ಏನ್ ಕುಮಾರಣ್ಣ ಯಾಕ್ ಹಿಂಗ್ ಮಾಡ್ಬಿಟ್ರಿ?

ಕುಮಾರಸ್ವಾಮಿ ಒಮ್ಮೆ ಹಾಗೆ ಇನ್ನೊಮ್ಮೆ ಹೀಗೆ ಹೇಳಿದರೂ, ಚುನಾವಣೆ ದಿನ ಘೋಷಣೆಯಾದ ದಿನದಂದೇ ಸಾಮಾನ್ಯ ಅಭ್ಯರ್ಥಿಯನ್ನು ನಿಲ್ಲಿಸಲು ಎಚ್ ಡಿ ದೇವೇಗೌಡರು ನಿರ್ಧರಿಸಿಯಾಗಿತ್ತು. ಮೊದಲಿಗೆ ಮುಸ್ಲಿಂ ಸಮುದಾಯದ ಅಭ್ಯರ್ಥಿಯನ್ನು ನಿಲ್ಲಿಸಲು ಮನಸ್ಸು ಮಾಡಲಾಗಿತ್ತಾದರೂ ನಂತರ ಪಕ್ಷದ ಹಿರಿಯ ಕಾರ್ಯಕರ್ತ ಸಿಂಲಿಂ ನಾಗರಾಜ ಅವರಿಗೆ ಆ ಭಾಗ್ಯ ದೊರಕಿದೆ. ಈ ವಿಷಯ ಎಲ್ಲಾ ಕುಮಾರಸ್ವಾಮಿಗೆ ಗೊತ್ತಿದ್ದರೂ, ಅಭಿಮಾನಗಳ ಒತ್ತಡಕ್ಕೆ ಮಣಿದು, ಚುನಾವಣೆಗೆ ಸ್ಪರ್ಧಿಸುವುದಾಗಿ ಘೋಷಿಸಿದರು. ಇದೇ ರೀತಿ ಜಗಳೂರಿನಲ್ಲಿ ಹುಚ್ಚವನಹಳ್ಳಿ ಮಂಜುನಾಥ ಹಾಗೂ ಬಂಗಾರಪೇಟೆಯಲ್ಲಿ ವೆಂಕಟೇಶಪ್ಪ ಸ್ಪರ್ಧಿಸುವುದು ಖಚಿತವಾಗಿದೆ.
ಹಿಂದೊಮ್ಮೆ ಚನ್ನಪಟ್ಟಣದ ಕಾರ್ಯಕರ್ತರ ಸಭೆಯಲ್ಲಿ ಗೊಳೋ ಎಂದು ಕಣ್ಣೀರು ಸುರಿಸಿದ್ದ, ಕುಮಾರಣ್ಣಗೆ ಪಕ್ಷದ ಕಾರ್ಯಕರ್ತರಲ್ಲಿ ಮೂಡಿದ್ದ ಒಡಕು ಸರಿ ಪಡಿಸಲು ಉಪ ಚುನಾವಣೆ ಸೂಕ್ತ ವೇದಿಕೆಯಾಗಿ ಪರಿಣಮಿಸಿತು. ಮೊದಲೇ ಸಾಮಾನ್ಯ ಕಾರ್ಯಕರ್ತನನ್ನು ನಿಲ್ಲಿಸುವುದಾಗಿ ಘೋಷಿಸಿದ್ದರೆ, ಈ ಪಾಟಿ ಜೋಶ್ ಉಂಟಾಗಲು ಸಾಧ್ಯವಿರಲಿಲ್ಲ. ಅಪ್ಪನ ಮಾತು ಮೀರಲು ಸಾಧ್ಯವಿಲ್ಲ ಎನ್ನುವ ಕುಮಾರಸ್ವಾಮಿಗೆ ಅಸಲಿಗೆ ಉಪ ಚುನಾವಣೆಯಲ್ಲಿ ಸ್ಪರ್ಧಿಸುವ ಮನಸ್ಸೇ ಇಲ್ಲ. ಹಳ್ಳಿಗಿಂತ ದಿಲ್ಲಿಯೇ ವಾಸಿ ಎನ್ನುವ ಮನಸ್ಥಿತಿಯಲ್ಲಿದ್ದಾರೆ.
ಕುಟುಂಬ ಕಲಹ ತಪ್ಪಿಸಲು ಈ ಕ್ರಮ? : ಚನ್ನಪಟ್ಟಣದಿಂದ ಕುಮಾರಸ್ವಾಮಿ ಸ್ಪರ್ಧಿಸಿ, ವಿಧಾನಸಭೆಗೆ ಆಯ್ಕೆಯಾದರೆ ಗೊಂದಲ ಉಂಟಾಗುವ ಸಾಧ್ಯತೆಯಿತ್ತು. ಜೆಡಿಎಸ್ ಕಾರ್ಯಕರ್ತರು ಎಚ್ ಡಿ ರೇವಣ್ಣ, ಕುಮಾರಸ್ವಾಮಿ ಇಬ್ಬರಲ್ಲಿ ಯಾರನ್ನು ಬೆಂಬಲಿಸಬೇಕು ಎಂದು ತಿಳಿಯದೇ ಗೊಂದಲವಾಗುತ್ತಿತ್ತು. ಮಧುಗಿರಿ ಶಾಸಕ ಅನಿತಾ ಕುಮಾರಸ್ವಾಮಿ, ರೇವಣ್ಣ ಅವರ ಧರ್ಮಪತ್ನಿ ಭವಾನಿ ಅವರ ಹೆಸರು ಕೇಳಿ ಬಂದಿತ್ತು. ಅನಿತಾ ಮೇಡಂ ಕಸ್ತೂರಿ ಚಾನೆಲ್ ರಿಪೇರಿ ಕೆಲ್ಸದಲ್ಲಿ ನಿರತರಾಗಿದ್ದಾರೆ. ಭವಾನಿ ಅವರು ಇನ್ನೆರಡು ವರ್ಷ ರಾಜಕೀಯಕ್ಕೆ ಇಳಿಯಲಾರೆ ಎಂದಿದ್ದಾರೆ. ಕೊನೆಗೆ ದೇವೇಗೌಡರ ಮಾತಿನ ಪ್ರಕಾರವೇ ಎಲ್ಲಾ ನಡೆದಿದೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications