ವಾಂಖೆಡೆ ಪಿಚ್ ರಿಪೋರ್ಟ್ ಬಹಿರಂಗ
ಮುಂಬೈ, ಏ.1: ವಿಶ್ವಕಪ್ 2011 ಅಂತಿಮ ಹಣಾಹಣಿಯಲ್ಲಿ ಉಭಯ ತಂಡಗಳ ಆಟಗಾರರ ದೈಹಿಕ ಸಾಮರ್ಥ್ಯ ಎಷ್ಟು ಮುಖ್ಯವೋ, ಪಿಚ್ ಸ್ಥಿತಿ ಕೂಡಾ ಅಷ್ಟೇ ಮುಖ್ಯ. ತುಂಬಾ ಜೋಪಾನವಾಗಿ ಪಿಚ್ ಆನ್ನು ಕಾಪಾಡಿಕೊಂಡು ಬರಲಾಗಿದ್ದು, ಫೈನಲ್ ಪಂದ್ಯಕ್ಕೆ ತಯಾರಾಗಿರುವ ಪಿಚ್ ವರದಿಯನ್ನು ಕ್ಯೂರೆಟರ್ ಸುಧೀರ್ ನಾಯಕ್ ಬಹಿರಂಗಪಡಿಸಿದ್ದಾರೆ.
ಈ ಋತುವಿನಲ್ಲಿ ಉಪಖಂಡದ ಪಿಚ್ ಗಳು ಸಾಮಾನ್ಯವಾಗಿ ನಿಧಾನಗತಿಯಿಂದ ಕೂಡಿರುತ್ತದೆ. ಆದರೆ, ತಂಡಗಳು ಹೆಚ್ಚಿನ ಮೊತ್ತ ಗಳಿಸಲು ಯಾವುದೇ ಅಡ್ಡಿಯಿಲ್ಲ. ಮೊಹಾಲಿ ಪಿಚ್ ನಂತೆ ಇಲ್ಲೂ ಕೂಡಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ಕೆ ಮಾಡುವ ತಂಡಕ್ಕೆ ಹೆಚ್ಚಿನ ಲಾಭ ಸಿಗುತ್ತದೆ. 1974ರಲ್ಲಿ ಇಂಗ್ಲೆಂಡ್ ಪ್ರವಾಸ ಮಾಡಿದ್ದ ಭಾರತ ತಂಡವನ್ನು ಪ್ರತಿನಿಧಿಸಿದ್ದ ನಾಯಕ್, ಈ ಪಿಚ್ ಏಕದಿನ ಕ್ರಿಕೆಟ್ ಗೆ ಹೇಳಿಮಾಡಿಸಿದ ಹಾಗೆ ಇದೆ. ಹೆಚ್ಚಿನ ಶ್ರಮವಿಲ್ಲದೆ ಮೊದಲು ಬ್ಯಾಟ್ ಮಾಡುವ ತಂಡ 270 ರಿಂದ 280 ರನ್ ಗಳಿಸಬಹುದು ಎಂದಿದ್ದಾರೆ.
ವಿಶ್ವಕಪ್ : ಮುಖಪುಟ | ಚಿತ್ರಪಟ | ಅಂಕಗಳ ಕೋಷ್ಟಕ | ಟಾಪ್ ಬ್ಯಾಟ್ಸ್ ಮನ್| ಟಾಪ್ ಬೌಲರ್
ವೇಗಿಗಳಿಗೆ ಮೊದಲ ಕೆಲ ಓವರ್ ಗಳು ಸ್ವಿಂಗ್ ಸಿಗದಿದ್ದರೂ, ಒಳ್ಳೆ ಬೌನ್ಸ್ ಸಿಗಲಿದೆ. ಸ್ಪಿನ್ನರ್ ಗಳಿಗೆ ಎರಡನೆ ಅವಧಿಯಲ್ಲಿ ಒಳ್ಳೆ ಅವಕಾಶವಿದೆ. ಎರಡೂ ತಂಡದಲ್ಲಿ ಉತ್ತಮ ಸ್ಪಿನ್ನರ್ ಗಳಿರುವುದರಿಂದ ಯಾರು ಎಷ್ಟು ಲಾಭ ಪಡೆಯುತ್ತಾರೆ ಎಂದು ಕಾದು ನೋಡಬೇಕಿದೆ. ಹೆಚ್ಚು ತಿರುವು ಸಿಗದಿದ್ದರೂ, ನಿಧಾನಗತಿ ಪಿಚ್ ಎಲ್ಲಾ ಬಗೆಯ ಸ್ಪಿನ್ನರ್ ಗಳಿಗೆ ಸಹಾಯಕವಾಗಲಿದೆ ಎಂದಿದ್ದಾರೆ.
ಪಿಚ್ ನಲ್ಲಿರುವ ತೇವಾಂಶವನ್ನು ಕಡಿಮೆಮಾಡಲು ರಾಸಾಯನಿಕ(APSA-80)ಗಳನ್ನು ಸಿಂಪಡಿಸಲು ಯೋಜನೆ ಹಾಕಿಕೊಳ್ಳಲಾಗಿದೆ. ಹೆಚ್ಚು ತೇವಾಂಶವಿದ್ದರೆ, ಎರಡನೇ ಅವಧಿಯಲ್ಲಿ ಬ್ಯಾಟ್ ಮಾಡುವ ತಂಡಕ್ಕೆ ಸಹಾಯಕವಾಗಲಿದೆ. ವೇಗಿಗಳಿಗೆ ಚೆಂಡಿನ ಮೇಲೆ ಸರಿಯಾದ ಹಿಡಿತ ಸಿಗದೇ ಹೋಗಬಹುದು. ಒಟ್ಟಾರೆ ಸ್ಪರ್ಧಾತ್ಮಕ ಪಿಚ್ ಇದಾಗಿದೆ ಎಂದು ನಾಯಕ್ ಹೇಳಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ












Click it and Unblock the Notifications