ಸಾಯಿಬಾಬಾ ಚಿಂತಾಜನಕ: ಪುಟ್ಟಪರ್ತಿ ಉದ್ವಿಗ್ನ

ಎರಡು ದಿನಗಳಿಂದ ಭಗವಾನ್ ಸಾಯಿಬಾಬಾ ಆರೋಗ್ಯ ತೀವ್ರ ಏರುಪೇರು ಕಂಡಿರುವುದರಿಂದ ಸಾವಿರಾರು ಭಕ್ತಾದಿಗಳು ಶ್ರೀ ಸತ್ಯಸಾಯಿ ಬಾಬಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯತ್ತ ಧಾವಂತದಿಂದ ಧಾವಿಸುತ್ತಿದ್ದಾರೆ. ಬಾಬಾ ಅವರನ್ನು ಪ್ರತ್ಯಕ್ಷವಾಗಿ ಕಾಣಬೇಕು ಎಂದು ಭಕ್ತರು ಪಟ್ಟು ಹಿಡಿದಿದ್ದರು. ಅನಂತಪುರ ಜಿಲ್ಲಾಧಿಕಾರಿ ಕಾರರನ್ನು ಜಂಖಗೊಳಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸೋಮವಾರ ಬೆಳಗ್ಗೆ ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಆಸ್ಪತ್ರೆಯ ಸುತ್ತು ಭಾರಿ ಬಂದೋಬಸ್ತ್ ಮಾಡಲಾಗಿದ್ದು, ಅರೆ ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಶಾತಿ ನಿಲಯದ ಸುತ್ತಲೂ ಭದ್ರಕೋಟೆ ನಿರ್ಮಿಸಲಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಆಂಧ್ರ ಡಿಜಿಪಿ ಅರವಿಂದ ರಾವ್ ಹೇಳಿದ್ದಾರೆ. ಅನಂತಪುರ ಡಿಐಜಿ ಚಾರು ಸಿನ್ಹಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಕ್ರಿಕೆಟ್ ದೇವರು ಎಂದೇ ಪರಿಗಣಿತರಾಗಿರುವ ಸಚಿನ್ ತೆಂಡೂಲ್ಕರ್ ಸೇರಿದಂತೆ ಪ್ರಧಾನಿಗಳು, ರಾಷ್ಟ್ಪತಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು. ಗಣ್ಯಾತಿಗಣ್ಯ ವ್ಯಕ್ತಿಗಳು ಭಗವಾನ್ ಬಾಬಾ ಅವರ ಪರಮ ಭಕ್ತರು. ಮಾರ್ಚ್ 28ರಂದು ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಸಾಯಿಬಾಬಾ ಅವರನ್ನು ಪ್ರಶಾಂತಿ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಬಾಬಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೇರಿಸಲಾಯಿತು.
ಈ ಮಧ್ಯೆ, ಆಂಧ್ರ ಪ್ರದೇಶ ಸರಕಾರವುಧಾರ್ಮಿಕ ಗುರು ಬಾಬಾ ಅವರ ಆರೋಗ್ಯದ ಬಗ್ಗೆ ಅನುಕ್ಷಣದ ನಿಗಾ ಇಟ್ಟಿದ್ದು, ಮುಖ್ಯಮಂತ್ರಿ ಕಿರಣ್ ರೆಡ್ಡಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಸಾಯಿಬಾಬಾ ಅವರ ಪರಮ ಭಕ್ತರಾದ ಸಚಿವೆ ಜೆ. ಗೀತಾ ರೆಡ್ಡಿ ಆಸ್ಪತ್ರೆಯಲ್ಲೇ ಇದ್ದು, ಬಾಬಾ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಬಾಬಾ ಈ ಹಿಂದೆಯೂ ಕೆಲವು ಬಾರಿ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಬಾರಿಯೂ ಮತ್ತೆ ಚೇತರಿಸಿಕೊಳ್ಳಲಿದ್ದಾರೆ ಎಂದು ಗೀತಾ ಹೇಳಿದ್ದಾರೆ. ಆಂಧ್ರ ರಾಜ್ಯಪಾಲ ಇಎಸ್ ಎಲ್ ನರಸಿಂಹನ್ ಅವರು ಭಗವಾನ್ ಬಾಬಾ ಬಗ್ಗೆ ಸಕಲ ಜಾಗ್ರತೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ. AIIMSನ ಮಾಜಿ ಹೃದ್ರೋಗ ತಜ್ಞ ಹಾಗೂ ಶ್ರೀ ಸತ್ಯಸಾಯಿ ಉನ್ನತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಎ. ಎನ್. ಸಫಾಯ ಬಾಬಾ ಆರೋಗ್ಯವನ್ನು ಖುದ್ದು ಪರೀಕ್ಷಿಸುತ್ತಿದ್ದಾರೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications