ಕೊಡಗಿನತ್ತ ಪ್ರವಾಸಿಗರು, ಅಭಿವೃದ್ಧಿ ಮಾತ್ರ ಸೊನ್ನೆ

ಈಗ ಪರೀಕ್ಷೆಯ ಸಮಯವಾಗಿರುವುದರಿಂದ ಮಕ್ಕಳಾದಿಯಾಗಿ ಕುಟುಂಬ ಸಮೇತವಾಗಿ ಪ್ರವಾಸಿಗರು ಬಾರದಿದ್ದರೂ ಜನ ತಂಡೋಪ ತಂಡವಾಗಿ ಆಗಮಿಸುತ್ತಿರುವುದು ಕಂಡು ಬರುತ್ತಿದೆ. ಸಾಮಾನ್ಯವಾಗಿ ದೂರದ ತಮಿಳುನಾಡು, ಕೇರಳ, ಆಂಧ್ರಪ್ರದೇಶವಲ್ಲದೆ, ಉತ್ತರ ಭಾರತದ ಕಡೆಯಿಂದಲೂ ಪ್ರವಾಸಿಗರು ಬರುತ್ತಿದ್ದಾರೆ.
ಬೈಲುಕುಪ್ಪೆಯ ಗೋಲ್ಡನ್ ಟೆಂಪಲ್, ಕುಶಾಲನಗರದ ಕಾವೇರಿ ನಿಸರ್ಗಧಾಮ, ದುಬಾರೆಗೆ ಭೇಟಿ ನೀಡುತ್ತಿದ್ದು ಈ ಪ್ರವಾಸಿ ತಾಣಗಳ ಬಳಿಯಿರುವ ಕೆಲವು ಹೋಂಸ್ಟೇಗಳಲ್ಲಿ ಬೀಡು ಬಿಡುತ್ತಿದ್ದಾರೆ. ಮಡಿಕೇರಿ ಹಾಗೂ ಭಾಗಮಂಡಲ, ತಲಕಾವೇರಿಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ವಿದೇಶಿ ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಿದ್ದಾರೆ.
ಅಭಿವೃದ್ಧಿ ನೆನೆಗುದಿಗೆ : ಕೊಡಗಿನ ವಾತಾವರಣ ಬೇಸಿಗೆಯಲ್ಲಿ ತಂಪಾಗಿರುವುದರಿಂದ ಪ್ರವಾಸಿಗರು ಇಲ್ಲಿ ಹೆಚ್ಚಿನ ಸಮಯ ಕಳೆಯಲು ಇಷ್ಟಪಡುತ್ತಾರೆ. ಜೊತೆಗೆ ಇಲ್ಲಿ ಪ್ರವಾಸಿಗರಿಗೆ ಮುದನೀಡುವಂತಹ ಹತ್ತಾರು ಪ್ರವಾಸಿ ತಾಣಗಳಿವೆ. ಅಭಿವೃದ್ಧಿಪಡಿಸಿದ್ದೇ ಆದಲ್ಲಿ ಕೊಡಗು ಕರ್ನಾಟಕದಲ್ಲಿಯೇ ಪ್ರಮುಖ ಪ್ರವಾಸಿತಾಣವಾಗುವುದರಲ್ಲಿ ಸಂಶಯವಿಲ್ಲ. ಆದರೆ ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಕೊಡಗೆಂದರೆ ಏಕೋ ಅಲರ್ಜಿ. ಹಾಗಾಗಿ ಪ್ರವಾಸೋದ್ಯಮಕ್ಕೆ ಪೂರಕವಾದ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿದೆ.
ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಬೇಕು ಎಂಬಂತಹ ಭರವಸೆಯ ಮಾತುಗಳು ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತವೆಯಾದರೂ ಅವು ಕೇವಲ ಭರವಸೆಯಾಗಿಯೇ ಉಳಿದಿವೆ. ಕೊಡಗಿನಲ್ಲಿ ಸುಮಾರು 145 ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಡವ ಪಾರಂಪರಿಕ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ಕಳೆದ ಆಗಸ್ಟ್ನಲ್ಲಿ ಆಡಳಿತಾತ್ಮಕವಾಗಿ ಮಂಜೂರಾತಿ ನೀಡಿದ್ದಲ್ಲದೆ, ಪ್ರಾರಂಭಿಕ 50.54 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿತ್ತು. ಆದರೆ ಕಾಮಗಾರಿ ಇನ್ನೂ ಪ್ರಾರಂಭವಾಗದಿರುವುದು ಹಾಗೂ ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳಾಗಲೀ, ಜಿಲ್ಲಾಡಳಿತವಾಗಲೀ ಸೊಲ್ಲೆತ್ತದಿರುವುದು ವಿಷಾದಕರ.
ಇನ್ನು ಜಿಲ್ಲೆಯಲ್ಲಿರುವ ಹಲವಾರು ಪ್ರವಾಸಿತಾಣಗಳ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆಯಾದರೂ ಅಭಿವೃದ್ಧಿ ಕಾರ್ಯಗಳು ಮಾತ್ರ ನಡೆದಿಲ್ಲ. ಇದನ್ನು ನಿರ್ವಹಿಸಬೇಕಾದ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯಲ್ಲಿದೆಯಾ ಎಂಬ ಸಂಶಯ ಕಾಡುತ್ತಿದೆ. ಪ್ರವಾಸೋದ್ಯಮ ಇಲಾಖೆಯ ಕಛೇರಿ ಮಡಿಕೇರಿಯಲ್ಲಿದೆಯಾದರೂ ಅಲ್ಲಿ ಅಧಿಕಾರಿ ಸೇರಿದಂತೆ ಸಿಬ್ಬಂದಿಯ ಕೊರತೆಯಿದ್ದು ಕೊಡಗಿನ ಪಾಲಿಗೆ ಈ ಕಚೇರಿ ಇದ್ದು ಇಲ್ಲದಂತಾಗಿದೆ. ಹೀಗಿರುವಾಗ ಈ ಕಛೇರಿಯಿಂದ ಪ್ರವಾಸಿಗರಿಗೆ ಅದೆಂತಹ ಮಾಹಿತಿ ಸಿಗಬಹುದು? ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ತಾನೆ ಹೇಗಾಗಲು ಸಾಧ್ಯ? ನೀವೇ ಊಹಿಸಿ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications