ಉತ್ತರ ಭಾರತ ಗಡಗಡ: ಎಚ್ಚರಿಕೆಯ ಗಂಟೆ?

ಮೊದಲಿಗೆ ಜಮ್ಮು ಕಾಶ್ಮೀರದ ಬೇಸಿಗೆ ಕಾಲದ ರಾಜಧಾನಿ ಶ್ರೀನಗರ ಸಣ್ಣಗೆ ನಡುಗಿದೆ. ಕಣಿವೆಯ ಇತರೆ ಭಾಗಗಳಲ್ಲೂ ಭೂಮಿ ಕಂಪಿಸಿದೆ. 3.19ರಲ್ಲಿ ಸಂಭವಿಸಿರುವ ಭೂಕಂಪದ ಪ್ರಮಾಣ ರಿಕ್ಟರ್ ಮಾಪಕದಲ್ಲಿ 5.4 ರಷ್ಟಿತ್ತು ಎಂದು ಸ್ಥಳೀಯ ಹವಾಮಾನ ಇಲಾಖೆಯ ನಿರ್ದೇಶಕ ಸೋನಮ್ ಲೋಟಸ್ ತಿಳಿಸಿದ್ದಾರೆ.
ಇದೇ ವೇಳೆ ರಾಜಸ್ಥಾನ, ದೆಹಲಿ, ನೋಯ್ಡಾ, ಹಿಮಾಚಲ ಪ್ರದೇಶಗಳಲ್ಲೂ ಭೂಮಿ ಗಡ ಗಡ ನಡುಗಿದೆ. ಉತ್ತರ ಪಾಕಿಸ್ತಾನದಲ್ಲಿ 6.1ರಷ್ಟು, ದೆಹಲಿಯಲ್ಲಿ 3.2ರಷ್ಟು ಭೂಕಂಪನ ದಾಖಲಾಗಿದೆ. ಸೋಮವಾರ ಭೂಕಂಪ ಸಂಭವಿಸಿರುವ ಬಹುತೇಕ ಕಡೆ ಹಲವು ಕಟ್ಟಡಗಳು ಬಿರುಕು ಬಿಟ್ಟಿವೆ. ವಸ್ತುಗಳು ಚೆಲ್ಲಾಪಿಲ್ಲಿಯಾಗಿದ್ದು, ಸ್ಥಳೀಯರು ಭೀತಿಯಿಂದ ಮನೆ ಬಿಟ್ಟು ಹೊರಬಂದ ಘಟನೆಗಳು ನಡೆದಿವೆ.












Click it and Unblock the Notifications