯಾಪಾರ, ವಹಿವಾಟು, ಸಂಬಂಧ ಎಲ್ಲವೂ ಕರ್ನಾಟಕದ ಚಾಮರಾಜನಗರ ಮತ್ತು ಸುತ್ತಲಿನ ಜಿಲ್ಲೆಗಳೊಂದಿಗೆ ಬೆಸೆದುಕೊಂಡಿದ್ದಾರೆ. ಇಂಥ ಊರಿನಲ್ಲಿ ಕಳೆದ 150 ವರ್ಷಗಳಿಂದ ಮಾರಿಯಮ್ಮ ಜಾತ್ರಾ ಮಹೋತ್ಸವ ನಡೆದುಕೊಂಡು ಬಂದಿದ್ದು, ಇದು ಇತರೆ ಕಡೆಗಳಲ್ಲಿ ನಡೆಯುವ ಮಾರಿ ಹಬ್ಬಗಳಂತಲ್ಲ. ಇಲ್ಲಿ ಕೋಮು ಸೌಹಾರ್ದತೆ ಇದೆ. ಹಿಂದೂ- ಮುಸ್ಲಿಂರ ಸಹೋದರತೆ ಇದೆ. ಊರಿನ ಎಲ್ಲಾ 18 ಜಾತಿಗಳು ಕೂಡಿ ಒಗ್ಗಟ್ಟಿನಿಂದ ಜಾತಿ, ಧರ್ಮಗಳ ಭೇದವಿಲ್ಲದೆ ಜಾತ್ರೆಯಲ್ಲಿ ಪಾಲ್ಗೊಳ್ಳುವುದು ವಿಶೇಷ.
ಅಂತೆಯೇ ಬುಧವಾರ ರಾತ್ರಿಯಿಂದಲೇ ತಾಳವಾಡಿಯಲ್ಲಿ ಮಾರಿಯಮ್ಮ ದೇವರ ಜಾತ್ರಾ ಮಹೋತ್ಸವ ನಡೆಯಿತು. ಅಹೋರಾತ್ರಿ ದೇವರ ಉತ್ಸವ, ರಾತ್ರಿ ದೇವರಿಗೆ ತಂಪು ಸೇವೆ ನಡೆಯಿತು. ಕರಗ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಇಲ್ಲಿ ಮುಸ್ಲಿಮ್ ಕುಟುಂಬಗಳೂ ಕೂಡ ಮಾರಿಯಮ್ಮ ದೇವರಿಗೆ ಪೂಜೆ ಸಲ್ಲಿಸುವುದು ಗಮನಾರ್ಹ. ಮಾರನೇ ದಿನ ಗುರುವಾರ ಬೆಳಗಿನ ಜಾವ ಗುಂಬ ಪೂಜೆ ನಡೆದು ದೇವರಿಗೆ ಎಡೆ ಕೊಡುವುದು. ಬಿಸಿ ಅನ್ನವನ್ನು ಕೈಯಿಂದಲೇ ತುಂಬುವುದು. ಬಳಿಕ ದೇವರಿಗೆ ಹೊಳೆಯಲ್ಲಿ ಸ್ನಾನ ಮಾಡಿಸಿ ವೈಭವದ ಉತ್ಸವದ ಮೂಲಕ ಮಾರಿಯಮ್ಮ ದೇವಾಲಯದ ಮುಂದೆ ಮೊದಲೇ ಹಾಕಲಾಗಿರುವ ಕೊಂಡದ ಮೇಲೆ ದೇವರು ನಡೆಯುವುದು.
ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಶೇಷವೆಂದರೆ ಮಾರಿಯಮ್ಮ ದೇವಾಲಯ ಮತ್ತು ವೇಣುಗೋಪಾಲಸ್ವಾಮಿ ದೇವಾಲಯದ ಮಧ್ಯೆ ಮುಸ್ಲಿಮರ ಮಸೀದಿ ಇದೆ. ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಮಸೀದಿ ನಡುವೆ ಇರುವುದು ಒಂದೇ ಗೋಡೆ. ಆದರೆ ಅಷ್ಟೇ ಕೋಮು ಸಾಮರಸ್ಯವೂ ಇದೆ. ಕೊಂಡ ಹಾಯುವುದೂ ಕೂಡ ಮಸೀದಿ ಮುಂದೆಯೇ ನಡೆಯುತ್ತದೆ. ಈ ಸಂದರ್ಭದಲ್ಲಿ ಮುಸ್ಲಿಮರೂ ಕೊಂಡೋತ್ಸವ ಸಂದರ್ಭದಲ್ಲಿ ಹಾಜರಿದ್ದು ಸಂಭ್ರಮಪಡುತ್ತಾರೆ. ಅಂಥದ್ದೊಂದು ವಿಶಿಷ್ಟ ಹಬ್ಬ ಗುರುವಾರ ವಿಜೃಂಭಣೆಯಿಂದ ನಡೆಯಿತು.
-
Gold Rate: ಏಪ್ರಿಲ್ 4ರ ಚಿನ್ನ-ಬೆಳ್ಳಿ ದರ: ಬೆಂಗಳೂರಿನಲ್ಲಿ ಇಂದಿನ ನಿಖರ ಬೆಲೆ ಎಷ್ಟು? -
ಮೈಸೂರಲ್ಲಿ ವಂದೇ ಭಾರತ್ ರೈಲ್ವೆ ಹಬ್: 400 ಕೋಟಿ ರೂ ವೆಚ್ಚದಲ್ಲಿ ಹೈಟೆಕ್ ನಿರ್ವಹಣಾ ಕೇಂದ್ರ -
New Airport: ವಿಜಯಪುರ ಏರ್ಪೋರ್ಟ್ಗೆ ಸಿಕ್ತು 220 ಕೋಟಿ ರೂ, ಕಾರ್ಯಾಚರಣೆ ಬಗ್ಗೆ ಎಂಬಿ ಪಾಟೀಲ ಅಪ್ಡೇಟ್ -
ರಿಷಬ್ ಸಮಯ ಬಂದಾಗ ಮಾತಾಡ್ತೀನಿ ಅಂದ: ಅನ್ಫಾಲೋ, ಗೆಳೆಯರಲ್ಲಿ ಬಿರುಕು ವದಂತಿ ಬಗ್ಗೆ ಪ್ರಮೋದ್ ಶೆಟ್ಟಿ ಪ್ರತಿಕ್ರಿಯೆ -
HSRP: ಎಚ್ಎಸ್ಆರ್ಪಿ ನಂಬರ್ ಪ್ಲೇಟ್ ಕಡ್ಡಾಯ: ವದಂತಿಗಳಿಗೆ ಕಿವಿಗೊಡಬೇಡಿ ಎಂದು ಸ್ಪಷ್ಟನೆ ಕೊಟ್ಟ ಸಾರಿಗೆ ಇಲಾಖೆ -
KSOU: ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾಲಯದ ಕುಲಸಚಿವರಾಗಿ ಕೆಎಎಸ್ ಅಧಿಕಾರಿ ಎಸ್.ಕುಸುಮಾ ಕುಮಾರಿ ನೇಮಕ -
April 5 Horoscope: ನಿಮ್ಮ ಅದೃಷ್ಟ ಹೇಗಿದೆ? ಸಂಪೂರ್ಣ ಮಾಹಿತಿ ಇಲ್ಲಿ -
ಬೆಂಗಳೂರಿನ ಹೊಸೂರು ರಸ್ತೆಯ ದುಸ್ಥಿತಿ: ಕೇಂದ್ರ ಸಚಿವ ನಿತಿನ್ ಗಡ್ಕರಿಗೆ ಟ್ಯಾಗ್ ಮಾಡಿ ಕಿರಣ್ ಮಜುಂದಾರ್ ಶಾ ಆಕ್ರೋಶ -
Bengaluru Viral: ಬೆಂಗಳೂರಿನ ಲಾಲ್ಬಾಗ್ ನೋಡಿ ತಪ್ಪೊಪ್ಪಿಗೆ ಕೊಡಬೇಕು ಎಂದ ವಿದೇಶಿಗ, ವಿಡಿಯೋ ವೈರಲ್ -
"ಇಲ್ಲಿ ಎಲ್ಲದಕ್ಕೂ ಚೌಕಾಸಿ ಮಾಡಬೇಕು": ಬೆಂಗಳೂರಿನಲ್ಲಿ 2 ತಿಂಗಳು ಕಳೆದ ಮುಂಬೈ ಯುವಕನ Viral Post -
RCB vs CSK: ಆರ್ಸಿಬಿ ಕಡೆಯಿಂದ ಅಭಿಮಾನಿಗಳಿಗೆ ವಿಶೇಷ ಸಂದೇಶ: ಇಂದಿನ ಪಂದ್ಯಕ್ಕೂ ಮುನ್ನ ಇದು ಗಮನದಲ್ಲಿರಲಿ -
Virat Kohli: ಎಲ್ಲೂ ಅವಕಾಶ ಸಿಗದಿದ್ರೆ ಸ್ಯಾಂಡಲ್ವುಡ್ಗೆ ಬರ್ತೀನಿ: ವಿರಾಟ್ ಕೊಹ್ಲಿ ವಿಡಿಯೋ ವೈರಲ್












Click it and Unblock the Notifications