ಹಾಲಪ್ಪ ಪ್ರಕರಣ ಸುಖಾಂತ್ಯ?
ಬೆಂಗಳೂರು, ಏಪ್ರಿಲ್ 1: ಮಾಜಿ ಸಚಿವ ಹರತಾಳು ಹಾಲಪ್ಪ ಸ್ನೇಹಿತ ಪತ್ನಿಯ ಮೇಲೆ ಅತ್ಯಾಚಾರವೆಸಗಲು ಹೋಗಿ ಏನು ಸುಖವುಂಡರೊ ಅವರೇ ಹೇಳಬೇಕು. ಆದರೆ ಪ್ರಕರಣವಂತೂ ಸುಖಾಂತ್ಯ ಕಾಣುವ ಸಾಧ್ಯತೆಗಳು ನಿಚ್ಚಳವಾಗಿವೆ. ಇದಕ್ಕೆ ಸಿಐಡಿ ಪೊಲೀಸರು ಸಲ್ಲಿಸಿರುವ 'ದೋಷಾ'ರೋಪ ಪಟ್ಟಿ ನೆರವಾಗಲಿದ್ದು, ಅದರಲ್ಲಿ ಅತ್ಯಾಚಾರ ಪ್ರಕರಣವನ್ನು ಸಹಮತದ ಸೆಕ್ಸ್ ಎಂದು ಉಲ್ಲೇಖಿಸಲಾಗಿದೆ. ತನ್ಮೂಲಕ ಇಡೀ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ನಡೆಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.
ವೀಡಿಯೊ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಶಿವಮೊಗ್ಗ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಎರಡು ದಿನಗಳ ಹಿಂದೆ ಆರೋಪಪಟ್ಟಿ ದಾಖಲಿಸಿದ್ದಾರೆ. ಇದರಲ್ಲಿ ಅತ್ಯಾಚಾರ ಪ್ರಕರಣ ಮಾತ್ರ ಪರಿಗಣಿಸಿದ್ದು, ಜೀವ ಬೆದರಿಕೆ ಪ್ರಕರಣ ಕೈಬಿಟ್ಟಿದ್ದಾರೆ. ಹಾಲಪ್ಪ ಸಹಚರರಾದ ಗಿರೀಶ್ ಮತ್ತು ಬಸವರಾಜು ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ದಾಖಲಿಸಿಲ್ಲ ಎಂಬುದು ಪ್ರಮುಖ ಅಂಶ.
ಆದರೆ ಡಿಎನ್ ಎ ವರದಿಯಲ್ಲಿ ಹಾಲಪ್ಪಗೆ ಮುಳ್ಳಾಗುವಂತಹ ಅಂಶಗಳೇ ಇರುವುದರಿಂದ ಅವರು ಬಚಾವ್ ಆಗುವುದು ಕಷ್ಟ ಎಂಬುದು ಕಾನೂನು ಪರಿಣತರ ಪ್ರತಿ ವಾದ. ಏನೇ ಆದರೂ ಆರೋಪಪಟ್ಟಿಯಲ್ಲಿನ ಸಾಕಷ್ಟು ಅಂಶಗಳು ಆರೋಪ ಸಾಬೀತುಪಡಿಸುವಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳುತ್ತಿಲ್ಲ ಎನ್ನಲಾಗಿದೆ. ಅಸಲಿಗೆ ಹೈಕೋರ್ಟ್ ಸಿಐಡಿಯನ್ನು ತರಾಟೆಗೆ ತೆಗೆದುಕೊಂಡ ಬಳಿಕವಷ್ಟೇ ಆರೋಪಪಟ್ಟಿ ದಾಖಲಿಸಲಾಗಿದೆ.
ಈ ಮಧ್ಯೆ... ಪ್ರಕರಣದ ಸಂಬಂಧ ತೆರೆಮರೆಯಲ್ಲಿ ಸಂಧಾನವೊಂದು ನಡೆಯುತ್ತಿದೆ. ಈಡಿಗ ಸಮಾಜದ ಹಿರಿಯ ತಲೆಗಳೇ ರಾಜೀ ಸಂಧಾನಕ್ಕೆ ಪೌರೋಹಿತ್ಯ ನಡೆಸಿವೆ ಎಂದು ತಿಳಿದುಬಂದಿದೆ. ಡಿಎನ್ ಎ ವರದಿ ಹಾಲಪ್ಪ ವಿರುದ್ಧ ವೀರ್ಯವಂತ ಸಾಕ್ಷಿಯಾಗಲಿದ್ದು, ಆರೋಪಿಗೆ ಅದೇ ಮುಳುಗುನೀರು ತರುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ಪ್ರಕರಣದ ಬಾಧಿತೆ ಚಂದ್ರಾವತಿಯ ಪತಿ ವೆಂಕಟೇಶಮೂರ್ತಿಯನ್ನು ಪುಸಲಾಯಿಸಲಾಗುತ್ತಿದೆ ಎಂದು ಹಾಲಪ್ಪ ನಿಕಟವರ್ತಿಗಳು ಹೇಳಿದ್ದಾರೆ.
-
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ -
ಸಂಜು ನಿಜವಾದ ಮ್ಯಾಚ್ ವಿನ್ನರ್, ವಿಶ್ವದ ನಂ.1 ಟಿ20 ಬ್ಯಾಟರ್ ಅಭಿಷೇಕ್ ಮೇಲೆ ನಂಬಿಕೆಯಿಡಿ: ರವಿಶಾಸ್ತ್ರಿ ಮಹತ್ವದ ಸಲಹೆ -
ಹೊಸ 800 ಕೆಪಿಎಸ್ ಶಾಲೆ, ಇಂಗ್ಲಿಷ್ ಭಾಷಾ ತರಬೇತಿ: ಕರ್ನಾಟಕ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ಭರಪೂರ ಘೋಷಣೆ -
Karnataka Budget 2026: 100 ಹೊಸ ಸ್ಕೈವಾಕ್, ಟನಲ್ ರಸ್ತೆ ಸೇರಿ ಕರ್ನಾಟಕ ಬಜೆಟ್ನಲ್ಲಿ ಬೆಂಗಳೂರಿಗೆ ಸಿಕ್ಕಿದ್ದೇನು? -
Karnataka Property: ಇ-ಆಸ್ತಿ, ಏಕೀಕೃತ ಆಸ್ತಿ ತೆರಿಗೆ ಸಂಯೋಜನೆ: ಕರ್ನಾಟಕದಲ್ಲಿ ಆಸ್ತಿ ನಿರ್ವಹಣೆಗೆ ಹೊಸ ನಿಯಮ -
ರೈತರಿಗೆ ಮಾಲ್, ಮಂಡ್ಯ ಸಾವಯ ಕೃಷಿ: ಅಡಿಕೆ - ತೆಂಗು ಬೆಳಗಾರರಿಗೂ ಬಂಪರ್, ಮೇಕೆದಾಟು ಯೋಜನೆಗೆ ಅಸ್ತು -
Karnataka Budget 2026: ಕರ್ನಾಟಕ ಬಜೆಟ್ 2026: ಬಜೆಟ್ ಗ್ರಾತ ಕಳೆದ ಬಾರಿಗಿಂತ 40 ಸಾವಿರ ಕೋಟಿ ರೂ. ಹೆಚ್ಚಳ -
ಕರ್ನಾಟಕದಲ್ಲಿ ಮೊಟ್ಟ ಮೊದಲ ಬಾರಿಗೆ ಬಸ್ ನಿಲ್ದಾಣಗಳಲ್ಲಿ ಬಜೆಟ್ ನೇರ ಪ್ರಸಾರ, ವಿಶೇಷವೇನು -
ರಷ್ಯಾದಿಂದ ತೈಲ ಖರೀದಿಸಲು ಭಾರತಕ್ಕೆ 30 ದಿನಗಳ ಅನುಮತಿ ಕೊಟ್ಟ ಅಮೆರಿಕ












Click it and Unblock the Notifications