ಶ್ರೀಲಂಕಾ ಗೆಲುವಿಗಾಗಿ ತಿರುಪತಿ ತಿಮ್ಮಪ್ಪನಿಗೆ ಮೊರೆ!
ತಿರುಪತಿ, ಏಪ್ರಿಲ್ 2: ಅಪ್ಪಾ, ತಿಮ್ಮಪ್ಪ! ನಿನ್ನ ಮಹಿಮೆ ಬಲ್ಲೆ! ನನ್ನ ಶ್ರೀಲಂಕಾ ತಂಡವನ್ನು ವಿಶ್ವ ಕಪ್ ನಲ್ಲಿ ಗೆಲ್ಲಿಸಪ್ಪಾ' ಎಂದು ಪ್ರಾರ್ಥಿಸಿ, ಶ್ರೀಲಂಕಾದ ಅಧ್ಯಕ್ಷ ಮಹಿಂದಾ ರಾಜಪಕ್ಸೆ ಅವರು ಸಾಕ್ಷಾತ್ ತಿಮ್ಮಪ್ಪನಿಗೆ ಸಾಷ್ಟಾಂಗ ನಮಸ್ಕಾರ ಹಾಕಿದ್ದಾರೆ. ಅಂದಹಾಗೆ ರಾಜಪಕ್ಸೆ ತಿಮ್ಮಪ್ಪನ ಪರಮಭಕ್ತರು. ಆಗಾಗ್ಗೆ ತಿರುಪತಿಗೆ ಭೇಟಿ ನೀಡುವ ಪರಿಪಾಠ ಇಟ್ಟುಕೊಂಡಿದ್ದಾರೆ.
ಹೌದು ತಿಮ್ಮಪ್ಪನಿಗೆ ಪ್ರಶಸ್ತವಾದ ಶನಿವಾರದಂದು (ಏಪ್ರಿಲ್ 2) ಬೆಳಗ್ಗೆಯೇ ತಿರುಪತಿಗೆ ಆಗಮಿಸಿ, ತಮ್ಮ ತಂಡದ ಗೆಲುವಿಗಾಗಿ ಪ್ರಾರ್ಥಿಸಿದ್ದಾರೆ ಎಂದು ತಿರುಪತಿ ತಿರುಮಲ ಆಡಳಿತ ಮಂಡಳಿ ಮೂಲಗಳು ತಿಳಿಸಿವೆ. ಬೆಟ್ಟದಿಂದ 15 ಕಿ.ಮೀ. ದೂರದಲ್ಲಿರುವ ರಾಣಿಗುಂಟಾ ವಿಮಾನ ನಿಲ್ದಾಣಕ್ಕೆ ಶ್ರೀಲಂಕಾದ ವಿಶೇಷ ವಿಮಾನದಲ್ಲಿ ಬಂದು ಅಲ್ಲಿಂದ ರಸ್ತೆ ಪ್ರಯಾಣದ ಮೂಲಕ ತಿಮ್ಮಪ್ಪನ ಆಶೀರ್ವಾದಕ್ಕೆ ಬಂದಿದ್ದಾರೆ ಎಂದು ಮೂಲಗಳು ಹೇಳಿವೆ.
ಇದರಿಂದ ತಿರುಪತಿ ತಿಮ್ಮಪ್ಪನೂ ಪೀಕಲಾಟಕ್ಕೆ ಸಿಕ್ಕಿಕೊಂಡಿದ್ದಾನೆ. ಜತೆಗೆ ತಿಮ್ಮಪ್ಪನಿಗೆ ನಿಜವಾದ ಸವಾಲೂ ಎದುರಾಗಿದೆ. 'ನಿಮ್ಮ ಕಡೆಯಿಂದ (ರಾಷ್ಷ್ರಪತಿ ಪ್ರತಿಭಾ ಪಾಟೀಲ್?) ಯಾರೂ ಬಂದು ನನ್ನನ್ನು ಬೇಡಿಕೊಂಡಿಲ್ಲ. ಆದ್ದರಿಂದ ಶ್ರೀಲಂಕಾಗೇ ನನ್ನ ಆಶೀರ್ವಾದ ಎನ್ನುತ್ತಾನೋ, ಅಥವಾ ದೇಶಪ್ರೇಮದ ಮುಂದೆ ಉಳಿದವರೆಲ್ಲ ಹುಲುಮಾನವರು' ಎಂದು ಭಾರತಕ್ಕೇ ಜೈ ಎನ್ನುತ್ತಾನೋ ಉತ್ತರಕ್ಕಾಗಿ ಇಂದು ರಾತ್ರಿ 10 ರವರೆಗೂ ಕಾದು ನೋಡುವ!
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications