ಹಾಲಪ್ಪ ಪ್ರಕರಣ ಸುಖಾಂತ್ಯ?
ಬೆಂಗಳೂರು, ಏಪ್ರಿಲ್ 1: ಮಾಜಿ ಸಚಿವ ಹರತಾಳು ಹಾಲಪ್ಪ ಸ್ನೇಹಿತ ಪತ್ನಿಯ ಮೇಲೆ ಅತ್ಯಾಚಾರವೆಸಗಲು ಹೋಗಿ ಏನು ಸುಖವುಂಡರೊ ಅವರೇ ಹೇಳಬೇಕು. ಆದರೆ ಪ್ರಕರಣವಂತೂ ಸುಖಾಂತ್ಯ ಕಾಣುವ ಸಾಧ್ಯತೆಗಳು ನಿಚ್ಚಳವಾಗಿವೆ. ಇದಕ್ಕೆ ಸಿಐಡಿ ಪೊಲೀಸರು ಸಲ್ಲಿಸಿರುವ 'ದೋಷಾ'ರೋಪ ಪಟ್ಟಿ ನೆರವಾಗಲಿದ್ದು, ಅದರಲ್ಲಿ ಅತ್ಯಾಚಾರ ಪ್ರಕರಣವನ್ನು ಸಹಮತದ ಸೆಕ್ಸ್ ಎಂದು ಉಲ್ಲೇಖಿಸಲಾಗಿದೆ. ತನ್ಮೂಲಕ ಇಡೀ ಪ್ರಕರಣವನ್ನು ಹಳ್ಳ ಹಿಡಿಸುವ ಪ್ರಯತ್ನ ನಡೆಸಲಾಗಿದೆ ಎಂದು ವಿಶ್ಲೇಷಿಸಲಾಗಿದೆ.
ವೀಡಿಯೊ: ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ಪೊಲೀಸರು ಶಿವಮೊಗ್ಗ ಜೆಎಂಎಫ್ ಸಿ ನ್ಯಾಯಾಲಯದಲ್ಲಿ ಎರಡು ದಿನಗಳ ಹಿಂದೆ ಆರೋಪಪಟ್ಟಿ ದಾಖಲಿಸಿದ್ದಾರೆ. ಇದರಲ್ಲಿ ಅತ್ಯಾಚಾರ ಪ್ರಕರಣ ಮಾತ್ರ ಪರಿಗಣಿಸಿದ್ದು, ಜೀವ ಬೆದರಿಕೆ ಪ್ರಕರಣ ಕೈಬಿಟ್ಟಿದ್ದಾರೆ. ಹಾಲಪ್ಪ ಸಹಚರರಾದ ಗಿರೀಶ್ ಮತ್ತು ಬಸವರಾಜು ಅವರ ಹೆಸರನ್ನು ಆರೋಪಪಟ್ಟಿಯಲ್ಲಿ ದಾಖಲಿಸಿಲ್ಲ ಎಂಬುದು ಪ್ರಮುಖ ಅಂಶ.
ಆದರೆ ಡಿಎನ್ ಎ ವರದಿಯಲ್ಲಿ ಹಾಲಪ್ಪಗೆ ಮುಳ್ಳಾಗುವಂತಹ ಅಂಶಗಳೇ ಇರುವುದರಿಂದ ಅವರು ಬಚಾವ್ ಆಗುವುದು ಕಷ್ಟ ಎಂಬುದು ಕಾನೂನು ಪರಿಣತರ ಪ್ರತಿ ವಾದ. ಏನೇ ಆದರೂ ಆರೋಪಪಟ್ಟಿಯಲ್ಲಿನ ಸಾಕಷ್ಟು ಅಂಶಗಳು ಆರೋಪ ಸಾಬೀತುಪಡಿಸುವಲ್ಲಿ ಸ್ಪಷ್ಟವಾಗಿ ಏನನ್ನೂ ಹೇಳುತ್ತಿಲ್ಲ ಎನ್ನಲಾಗಿದೆ. ಅಸಲಿಗೆ ಹೈಕೋರ್ಟ್ ಸಿಐಡಿಯನ್ನು ತರಾಟೆಗೆ ತೆಗೆದುಕೊಂಡ ಬಳಿಕವಷ್ಟೇ ಆರೋಪಪಟ್ಟಿ ದಾಖಲಿಸಲಾಗಿದೆ.
ಈ ಮಧ್ಯೆ... ಪ್ರಕರಣದ ಸಂಬಂಧ ತೆರೆಮರೆಯಲ್ಲಿ ಸಂಧಾನವೊಂದು ನಡೆಯುತ್ತಿದೆ. ಈಡಿಗ ಸಮಾಜದ ಹಿರಿಯ ತಲೆಗಳೇ ರಾಜೀ ಸಂಧಾನಕ್ಕೆ ಪೌರೋಹಿತ್ಯ ನಡೆಸಿವೆ ಎಂದು ತಿಳಿದುಬಂದಿದೆ. ಡಿಎನ್ ಎ ವರದಿ ಹಾಲಪ್ಪ ವಿರುದ್ಧ ವೀರ್ಯವಂತ ಸಾಕ್ಷಿಯಾಗಲಿದ್ದು, ಆರೋಪಿಗೆ ಅದೇ ಮುಳುಗುನೀರು ತರುವ ಸಾಧ್ಯತೆ ಹೆಚ್ಚಾಗಿದೆ. ಆದ್ದರಿಂದ ಕೇಸನ್ನು ವಾಪಸ್ ತೆಗೆದುಕೊಳ್ಳುವಂತೆ ಪ್ರಕರಣದ ಬಾಧಿತೆ ಚಂದ್ರಾವತಿಯ ಪತಿ ವೆಂಕಟೇಶಮೂರ್ತಿಯನ್ನು ಪುಸಲಾಯಿಸಲಾಗುತ್ತಿದೆ ಎಂದು ಹಾಲಪ್ಪ ನಿಕಟವರ್ತಿಗಳು ಹೇಳಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications