ಮತ್ತೆ ಗಡಗಡ: ಮ್ಯಾನ್ಮಾರ್ ಭೂಕಂಪಕ್ಕೆ 100 ಬಲಿ

ಥಾಯ್ಲೆಂಡ್ ಗಡಿಯಲ್ಲಿ ಈ ಕಂಪನ ಕಂಡುಬಂದಿದ್ದು, ಅನೇಕ ಭಾಗಗಳು ಸಂಪರ್ಕ ಕಡಿದುಕೊಂಡಿವೆ. ನೂರಾರು ಮನೆಗಳು ನೆಲಕಚ್ಚಿವೆ ಎಂದು ಅಧಿಕೃತ ಮೂಲಗಳು ಶುಕ್ರವಾರ ಹೇಳಿವೆ. ಟರ್ಲೆ, ಮೈನ್ ಲಿನ್ ಮತ್ತು ಟಸಿಲೆಕ್ ಪಟ್ಟಣಗಳಲ್ಲಿಯೂ ಭೂಕಂಪ ಸಂಭವಿಸಿದೆ. ಭೂಕಂಪ ಸಂಭವಿಸಿದ ಇನ್ನೂ ಕೆಲವು ಭಾಗಗಳನ್ನು ತಲುಪಲು ಅಧಿಕಾರಿಗಳಿಗೆ ಸಾಧ್ಯವಾಗಿಲ್ಲ. ಶುಕ್ರಾವಾರ ಬೆಳಗ್ಗೆಯೂ ಈ ಭಾಗಗಳಲ್ಲಿ ಮರುಕಂಪನಗಳಾಗಿವೆ. ಚಾರಿತ್ರಿಕ ಪಟ್ಟಣವಾದ ಚಿಯಾಂಗ್ ಶೇನ್-ನಲ್ಲಿ ನಾಲ್ಕು ಇತಿಹಾಸ ಪ್ರಸಿದ್ಧ ಪಗೋಡಾಗಳು ಬಿರುಕು ಬಿಟ್ಟಿವೆ.
ಜನ ಭಯಭೀರಾಗಿದ್ದಾರೆ. ಅನೇಕ ಕಟ್ಟಡಗಳು ಕುಸಿದು ಬಿದ್ದಿವೆ. ಆದರೂ ಮಹಾದುರಂತ ಎನ್ನುವಷ್ಟು ಭೀಕರವಾಗಿಯೇನೂ ಭೂಮಿ ಕಂಪಿಸಿಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ. ಥಾಯ್ಲೆಂಡ್-ಲಾವೋಸ್ ಗಡಿಯಲ್ಲಿ ಗೋಲ್ಡನ್ ಟ್ರಯಾಂಗಲ್ ಬಳಿಯಿರುವ ಬೆಟ್ಟ ಪ್ರದೇಶದಲ್ಲಿ ಹೆಚ್ಚಿನ ಅನಾಹುತ ಸಂಭವಿಸಿದೆ. 7,000 ಹೆಚ್ಚು ಮಕ್ಕಳು ಇಲ್ಲಿನ ಶಿಕ್ಷಣ ಸಂಸ್ಥೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಅವರ ರಕ್ಷಣೆಗೆ ಧಾವಿಸಲು ಪರಿಹಾರ ತಂಡಗಳಿಗೆ ಇನ್ನೂ ಸಾಧ್ಯವಾಗಿಲ್ಲ. ಪ್ರಮುಖ ವಾಣಿಜ್ಯ ಕೇಂದ್ರವೂ ಆದ ಈ ಭಾಗದಲ್ಲಿ ನಷ್ಟದ ಪ್ರಮಾಣ ತಕ್ಷಣಕ್ಕೆ ತಿಳಿದುಬಂದಿಲ್ಲ.
ಮ್ಯಾನ್ಮಾರ್ ಹಿಂದೂ ಸಾಗರದಿಂದ ತುಂಬಾ ದೂರವಿರುವುದರಿಂದ ಸದ್ಯಕ್ಕೆ ಸುನಾಮಿ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ಹೇಳಿದೆ. ಮತ್ತೊಂದು ಗಮನಾರ್ಹ ಸಂಗತಿಯೆಂದರೆ ಮ್ಯಾನ್ಮಾರ್ ಮತ್ತು ಇತ್ತೀಚೆಗಷ್ಟೇ ಭಾರಿ ಸುನಾಮಿ ಕಂಡಿರುವ ಜಪಾನ್ ಭೌಗೋಳಿಕವಾಗಿ ಪ್ರತ್ಯೇಕ ಭೂಕಂಪನ ವಲಯಗಳಲ್ಲಿವೆ.
-
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
ನಮ್ಮ ಮೆಟ್ರೋ-ಬಾಗ್ಮನೆ ಗ್ರೂಪ್ ಮಧ್ಯೆ ₹40 ಕೋಟಿ ಒಪ್ಪಂದ: ಮೆಟ್ರೋ ನಿಲ್ದಾಣಕ್ಕೆ 'ಬಾಗ್ಮನೆ' ಹೆಸರು -
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
ದಾವಣಗೆರೆಯಲ್ಲಿ ಹೈಡ್ರಾಮಾ: ಪ್ರದೀಪ್ ಈಶ್ವರ್ ಪ್ರಚಾರದ ವೇಳೆ ಚಪ್ಪಲಿ, ಪೊರಕೆ ತೋರಿಸಿದ ಬಿಜೆಪಿ ಕಾರ್ಯಕರ್ತರು -
ಬೆಂಗಳೂರಿನ ಫುಟ್ಪಾತ್ಗಳ ದುರಸ್ತಿಗೆ ಶ್ರಮಿಸಿದ್ದ ಕೆನಡಾ ಪ್ರಜೆ ಈಗ ಮಿಜೋರಾಂಗೆ ಶಿಫ್ಟ್: 'ಬೆಂಗಳೂರಿಗೆ ವಿದಾಯ' ಎಂದ Vlogger -
Vijay Mallya: ವಿಜಯ್ ಮಲ್ಯ ಆರ್ಸಿಬಿಗೆ ಇಂಗ್ಲೀಷ್ ಪದಗಳಲ್ಲಿ ಕನ್ನಡದ ವಿಶೇಷ ಸಂದೇಶ: ಭಾರೀ ವೈರಲ್ -
ಸಕಲೇಶಪುರ: ಬೆಟ್ಟದ ಭೈರವೇಶ್ವರ ದೇವಸ್ಥಾನದಲ್ಲಿ ಪ್ರೀ-ವೆಡ್ಡಿಂಗ್ ಶೂಟ್ ವೇಳೆ ಸ್ಥಳೀಯರಿಂದ ಹಲ್ಲೆ -
ಐಪಿಎಲ್ 2026: ಆರ್ಸಿಬಿ-ಎಸ್ಆರ್ಎಚ್ ಪಂದ್ಯದ ಸಮಯ, ನೇರಪ್ರಸಾರ, ಸಂಪೂರ್ಣ ತಂಡಗಳ ವಿವರ ತಿಳಿಯಿರಿ -
March 28 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Viral ಆಯ್ತು ಅಕೌಂಟ್ಸ್ ಪ್ರಶ್ನೆಪತ್ರಿಕೆ: ಪರೀಕ್ಷೆಯಲ್ಲೂ ಮಿಂಚಿದ 'ಧುರಂಧರ್: ದಿ ರಿವೆಂಜ್' ಸಿನಿಮಾದ ಪಾತ್ರಗಳು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ












Click it and Unblock the Notifications