ಕೊಡಗಿನತ್ತ ಪ್ರವಾಸಿಗರು, ಅಭಿವೃದ್ಧಿ ಮಾತ್ರ ಸೊನ್ನೆ

ಈಗ ಪರೀಕ್ಷೆಯ ಸಮಯವಾಗಿರುವುದರಿಂದ ಮಕ್ಕಳಾದಿಯಾಗಿ ಕುಟುಂಬ ಸಮೇತವಾಗಿ ಪ್ರವಾಸಿಗರು ಬಾರದಿದ್ದರೂ ಜನ ತಂಡೋಪ ತಂಡವಾಗಿ ಆಗಮಿಸುತ್ತಿರುವುದು ಕಂಡು ಬರುತ್ತಿದೆ. ಸಾಮಾನ್ಯವಾಗಿ ದೂರದ ತಮಿಳುನಾಡು, ಕೇರಳ, ಆಂಧ್ರಪ್ರದೇಶವಲ್ಲದೆ, ಉತ್ತರ ಭಾರತದ ಕಡೆಯಿಂದಲೂ ಪ್ರವಾಸಿಗರು ಬರುತ್ತಿದ್ದಾರೆ.
ಬೈಲುಕುಪ್ಪೆಯ ಗೋಲ್ಡನ್ ಟೆಂಪಲ್, ಕುಶಾಲನಗರದ ಕಾವೇರಿ ನಿಸರ್ಗಧಾಮ, ದುಬಾರೆಗೆ ಭೇಟಿ ನೀಡುತ್ತಿದ್ದು ಈ ಪ್ರವಾಸಿ ತಾಣಗಳ ಬಳಿಯಿರುವ ಕೆಲವು ಹೋಂಸ್ಟೇಗಳಲ್ಲಿ ಬೀಡು ಬಿಡುತ್ತಿದ್ದಾರೆ. ಮಡಿಕೇರಿ ಹಾಗೂ ಭಾಗಮಂಡಲ, ತಲಕಾವೇರಿಯಲ್ಲಿಯೂ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಕಾಣಿಸಿಕೊಳ್ಳುತ್ತಿದ್ದಾರೆ. ಇತ್ತೀಚೆಗೆ ವಿದೇಶಿ ಪ್ರವಾಸಿಗರು ಕೂಡ ಹೆಚ್ಚಿನ ಸಂಖ್ಯೆಯಲ್ಲಿ ಇಲ್ಲಿಗೆ ಬರುತ್ತಿದ್ದಾರೆ.
ಅಭಿವೃದ್ಧಿ ನೆನೆಗುದಿಗೆ : ಕೊಡಗಿನ ವಾತಾವರಣ ಬೇಸಿಗೆಯಲ್ಲಿ ತಂಪಾಗಿರುವುದರಿಂದ ಪ್ರವಾಸಿಗರು ಇಲ್ಲಿ ಹೆಚ್ಚಿನ ಸಮಯ ಕಳೆಯಲು ಇಷ್ಟಪಡುತ್ತಾರೆ. ಜೊತೆಗೆ ಇಲ್ಲಿ ಪ್ರವಾಸಿಗರಿಗೆ ಮುದನೀಡುವಂತಹ ಹತ್ತಾರು ಪ್ರವಾಸಿ ತಾಣಗಳಿವೆ. ಅಭಿವೃದ್ಧಿಪಡಿಸಿದ್ದೇ ಆದಲ್ಲಿ ಕೊಡಗು ಕರ್ನಾಟಕದಲ್ಲಿಯೇ ಪ್ರಮುಖ ಪ್ರವಾಸಿತಾಣವಾಗುವುದರಲ್ಲಿ ಸಂಶಯವಿಲ್ಲ. ಆದರೆ ಪ್ರವಾಸೋದ್ಯಮ ಇಲಾಖೆಗೆ ಮಾತ್ರ ಕೊಡಗೆಂದರೆ ಏಕೋ ಅಲರ್ಜಿ. ಹಾಗಾಗಿ ಪ್ರವಾಸೋದ್ಯಮಕ್ಕೆ ಪೂರಕವಾದ ಅಭಿವೃದ್ಧಿ ಯೋಜನೆಗಳು ಅನುಷ್ಠಾನಗೊಳ್ಳದೆ ನೆನೆಗುದಿಗೆ ಬಿದ್ದಿದೆ.
ಕೊಡಗಿನಲ್ಲಿ ಪ್ರವಾಸೋದ್ಯಮವನ್ನು ಅಭಿವೃದ್ಧಿಗೊಳಿಸಬೇಕು ಎಂಬಂತಹ ಭರವಸೆಯ ಮಾತುಗಳು ಕಳೆದ ಹಲವು ವರ್ಷಗಳಿಂದ ಕೇಳಿ ಬರುತ್ತವೆಯಾದರೂ ಅವು ಕೇವಲ ಭರವಸೆಯಾಗಿಯೇ ಉಳಿದಿವೆ. ಕೊಡಗಿನಲ್ಲಿ ಸುಮಾರು 145 ಲಕ್ಷ ರೂಪಾಯಿ ವೆಚ್ಚದಲ್ಲಿ ಕೊಡವ ಪಾರಂಪರಿಕ ಕೇಂದ್ರ ನಿರ್ಮಾಣಕ್ಕೆ ಸರ್ಕಾರ ಕಳೆದ ಆಗಸ್ಟ್ನಲ್ಲಿ ಆಡಳಿತಾತ್ಮಕವಾಗಿ ಮಂಜೂರಾತಿ ನೀಡಿದ್ದಲ್ಲದೆ, ಪ್ರಾರಂಭಿಕ 50.54 ಲಕ್ಷ ರೂ.ಗಳನ್ನು ಬಿಡುಗಡೆ ಮಾಡಿ ಕಾಮಗಾರಿ ನಿರ್ವಹಣೆಯನ್ನು ಲೋಕೋಪಯೋಗಿ ಇಲಾಖೆಗೆ ವಹಿಸಿತ್ತು. ಆದರೆ ಕಾಮಗಾರಿ ಇನ್ನೂ ಪ್ರಾರಂಭವಾಗದಿರುವುದು ಹಾಗೂ ಈ ಬಗ್ಗೆ ಸಂಬಂಧಿಸಿದ ಜನಪ್ರತಿನಿಧಿಗಳಾಗಲೀ, ಜಿಲ್ಲಾಡಳಿತವಾಗಲೀ ಸೊಲ್ಲೆತ್ತದಿರುವುದು ವಿಷಾದಕರ.
ಇನ್ನು ಜಿಲ್ಲೆಯಲ್ಲಿರುವ ಹಲವಾರು ಪ್ರವಾಸಿತಾಣಗಳ ಅಭಿವೃದ್ಧಿಗೆ ಲಕ್ಷಾಂತರ ರೂಪಾಯಿಗಳನ್ನು ಬಿಡುಗಡೆ ಮಾಡಲಾಗಿದೆಯಾದರೂ ಅಭಿವೃದ್ಧಿ ಕಾರ್ಯಗಳು ಮಾತ್ರ ನಡೆದಿಲ್ಲ. ಇದನ್ನು ನಿರ್ವಹಿಸಬೇಕಾದ ಪ್ರವಾಸೋದ್ಯಮ ಇಲಾಖೆ ಜಿಲ್ಲೆಯಲ್ಲಿದೆಯಾ ಎಂಬ ಸಂಶಯ ಕಾಡುತ್ತಿದೆ. ಪ್ರವಾಸೋದ್ಯಮ ಇಲಾಖೆಯ ಕಛೇರಿ ಮಡಿಕೇರಿಯಲ್ಲಿದೆಯಾದರೂ ಅಲ್ಲಿ ಅಧಿಕಾರಿ ಸೇರಿದಂತೆ ಸಿಬ್ಬಂದಿಯ ಕೊರತೆಯಿದ್ದು ಕೊಡಗಿನ ಪಾಲಿಗೆ ಈ ಕಚೇರಿ ಇದ್ದು ಇಲ್ಲದಂತಾಗಿದೆ. ಹೀಗಿರುವಾಗ ಈ ಕಛೇರಿಯಿಂದ ಪ್ರವಾಸಿಗರಿಗೆ ಅದೆಂತಹ ಮಾಹಿತಿ ಸಿಗಬಹುದು? ಜಿಲ್ಲೆಯಲ್ಲಿ ಪ್ರವಾಸೋದ್ಯಮದ ಅಭಿವೃದ್ಧಿ ತಾನೆ ಹೇಗಾಗಲು ಸಾಧ್ಯ? ನೀವೇ ಊಹಿಸಿ.
-
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
March 29 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger












Click it and Unblock the Notifications