ಸಾಯಿಬಾಬಾ ಅನಾರೋಗ್ಯ: ಗ್ರಾಮದೇವತೆಯ ಶಾಪ?

ಒಂದು ವಾರದ ಹಿಂದೆ ಏನಾಯಿತೆಂದರೆ ... ಅದಕ್ಕೂ ಮುನ್ನ, ವಿಭೂತಿ ಪುರುಷ ಸತ್ಯ ಸಾಯಿ ಬಾಬಾ ಎಂದೇ ಹೆಸರುವಾಸಿಯಾದ ಬಾಲಕ ಸತ್ಯಾನಾರಾಯಣನಿಗೂ ಪುಟ್ಟಪರ್ತಿಗೂ ನಿಕಟ ಸಂಬಂಧವಿದೆ. ಪುಟ್ಟಪರ್ತಿ ಎಂಬ ಕುಗ್ರಾಮವನ್ನು ಪ್ರಗತಿಯತ್ತ ಕೊಂಡೊಯ್ದು ಅಂತಾರಾಷ್ಟ್ರೀಯ ಖ್ಯಾತಿ ಗಳಿಸಿಕೊಟ್ಟ ಪುಣ್ಯಾತ್ಮ ಆತ. ಅದರಂತೆ ಇಲ್ಲಿನ ಜನ ದೇವ ಮಾನವ ಸಾಯಿಬಾಬಾ ಜತೆಜತೆಗೆ ಗ್ರಾಮದ ಅಧಿದೇವತೆಯನ್ನೂ ಆರಾಧಿಸತೊಡಗಿದರು.
ಇಂತಿಪ್ಪ ಜನ ತಿಳಿದೋ, ತಿಳಿಯದೆಯೋ ಪುಟ್ಟಪರ್ತಿ ಗ್ರಾಮ ದೇವಿ ಸತ್ಯಮ್ಮದೇವಿಯ ವಿಗ್ರಹವನ್ನು ಊರಿನ ಸಮೀಪವಿರುವ ಬುಕ್ಕಾಪಟ್ಟಣ ಕೆರೆಯಲ್ಲಿ ಇತ್ತೀಚೆಗೆ ವಿಸರ್ಜನೆ ಮಾಡಿಬಿಟ್ಟರು. ಸರಿ ಅದೇ ವೇಳೆಗೆ ಆಸ್ಪತ್ರೆ ಸೇರಿದ್ದ ಪವಾಡ ಪುರುಷ ಸಾಯಿಬಾಬಾ ಅವರ ಆರೋಗ್ಯ ತೀರಾ ಹದಗೆಟ್ಟಿದೆ. ಕಂಗಾಲಾದ ಗ್ರಾಮದ ಹಿರಿಯರು ಸಭೆ ಸೇರಿ ವಿಚಾರ ಮಾಡಿದಾಗ ಗ್ರಾಮ ದೇವತೆಯನ್ನು ಕೆರೆಯಲ್ಲಿ ವಿಸರ್ಜನೆ ಮಾಡಿರುವುದೇ ಅನಾಹುತಕ್ಕೆ ಕಾರಣ ಎಂಬುದನ್ನು ಪತ್ತೆಹಚ್ಚಿದ್ದಾರೆ. ಸರಿ ತಡಮಾಡದೆ, ಸೋಮವಾರ ಸಂಜೆಯೇ ಹತ್ತಾರು ಮಂದಿ ಕೆರೆಗೆ ಧುಮುಕಿ ಗ್ರಾಮದೇವತೆಯ ವಿಗ್ರಹಕ್ಕಾಗಿ ಹುಡುಕಾಟ ನಡೆಸಿದ್ದಾರೆ.
ಕೊನೆಗೆ ಮಂಗಳವಾರ ಬೆಳಗ್ಗೆ ವಿಗ್ರಹವನ್ನು ಪತ್ತೆಹಚ್ಚಲಾಗಿದ್ದು, ನೀರಿನಿಂದ ಹೊರತೆಗೆಯಲಾಗಿದೆ. ಸುಮಾರು ಎರಡು ಅಡಿ ಎತ್ತರದ ವಿಗ್ರಹವನ್ನು ಊರಿನಲ್ಲಿರುವ ದೊಡ್ಡ ಮರದ ಕೆಳಗೆ ಇಡಲಾಗಿದೆ. ವಿಗ್ರಹಕ್ಕೆ ಪೂಜೆ ಪುನಸ್ಕಾರಗಳು ಭರದಿಂದ ಸಾಗಿವೆ. ಇದೇ ವೇಳೆ, ಸಾಯಿಬಾಬಾ ಆರೋಗ್ಯ ವಿಚಾರಿಸಿ, ಪುಟ್ಟಪರ್ತಿಗೆ ಆಗಮಿಸಿದ್ದ ಭಕ್ತಾದಿಗಳೂ ದೊಡ್ಡ ಮರದ ಕೆಳೆಗೆ ಸೇರಿ, ದೇವತೆಯನ್ನು ಪೂಜಿಸತೊಡಗಿದ್ದಾರೆ. ಈ ಮಧ್ಯೆ ಗ್ರಾಮದ ಹಿರಿಯರು ವಿಶೇಷ ಪೂಜೆ ನೆರವೇರಿಸಿ, ವಿಗ್ರಹವನ್ನು ಪ್ರತಿಷ್ಠಾಪಿಸುವುದಕ್ಕೆನಿರ್ಧರಿಸಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications