ವಾಂಖೆಡೆ ಪಿಚ್ ರಿಪೋರ್ಟ್ ಬಹಿರಂಗ
ಮುಂಬೈ, ಏ.1: ವಿಶ್ವಕಪ್ 2011 ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳ ಆಟಗಾರರ ದೈಹಿಕ ಸಾಮರ್ಥ್ಯ ಎಷ್ಟು ಮುಖ್ಯವೋ, ಪಿಚ್ ಸ್ಥಿತಿ ಕೂಡಾ ಅಷ್ಟೇ ಮುಖ್ಯ. ತುಂಬಾ ಜೋಪಾನವಾಗಿ ಪಿಚ್ ಆನ್ನು ಕಾಪಾಡಿಕೊಂಡು ಬರಲಾಗಿದ್ದು, ಫೈನಲ್ ಪಂದ್ಯಕ್ಕೆ ತಯಾರಾಗಿರುವ ಪಿಚ್ ವರದಿಯನ್ನು ಕ್ಯೂರೆಟರ್ ಸುಧೀರ್ ನಾಯಕ್ ಬಹಿರಂಗಪಡಿಸಿದ್ದಾರೆ.
ಈ ಋತುವಿನಲ್ಲಿ ಉಪಖಂಡದ ಪಿಚ್ ಗಳು ಸಾಮಾನ್ಯವಾಗಿ ನಿಧಾನಗತಿಯಿಂದ ಕೂಡಿರುತ್ತದೆ. ಆದರೆ, ತಂಡಗಳು ಹೆಚ್ಚಿನ ಮೊತ್ತ ಗಳಿಸಲು ಯಾವುದೇ ಅಡ್ಡಿಯಿಲ್ಲ. ಮೊಹಾಲಿ ಪಿಚ್ ನಂತೆ ಇಲ್ಲೂ ಕೂಡಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವ ತಂಡಕ್ಕೆ ಹೆಚ್ಚಿನ ಲಾಭ ಸಿಗುತ್ತದೆ. 1974ರಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಿದ್ದ ಭಾರತ ತಂಡವನ್ನು ಪ್ರತಿನಿಧಿಸಿದ್ದ ನಾಯಕ್, ಈ ಪಿಚ್ ಏಕದಿನ ಕ್ರಿಕೆಟ್ ಗೆ ಹೇಳಿಮಾಡಿಸಿದ ಹಾಗೆ ಇದೆ. ಹೆಚ್ಚಿನ ಶ್ರಮವಿಲ್ಲದೆ ಮೊದಲು ಬ್ಯಾಟ್ ಮಾಡುವ ತಂಡ 270 ರಿಂದ 280 ರನ್ ಗಳಿಸಬಹುದು ಎಂದಿದ್ದಾರೆ.
ವಿಶ್ವಕಪ್ : ಮುಖಪುಟ | ಚಿತ್ರಪಟ | ಅಂಕಗಳ ಕೋಷ್ಟಕ | ಟಾಪ್ ಬ್ಯಾಟ್ಸ್ ಮನ್| ಟಾಪ್ ಬೌಲರ್
ವೇಗಿಗಳಿಗೆ ಮೊದಲ ಕೆಲ ಓವರ್ ಗಳು ಸ್ವಿಂಗ್ ಸಿಗದಿದ್ದರೂ, ಒಳ್ಳೆ ಬೌನ್ಸ್ ಸಿಗಲಿದೆ. ಸ್ಪಿನ್ನರ್ ಗಳಿಗೆ ಎರಡನೆ ಅವಧಿಯಲ್ಲಿ ಒಳ್ಳೆ ಅವಕಾಶವಿದೆ. ಎರಡೂ ತಂಡದಲ್ಲಿ ಉತ್ತಮ ಸ್ಪಿನ್ನರ್ ಗಳಿರುವುದರಿಂದ ಯಾರು ಎಷ್ಟು ಲಾಭ ಪಡೆಯುತ್ತಾರೆ ಎಂದು ಕಾದು ನೋಡಬೇಕಿದೆ. ಹೆಚ್ಚು ತಿರುವು ಸಿಗದಿದ್ದರೂ, ನಿಧಾನಗತಿ ಪಿಚ್ ಎಲ್ಲಾ ಬಗೆಯ ಸ್ಪಿನ್ನರ್ ಗಳಿಗೆ ಸಹಾಯಕವಾಗಲಿದೆ ಎಂದಿದ್ದಾರೆ.
ಪಿಚ್ ನಲ್ಲಿರುವ ತೇವಾಂಶವನ್ನು ಕಡಿಮೆಮಾಡಲು ರಾಸಾಯನಿಕ(APSA-80)ಗಳನ್ನು ಸಿಂಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಹೆಚ್ಚು ತೇವಾಂಶವಿದ್ದರೆ, ಎರಡನೇ ಅವಧಿಯಲ್ಲಿ ಬ್ಯಾಟ್ ಮಾಡುವ ತಂಡಕ್ಕೆ ಸಹಾಯಕವಾಗಲಿದೆ. ವೇಗಿಗಳಿಗೆ ಚೆಂಡಿನ ಮೇಲೆ ಸರಿಯಾದ ಹಿಡಿತ ಸಿಗದೇ ಹೋಗಬಹುದು. ಒಟ್ಟಾರೆ ಸ್ಪರ್ಧಾತ್ಮಕ ಪಿಚ್ ಇದಾಗಿದೆ ಎಂದು ನಾಯಕ್ ಹೇಳಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications