ಕೇರಳ ಚುನಾವಣೆ: ಜೈಲಿಂದಲೇ ಮದನಿ ಕಾರುಬಾರು

ಚುನಾವಣೆಯಲ್ಲಿ ಯಾರಿಗೆ ಟಿಕೆಟ್ ನೀಡಬೇಕು? ಪ್ರಚಾರ ಹೇಗೆ ಮಾಡಬೇಕು? ಬಿ ಫಾರಂ 'ರಾಜಕೀಯ' ಮಾಡುವುದು ಹೇಗೆ? ಕೊನೆಗೆ ಚುನಾವಣೆಯಲ್ಲಿ ನಿರಾಯಾಸವಾಗಿ ಗೆಲ್ಲೋದು ಹೇಗೆ ಎಂಬೆಲ್ಲ ರಾಜಕೀಯ ತಂತ್ರಗಾರಿಕೆಯನ್ನು ಜೈಲಿನಲ್ಲಿದ್ದುಕೊಂಡೇ ಹೆಣೆಯುತ್ತಿದ್ದಾನೆ. ಎಲ್ಲವೂ ಅವನಿಚ್ಛೆಯಂತೆ ನಡೆಯುತ್ತಿದೆಯಾದರೂ ಅವನ ಮೊಬೈಲ್ ಕೈಕೊಟ್ಟಿದೆ. ಪಾತಕಿಗೆ ಜೈಲಿನಲ್ಲಿ ಮೊಬೈಲ್ ಸೇವೆ ಇಲ್ಲವಾಗಿದೆ.
ಈ ಹಿಂದೆ ಎರಡು ಬಾರಿ ಮದನಿ ಜೈಲಿಂದಲೇ ಪ್ರಚಾರ ನಡೆಸಿದ್ದಾನೆ. ಒಮ್ಮೆ ಪ್ರತ್ಯಕ್ಷವಾಗಿ ಪ್ರಚಾರ ನಡೆಸಿದ್ದಾನೆ. ಆದರೆ ಈ ಬಾರಿ ಬೆಂಗಳೂರು ಜೈಲೇ ಮದನಿ ಸಾರಥ್ಯದ ಪೀಪಲ್ಸ್ ಡೆಮಾಕ್ರೆಟಿಕ್ ಪಾರ್ಟಿ (ಪಿಡಿಪಿ) ಪಕ್ಷದ ಚುನಾವಣೆ ಆಟಕ್ಕೆ ಪ್ರಧಾನ ಕಚೇರಿ. ಕೇರಳದಿಂದ ದಿನವೂ ಅವನ ಕಟ್ಟಾಳುಗಳು ಬಂದು ಹೋಗುತ್ತಿದ್ದಾರೆ. ಸುಮಾರು ಒಂದು ತಿಂಗಳಿಂದ ಈ ಕಾರುಬಾರು ಅಬಾಧಿತವಾಗಿ ನಡೆದಿದೆ. ಏಪ್ರಿಲ್ 13ರಂದು ಚುನಾವಣೆಯಲ್ಲಿ ಪಿಡಿಪಿ ಅಭ್ಯರ್ಥಿಗಳು 25 ಕ್ಷೇತ್ರಗಳಲ್ಲಿ ಸ್ಪರ್ಧಿಸುತ್ತಿದ್ದಾರೆ. ಜತೆಗೆ ಎಲ್ಡಿಎಫ್ ಜತೆ ಮೈತ್ರಿಯೂ ಮಾಡಿಕೊಂಡಿದೆ.
ಮದನಿ ಪತ್ನಿ ಸೂಫಿ ಕೇರಳದಲ್ಲಿ ಪಕ್ಷವನ್ನು ಮುನ್ನಡೆಸುತ್ತಿದ್ದಾಳೆ. ಆದರೆ ಪತಿಯ ಸಲಹೆ, ಸೂಚನೆಯಿಲ್ಲದೆ ಯಾವುದೇ ನಿರ್ಧಾರ ತೆಗೆದುಕೊಳ್ಳುವುದಿಲ್ಲ. ಮೂರು ದಿನಕ್ಕೊಮ್ಮೆ ಪಕ್ಷದ ಬೆಂಬಲಿಗರೊಂದಿಗೆ ಪರಪ್ಪನ ಜೈಲಿಗೆ ಎಂಟ್ರಿ ಹಾಕುತ್ತಾಳೆ. 1994ರಿಂದ ಚುನಾವಣೆಗೆ ನಿಲ್ಲುತ್ತಿರುವ ಪಿಡಿಪಿ ಇದುವರೆಗೆ ಒಂದೂ ಸ್ಥಾನ ಗೆದ್ದಿಲ್ಲ. ಆದರೆ ಇತರೆ ಪಕ್ಷಗಳ ಸೋಲು ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸುತ್ತಿದೆ.
-
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ -
Devanahalli accident: ದೇವನಹಳ್ಳಿ ಬಳಿ ಭೀಕರ ಅಪಘಾತ: ಕಾಶಿಯಾತ್ರೆಗೆ ಹೊರಟಿದ್ದ ತಿಪಟೂರಿನ ಮೂವರು ಮಹಿಳೆಯರು ಸಾವು -
March 22 Horoscope: ಇಂದು ನಿಮ್ಮ ಧನ, ಆರೋಗ್ಯ, ಉದ್ಯೋಗದ ಭವಿಷ್ಯ ಹೇಗಿದೆ? -
ಅಮೆರಿಕ ಪಾಕಿಸ್ತಾನದ ಮೇಲೆ ದಾಳಿ ಮಾಡಿದರೆ ನಾವು ಮುಂಬೈ, ದೆಹಲಿ ಮೇಲೆ ಬಾಂಬ್ ಹಾಕ್ತೀವಿ: ಪಾಕ್ ಮಾಜಿ ರಾಯಭಾರಿ ವಿವಾದಾತ್ಮಕ ಹೇಳಿಕೆ -
ಮಾರ್ಚ್ 22ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
IPL 2026 Ticket: ಐಪಿಎಲ್ ಟಿಕೆಟ್ ಖರೀದಿ ಕುರಿತು ಬೆಂಗಳೂರು ಪೊಲೀಸರಿಂದ ಕ್ರಿಕೆಟ್ ಪ್ರೇಮಿಗಳಿಗೆ ಮಹತ್ವದ ಸಲಹೆ -
By-Election: ದಾವಣಗೆರೆ ದಕ್ಷಿಣದಲ್ಲಿ ಮೊದಲ ಬಾರಿ ಬಿಜೆಪಿ ಗೆಲುವು ನಿಶ್ಚಿತ; ಬಸವರಾಜ ಬೊಮ್ಮಾಯಿ ವಿಶ್ವಾಸ -
ಆರ್ಸಿಬಿ ವಿರುದ್ಧದ ಪಂದ್ಯಕ್ಕೂ ಮುನ್ನ ಕೇವಲ 42 ಎಸೆತಗಳಲ್ಲಿ 94 ರನ್ ಸಿಡಿಸಿದ ಅಭಿಷೇಕ್ ಶರ್ಮಾ: ಭಾರೀ ವೈರಲ್












Click it and Unblock the Notifications