ಹಿಂದೂ ಮುಸ್ಲಿಂ ಸಾಮರಸ್ಯದ ತಾಳವಾಡಿ ಉತ್ಸವ

ತಾಳವಾಡಿ ತಮಿಳುನಾಡು ಗಡಿ ಜಿಲ್ಲೆ ಈರೋಡು ತಾಲ್ಲೂಕಿನ ಸತ್ಯಮಂಗಲಂ ತಾಲ್ಲೂಕಿನ ಹೋಬಳಿ ಕೇಂದ್ರ. ಚಾಮರಾಜನಗರದಿಂದ ಕೇವಲ 22 ಕಿ.ಮೀ. ದೂರದಲ್ಲಿರುವ ಗಡಿ ಗ್ರಾಮ. ತಾಳವಾಡಿ ತಮಿಳುನಾಡಿನಲ್ಲಿದ್ದರೂ ಆ ಹೋಬಳಿಯ (ಫಿರ್ಕಾ) ಎಲ್ಲಾ 56 ಗ್ರಾಮಗಳಲ್ಲಿ ಬಹುತೇಕ ಕನ್ನಡಿಗರೇ ಇರುವುದು ವಿಶೇಷ. ಕನ್ನಡ ವರನಟ ಡಾ.ರಾಜ್ಕುಮಾರ್ ಅವರ ಹುಟ್ಟೂರು ಗಾಜನೂರು ಕೂಡ ತಾಳವಾಡಿಯಿಂದ ಕೇವಲ 1 ಕಿ.ಮೀ. ದೂರದಲ್ಲಿದೆ.
ತಾಳವಾಡಿ ತಮಿಳುನಾಡಿನಲ್ಲಿದ್ದರೂ ಅವರ ವ್ಯಾಪಾರ, ವಹಿವಾಟು, ಸಂಬಂಧ ಎಲ್ಲವೂ ಕರ್ನಾಟಕದ ಚಾಮರಾಜನಗರ ಮತ್ತು ಸುತ್ತಲಿನ ಜಿಲ್ಲೆಗಳೊಂದಿಗೆ ಬೆಸೆದುಕೊಂಡಿದ್ದಾರೆ. ಇಂಥ ಊರಿನಲ್ಲಿ ಕಳೆದ 150 ವರ್ಷಗಳಿಂದ ಮಾರಿಯಮ್ಮ ಜಾತ್ರಾ ಮಹೋತ್ಸವ ನಡೆದುಕೊಂಡು ಬಂದಿದ್ದು, ಇದು ಇತರೆ ಕಡೆಗಳಲ್ಲಿ ನಡೆಯುವ ಮಾರಿ ಹಬ್ಬಗಳಂತಲ್ಲ. ಇಲ್ಲಿ ಕೋಮು ಸೌಹಾರ್ದತೆ ಇದೆ. ಹಿಂದೂ- ಮುಸ್ಲಿಂರ ಸಹೋದರತೆ ಇದೆ. ಊರಿನ ಎಲ್ಲಾ 18 ಜಾತಿಗಳು ಕೂಡಿ ಒಗ್ಗಟ್ಟಿನಿಂದ ಜಾತಿ, ಧರ್ಮಗಳ ಭೇದವಿಲ್ಲದೆ ಜಾತ್ರೆಯಲ್ಲಿ ಪಾಲ್ಗೊಳ್ಳುವುದು ವಿಶೇಷ.
ಅಂತೆಯೇ ಬುಧವಾರ ರಾತ್ರಿಯಿಂದಲೇ ತಾಳವಾಡಿಯಲ್ಲಿ ಮಾರಿಯಮ್ಮ ದೇವರ ಜಾತ್ರಾ ಮಹೋತ್ಸವ ನಡೆಯಿತು. ಅಹೋರಾತ್ರಿ ದೇವರ ಉತ್ಸವ, ರಾತ್ರಿ ದೇವರಿಗೆ ತಂಪು ಸೇವೆ ನಡೆಯಿತು. ಕರಗ ಸೇರಿದಂತೆ ವಿವಿಧ ಜಾನಪದ ಕಲಾತಂಡಗಳು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದವು. ಇಲ್ಲಿ ಮುಸ್ಲಿಮ್ ಕುಟುಂಬಗಳೂ ಕೂಡ ಮಾರಿಯಮ್ಮ ದೇವರಿಗೆ ಪೂಜೆ ಸಲ್ಲಿಸುವುದು ಗಮನಾರ್ಹ. ಮಾರನೇ ದಿನ ಗುರುವಾರ ಬೆಳಗಿನ ಜಾವ ಗುಂಬ ಪೂಜೆ ನಡೆದು ದೇವರಿಗೆ ಎಡೆ ಕೊಡುವುದು. ಬಿಸಿ ಅನ್ನವನ್ನು ಕೈಯಿಂದಲೇ ತುಂಬುವುದು. ಬಳಿಕ ದೇವರಿಗೆ ಹೊಳೆಯಲ್ಲಿ ಸ್ನಾನ ಮಾಡಿಸಿ ವೈಭವದ ಉತ್ಸವದ ಮೂಲಕ ಮಾರಿಯಮ್ಮ ದೇವಾಲಯದ ಮುಂದೆ ಮೊದಲೇ ಹಾಕಲಾಗಿರುವ ಕೊಂಡದ ಮೇಲೆ ದೇವರು ನಡೆಯುವುದು.
ಇಲ್ಲಿ ಗಮನಿಸಬೇಕಾದ ಮತ್ತೊಂದು ವಿಶೇಷವೆಂದರೆ ಮಾರಿಯಮ್ಮ ದೇವಾಲಯ ಮತ್ತು ವೇಣುಗೋಪಾಲಸ್ವಾಮಿ ದೇವಾಲಯದ ಮಧ್ಯೆ ಮುಸ್ಲಿಮರ ಮಸೀದಿ ಇದೆ. ವೇಣುಗೋಪಾಲಸ್ವಾಮಿ ದೇವಾಲಯ ಮತ್ತು ಮಸೀದಿ ನಡುವೆ ಇರುವುದು ಒಂದೇ ಗೋಡೆ. ಆದರೆ ಅಷ್ಟೇ ಕೋಮು ಸಾಮರಸ್ಯವೂ ಇದೆ. ಕೊಂಡ ಹಾಯುವುದೂ ಕೂಡ ಮಸೀದಿ ಮುಂದೆಯೇ ನಡೆಯುತ್ತದೆ. ಈ ಸಂದರ್ಭದಲ್ಲಿ ಮುಸ್ಲಿಮರೂ ಕೊಂಡೋತ್ಸವ ಸಂದರ್ಭದಲ್ಲಿ ಹಾಜರಿದ್ದು ಸಂಭ್ರಮಪಡುತ್ತಾರೆ. ಅಂಥದ್ದೊಂದು ವಿಶಿಷ್ಟ ಹಬ್ಬ ಗುರುವಾರ ವಿಜೃಂಭಣೆಯಿಂದ ನಡೆಯಿತು.
-
Gold Rate: ಆಭರಣ ಪ್ರಿಯರ ಗಮನಕ್ಕೆ; ಮಾರುಕಟ್ಟೆಯಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ ಗೊತ್ತಾ? ಇಲ್ಲಿದೆ ಮಾಹಿತಿ -
ಮಕ್ಕಳನ್ನ ಫ್ಯಾಕ್ಟರಿಯಂತೆ ಹೆರುತ್ತಾರೆ, ಪೋಷಿಸುವ ತಾಕತ್ತಿದ್ರೆ ಮಾತ್ರ ಮಕ್ಕಳು ಮಾಡ್ಕೊಳ್ಳಿ: ನಟಿ ವರಲಕ್ಷ್ಮಿ ಶರತ್ಕುಮಾರ್ -
Viral Video: ಶಾಲಾ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರ ಟವಲ್ ಡ್ಯಾನ್ಸ್: ಚರ್ಚೆ ಹುಟ್ಟುಹಾಕಿದ ವೈರಲ್ ವಿಡಿಯೋ -
Viral Video: ಪೋಷಕರಿಗೆ ಹೊಸ ಕಾರು ಗಿಫ್ಟ್ ಮಾಡಿದ ಹೆಣ್ಣುಮಕ್ಕಳು, ನೆಟ್ಟಿಗರ ಹೃದಯ ಗೆದ್ದ ಈ ವಿಡಿಯೋ -
Anushka Shetty Marriage: ಬೆಂಗಳೂರಿನ ಖ್ಯಾತ ಉದ್ಯಮಿ ಜೊತೆ ನಟಿ ಅನುಷ್ಕಾ ಶೆಟ್ಟಿ ಮದುವೆ, ಈ ವರ್ಷದಲ್ಲೇ ಮುಹೂರ್ತ: ವರದಿ -
1 ರೂಪಾಯಿಗೆ 1 ಲೀಟರ್ ಹಾಲು: ಫ್ಲಿಪ್ಕಾರ್ಟ್ ವಿರುದ್ಧ ಸಿಡಿದೆದ್ದ ಡಿ.ಕೆ. ಸುರೇಶ್; ಪ್ರಧಾನಿ ಮೋದಿಗೆ ದೂರು -
ಬಿಜೆಪಿಯಿಂದ ನಟ ವಿಜಯ್ಗೆ ಡಿಸಿಎಂ ಹುದ್ದೆ, 80 ಸೀಟುಗಳ ಆಫರ್; ತಮಿಳುನಾಡು ಚುನಾವಣೆಗೆ ಹೊಸ ಮೈತ್ರಿ ಲೆಕ್ಕಾಚಾರ -
Karnataka Weather: ಸಿಲಿಕಾನ್ ಸಿಟಿಯಲ್ಲಿ ಹೆಚ್ಚಿದ ತಾಪಮಾನ; ಕರಾವಳಿ, ಮಲೆನಾಡಿನಲ್ಲಿ ಇಂದು ಮಳೆಯಾಗುವ ಸಾಧ್ಯತೆ -
LPG New Rule: ಎಲ್ಪಿಜಿ ಹೊಸ ನಿಯಮ: ಪಿಎನ್ಜಿ ಸಂಪರ್ಕ ಇದ್ದರೆ ಇನ್ನು ಮುಂದೆ ಸಿಲಿಂಡರ್ ಸಿಗಲ್ಲ -
Government Employees: ಪಶ್ಚಿಮ ಬಂಗಾಳ ಸರ್ಕಾರಿ ನೌಕರರಿಗೆ ಸಿಎಂ ಮಮತಾ ಬ್ಯಾನರ್ಜಿ ಬಂಪರ್ ಕೊಡುಗೆ -
ರಾಜ್ಯದಲ್ಲಿ ಕಮರ್ಷಿಯಲ್ ಉದ್ದೇಶಕ್ಕೆ ಗೃಹಬಳಕೆ LPG ಸಿಲಿಂಡರ್ ಬಳಸಿದವರ ಮೇಲೆ ಅಧಿಕಾರಿಗಳ ಖಡಕ್ ದಾಳಿ -
ಬೆಂಗಳೂರು 2ನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ vs ಹೊಸೂರು ಏರ್ಪೋರ್ಟ್: ಯೋಜನೆ ಯಾವ ಹಂತದಲ್ಲಿದೆ












Click it and Unblock the Notifications