ಕಾಲೇಜು ಅಂದ್ರೆ ಬುಕ್ಕು, ಜೀನ್ಸು ಅಷ್ಟೇ ಅಲ್ಲ!

ಬಳ್ಳಾರಿಯ ಶ್ರೀಮತಿ ಸರಳಾದೇವಿ ಸತೀಶ್ಚಂದ್ರ ಅಗರವಾಲ್ ಸರ್ಕಾರಿ ಪ್ರಥಮದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗದ ವಿದ್ಯಾರ್ಥಿ ವಿದ್ಯಾರ್ಥಿನಿಯರೇ ಈ ಹೊಸ ಯತ್ನಕ್ಕೆ ನಾಂದಿ ಹಾಡಿದವರು. ವಿದ್ಯಾರ್ಥಿ ಜೀವನವನ್ನು ರೂಪಿಸುವಲ್ಲಿ ಮಾತ್ರವಲ್ಲ ಸಮಾಜದ ಓರೆಕೋರೆಗಳನ್ನು ಕಣ್ಣಾರೆ ಕಂಡು ಅವಕ್ಕೆ ಪರಿಹಾರ ಕಂಡುಕೊಳ್ಳುವಲ್ಲಿಯೂ ಇಂಥ ಅನುಭವಗಳು ಸಹಕಾರಿಯಾಗುತ್ತವೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಕಾಲೇಜಿನ ವಿದ್ಯಾರ್ಥಿಗಳಿಗೆ ಹೃತ್ಪೂರ್ವಕ ಅಭಿನಂದನೆಗಳು.
ಕಾಲೇಜಿನ ಸಮಾಜಶಾಸ್ತ್ರ ವಿಭಾಗದಲ್ಲಿ 80ಕ್ಕೂ ಹೆಚ್ಚಿನ ವಿದ್ಯಾರ್ಥಿಗಳಿದ್ದಾರೆ. ದೇಶದ ಏಳ್ಗೆಯನ್ನು ತೀವ್ರವಾಗಿ ಕಾಡುತ್ತಿರುವ ಭಿಕ್ಷಾಟನೆ, ಅಭಿವೃದ್ಧಿಯನ್ನು ಸಾಕಷ್ಟು ಪೀಡಿಸುತ್ತಿರುವ ನಿರುದ್ಯೋಗ, ಅನಾರೋಗ್ಯ, ಅನಕ್ಷರತೆ, ಮೌಢ್ಯತೆಗಳು ವಿದ್ಯಾರ್ಥಿಗಳ ಮನಸ್ಸು ತಟ್ಟಿವೆ. ಈ ನಿಟ್ಟಿನಲ್ಲಿ ವಿದ್ಯಾರ್ಥಿಗಳು ಸಮಾಜ ಕಲ್ಯಾಣ ಇಲಾಖೆಯ ನಿರಾಶ್ರಿತರ ಪರಿಹಾರ ಕೇಂದ್ರಕ್ಕೆ ಭೇಟಿ ನೀಡಿ ಸಾಕಷ್ಟು ವಿಷಯ ಸಂಗ್ರಹಣೆ ಮಾಡಿದ್ದಾರೆ.
ನಿರಾಶ್ರಿತರ ಕೇಂದ್ರ(ಭಿಕ್ಷಾಟನಾ ನಿರ್ಮೂಲನಾ ಕೇಂದ್ರ)ಕ್ಕೆ ಸೇರಿದವರನ್ನು ಕಂಡಾಗ ವಿದ್ಯಾರ್ಥಿಗಳಿಗೆ ಆಶ್ಚರ್ಯ ಕಾದಿತ್ತು. ಸರ್ಕಾರ ಇವರಿಗೆ ನೀಡುತ್ತಿರುವ ಸೌಲಭ್ಯ, ಕಲ್ಪಿಸುತ್ತಿರುವ ಪುನರ್ವಸತಿ ಯೋಜನೆಗಳು, ದೈನಂದಿನ ಆಹಾರ, ಖರ್ಚು, ಸೌಲಭ್ಯಗಳು, ಸ್ವಯಂ ಉದ್ಯೋಗ ತರಬೇತಿ, ಸಾಲ ಸೌಲಭ್ಯ, ಆರೋಗ್ಯ ತಪಾಸಣೆ, ನೈರ್ಮಲ್ಯಗಳ ಕುರಿತು ಮಾಹಿತಿ ಸಂಗ್ರಹಿಸಿದರು. ಅಲ್ಲದೇ, ಭಿಕ್ಷಾಟನೆಗೆ ಕಾರಣವಾಗಿರುವ ಮುಖ್ಯ ಕಾರಣಗಳನ್ನು ಪಟ್ಟಿ ಮಾಡಿಕೊಂಡರು. ವಾರ್ಡನ್ ಈರಣ್ಣ, ವಿದ್ಯಾರ್ಥಿಗಳ ಬಹುತೇಕ ಪ್ರಶ್ನೆಗಳಿಗೆ ಸರ್ಕಾರದ ಮುಖವಾಣಿಯಾಗಿಯೇ ಉತ್ತರಗಳನ್ನು ನೀಡಿದನು.
ಬೆಳಗಲ್ಲು ರಸ್ತೆಯಲ್ಲಿ ಇರುವ ಶ್ರೀಮತಿ ರುಕ್ಮಿಣಮ್ಮ ಚೆಂಗಾರೆಡ್ಡಿ ಸ್ಮಾರಕ ವೃದ್ಧಾಶ್ರಮಕ್ಕೆ ಭೇಟಿ ನೀಡಿ ಅವರು, ವೃದ್ಧಾಪ್ಯದ ಒಂಟಿತನ, ಮಕ್ಕಳು, ಮೊಮ್ಮಕ್ಕಳು, ಸೊಸೆಯರ ಬಾಧೆ, ಅವರಿಗಾಗಿ ಹಿರಿಯ ಜೀವಗಳು ಈಗಲೂ ಕಾಣುತ್ತಿರುವ ಹಸಿಹಸಿ ಕನಸುಗಳು, ತಾವು ಕಂಡ ಕನಸುಗಳು ಸಾಕಾರಗೊಳ್ಳದೇ ಚಡಪಡಿಸುವ ಅವರ ಮಾತುಗಳು, ಮನಸ್ಸಿನಾಳದ ಬಾಧೆ, ಪದೇ ಪದೇ ಕೈಗೊಡುವ ಆರೋಗ್ಯ, ಎಡಬಿಡದೇ ಬಾಧಿಸುವ ಮಧುಮೇಹ, ರಕ್ತದೊತ್ತಡ, ಕೌಟುಂಬಿಕ ಒತ್ತಡಗಳು, ಧಾರ್ಮಿಕ ಸೆಳೆತ ಇನ್ನಿತರೆಗಳ ಮಾಹಿತಿ ಪಡೆದರು. ಹಿರಿಯ ಜೀವಗಳ ತಳಮಳ ಕಂಡು ಹಲವರಿಗೆ ಅಯ್ಯೋ ಪಾಪ ಅನ್ನಿಸಿದ್ದೂ ಸುಳ್ಳಲ್ಲ.
ಶ್ರೀ ಚೆಂಗಾರೆಡ್ಡಿ ಬುದ್ಧಿಮಾಂದ್ಯ ಮಕ್ಕಳ ಶಾಲೆಗೂ ಭೇಟಿ ನೀಡಿದ ವಿದ್ಯಾರ್ಥಿಗಳು, ಬುದ್ಧಮಾಂದ್ಯ, ಅಂಗವಿಕಲ, ಅನಾಥ, ವಿಶಿಷ್ಟ ಮಕ್ಕಳ ಜೊತೆ ಕೆಲ ಕಾಲ ಇದ್ದು, ಅವರನ್ನು ಪೋಷಿಸಿ - ಬೆಳೆಸುವ ಜವಾಬ್ದಾರಿ, ಹೊಣೆಗಾರಿಕೆ, ಇರಬೇಕಾದ ತಾಳ್ಮೆಗಳನ್ನು ತಿಳಿದುಕೊಂಡರು. ಈ ರೀತಿ ವಿದ್ಯಾರ್ಥಿಗಳಿಗೆ ಕನಸು ತುಂಬಿ ಅಧ್ಯಯನ ಮಾಡಲು ಪ್ರೇರೇಪಿಸಿದ್ದು ಕಾಲೇಜಿನ ಉಪನ್ಯಾಸಕ ಡಾ. ಇಸ್ಮಾಯಿಲ್ ಮಕಂದಾರ್. ಇವರ ಜೊತೆಯಲ್ಲಿ ವಿದ್ಯಾರ್ಥಿಗಳಿಗೆ ನೆರವಾಗಲಿಕ್ಕಾಗಿ ಕೆಲ ಬೋಧಕರು ಕೂಡ ಜೊತೆಗೂಡಿದ್ದು ವಿಶೇಷವಾಗಿತ್ತು.
-
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
ಕರ್ನಾಟಕ PGCET 2026 ಅಧಿಸೂಚನೆ ಪ್ರಕಟ: ಎಂಬಿಎ ಸೇರಿ ವಿವಿಧ ಸ್ನಾತಕೋತ್ತರ ಪದವಿ ಪ್ರವೇಶಾತಿಗೆ ಮಾರ್ಚ್ 23 ರಿಂದ ಅರ್ಜಿ ಆಹ್ವಾನ -
ವಿಶ್ವಮಾತೆ ಎನ್ನುತ್ತಾ ಶ್ರೀಚಾಮುಂಡೇಶ್ವರಿಯ ಕನ್ನಡ ಹಾಡು ಹಂಚಿಕೊಂಡ ಪ್ರಧಾನಿ ಮೋದಿ -
ಮಾರ್ಚ್ 21ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications