ಬಿಸಿಯೂಟದಲ್ಲಿ ಹಾವು, ಅದನ್ನು ತೆಗೆದು ಉಣಬಡಿಸಿದರು

ಸಾರಿನಲ್ಲಿ ಬಿದ್ದಿದ್ದ ಹಾವನ್ನು ತೆಗೆದು ಅದನ್ನೇ ಮಕ್ಕಳಿಗೆ ಉಣಬಡಿಸಿದ ಘಟನೆಯ ಬಗ್ಗೆ ತಿಳಿಯುತ್ತಿದ್ದಂತೆ ಜಿಲ್ಲಾ ಮಾಹಿತಿ ಅಧಿಕಾರಿ ಸ್ವತಃ ತಕ್ಷಣ ಶಾಲೆಗೆ ಭೇಟಿ ನೀಡಿದ್ದರು. ಮಕ್ಕಳನ್ನು ತಕ್ಷಣ ವೈದ್ಯಕೀಯ ತಪಾಸಣೆಗೆ ಒಳಪಡಿಸಲಾಗಿತ್ತು. ಯಾವುದೇ ಅಪಾಯವಿಲ್ಲದೆ ಮಕ್ಕಳು ಆರೋಗ್ಯವಾಗಿರುವುದನ್ನು ಖಾತ್ರಿ ಪಡಿಸಿಕೊಡು ಅವರು ಮರಳಿದ್ದರು ಎಂದು ತಿಳಿದುಬಂದಿದೆ.
ಈ ಮಧ್ಯೆ, 'ಸತ್ಯ ತಿಳಿದಿದ್ದರೂ ಅದನ್ನು ಮುಚ್ಚಿಟ್ಟು ಮಕ್ಕಳಿಗೆ ಊಟ ಬಡಿಸಿದವರ ವಿರುದ್ಧ ಕೂಡಲೇ ಕ್ರಮ ಕೈಗೊಳ್ಳಬೇಕು. ಇಡೀ ಘಟನೆ ಬಗ್ಗೆ ತನಿಖೆ ನಡೆಸಬೇಕು' ಎಂದು ಮಸೂರ್ ಗ್ರಾಮ ಪಂಚಾಯಿತಿಯ ಉಪಾಧ್ಯಕ್ಷ ರಾಮಚಂದ್ರಪ್ಪ ಜೋಗಿ ಅವರು ಶಿಕ್ಷಣ ಇಲಾಖೆ ಅಧಿಕಾರಿಗಳನ್ನು ಒತ್ತಾಯಿಸಿದ್ದಾರೆ. 'ಈಗಾಗಲೇ ಶಾಲಾ ಮುಖ್ಯೋಪಾಧ್ಯಾಯರಿಗೆ ಮೆಮೊ ಕಳಿಸಲಾಗಿದೆ. ಅಲ್ಲಿನ ಸಿಬ್ಬಂದಿಯನ್ನು ಕೂಡಲೇ ವರ್ಗಾಯಿಸುವಂತೆ ಸೂಚನೆ ನೀಡಲಾಗಿದೆ' ಎಂದು ಬಿಇಒ ಶಿವಣ್ಣಗೌಡ ಪಾಟೀಲ್ ಹೇಳಿದ್ದಾರೆ.












Click it and Unblock the Notifications