ಸಾಯಿಬಾಬಾ ಚಿಂತಾಜನಕ: ಪುಟ್ಟಪರ್ತಿ ಉದ್ವಿಗ್ನ

ಎರಡು ದಿನಗಳಿಂದ ಭಗವಾನ್ ಸಾಯಿಬಾಬಾ ಆರೋಗ್ಯ ತೀವ್ರ ಏರುಪೇರು ಕಂಡಿರುವುದರಿಂದ ಸಾವಿರಾರು ಭಕ್ತಾದಿಗಳು ಶ್ರೀ ಸತ್ಯಸಾಯಿ ಬಾಬಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯತ್ತ ಧಾವಂತದಿಂದ ಧಾವಿಸುತ್ತಿದ್ದಾರೆ. ಬಾಬಾ ಅವರನ್ನು ಪ್ರತ್ಯಕ್ಷವಾಗಿ ಕಾಣಬೇಕು ಎಂದು ಭಕ್ತರು ಪಟ್ಟು ಹಿಡಿದಿದ್ದರು. ಅನಂತಪುರ ಜಿಲ್ಲಾಧಿಕಾರಿ ಕಾರರನ್ನು ಜಂಖಗೊಳಿಸಿದರು. ಪರಿಸ್ಥಿತಿಯನ್ನು ನಿಯಂತ್ರಿಸಲು ಪೊಲೀಸರು ಸೋಮವಾರ ಬೆಳಗ್ಗೆ ಲಘು ಲಾಠಿ ಪ್ರಹಾರ ಮಾಡಿದ್ದಾರೆ.
ಆಸ್ಪತ್ರೆಯ ಸುತ್ತು ಭಾರಿ ಬಂದೋಬಸ್ತ್ ಮಾಡಲಾಗಿದ್ದು, ಅರೆ ಸೇನೆ ಮತ್ತು ಸ್ಥಳೀಯ ಪೊಲೀಸರನ್ನು ಭದ್ರತೆಗೆ ನಿಯೋಜಿಸಲಾಗಿದೆ. ಪ್ರಶಾತಿ ನಿಲಯದ ಸುತ್ತಲೂ ಭದ್ರಕೋಟೆ ನಿರ್ಮಿಸಲಾಗಿದೆ ಎಂದು ಆಸ್ಪತ್ರೆಗೆ ಭೇಟಿ ನೀಡಿದ್ದ ಆಂಧ್ರ ಡಿಜಿಪಿ ಅರವಿಂದ ರಾವ್ ಹೇಳಿದ್ದಾರೆ. ಅನಂತಪುರ ಡಿಐಜಿ ಚಾರು ಸಿನ್ಹಾ ಸ್ಥಳದಲ್ಲಿಯೇ ಮೊಕ್ಕಾಂ ಹೂಡಿದ್ದಾರೆ. ಕ್ರಿಕೆಟ್ ದೇವರು ಎಂದೇ ಪರಿಗಣಿತರಾಗಿರುವ ಸಚಿನ್ ತೆಂಡೂಲ್ಕರ್ ಸೇರಿದಂತೆ ಪ್ರಧಾನಿಗಳು, ರಾಷ್ಟ್ಪತಿಗಳು, ಮುಖ್ಯಮಂತ್ರಿಗಳು, ರಾಜ್ಯಪಾಲರು. ಗಣ್ಯಾತಿಗಣ್ಯ ವ್ಯಕ್ತಿಗಳು ಭಗವಾನ್ ಬಾಬಾ ಅವರ ಪರಮ ಭಕ್ತರು. ಮಾರ್ಚ್ 28ರಂದು ಅನಾರೋಗ್ಯ ಕಾಣಿಸಿಕೊಳ್ಳುತ್ತಿದ್ದಂತೆ ಸಾಯಿಬಾಬಾ ಅವರನ್ನು ಪ್ರಶಾಂತಿ ಗ್ರಾಮದಲ್ಲಿರುವ ಶ್ರೀ ಸತ್ಯಸಾಯಿ ಬಾಬಾ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಗೆ ಸೇರಿಸಲಾಯಿತು.
ಈ ಮಧ್ಯೆ, ಆಂಧ್ರ ಪ್ರದೇಶ ಸರಕಾರವುಧಾರ್ಮಿಕ ಗುರು ಬಾಬಾ ಅವರ ಆರೋಗ್ಯದ ಬಗ್ಗೆ ಅನುಕ್ಷಣದ ನಿಗಾ ಇಟ್ಟಿದ್ದು, ಮುಖ್ಯಮಂತ್ರಿ ಕಿರಣ್ ರೆಡ್ಡಿ ಮಂಗಳವಾರ ಆಸ್ಪತ್ರೆಗೆ ಭೇಟಿ ನೀಡುವ ಸಾಧ್ಯತೆ ಇದೆ. ಸಾಯಿಬಾಬಾ ಅವರ ಪರಮ ಭಕ್ತರಾದ ಸಚಿವೆ ಜೆ. ಗೀತಾ ರೆಡ್ಡಿ ಆಸ್ಪತ್ರೆಯಲ್ಲೇ ಇದ್ದು, ಬಾಬಾ ಆರೋಗ್ಯವನ್ನು ವಿಚಾರಿಸಿಕೊಳ್ಳುತ್ತಿದ್ದಾರೆ. ಬಾಬಾ ಈ ಹಿಂದೆಯೂ ಕೆಲವು ಬಾರಿ ಆರೋಗ್ಯ ಸಮಸ್ಯೆ ಎದುರಿಸಿದ್ದಾರೆ. ಈ ಬಾರಿಯೂ ಮತ್ತೆ ಚೇತರಿಸಿಕೊಳ್ಳಲಿದ್ದಾರೆ ಎಂದು ಗೀತಾ ಹೇಳಿದ್ದಾರೆ. ಆಂಧ್ರ ರಾಜ್ಯಪಾಲ ಇಎಸ್ ಎಲ್ ನರಸಿಂಹನ್ ಅವರು ಭಗವಾನ್ ಬಾಬಾ ಬಗ್ಗೆ ಸಕಲ ಜಾಗ್ರತೆ ವಹಿಸುವಂತೆ ನಿರ್ದೇಶನ ನೀಡಿದ್ದಾರೆ. AIIMSನ ಮಾಜಿ ಹೃದ್ರೋಗ ತಜ್ಞ ಹಾಗೂ ಶ್ರೀ ಸತ್ಯಸಾಯಿ ಉನ್ನತ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ನಿರ್ದೇಶಕ ಡಾ. ಎ. ಎನ್. ಸಫಾಯ ಬಾಬಾ ಆರೋಗ್ಯವನ್ನು ಖುದ್ದು ಪರೀಕ್ಷಿಸುತ್ತಿದ್ದಾರೆ.
-
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ -
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
Vehicle Loan: ವಾಹನ ಮಾಲೀಕರಿಗೆ ಗುಡ್ನ್ಯೂಸ್: ಸಾಲ ಪ್ರಕ್ರಿಯೆ, ಆರ್ಸಿ ಅಪ್ಡೇಟ್ಗೆ ಇನ್ಮುಂದೆ ಆನ್ಲೈನ್ ವ್ಯವಸ್ಥೆ -
Horoscope March 11: ಈ ರಾಶಿಯವರಿಗೆ ಸಿಗಲಿವೆ ಹೊಸ ಅವಕಾಶಗಳು, ಬುದಕಿನಲ್ಲಿ ಯಶಸ್ಸು; ಇಂದಿನ ದಿನ ಭವಿಷ್ಯ -
KEA PGNEET: ಕೆಇಎಯಿಂದ ಮತ್ತೊಂದು ಸುತ್ತಿನ ಸೀಟು ಹಂಚಿಕೆ; 783 ವೈದ್ಯಕೀಯ ಸೀಟುಗಳು ಬಾಕಿ -
ವಾಸ್ತು: ದಕ್ಷಿಣ ಗೇಟು ಶುಭವೋ ಅಥವಾ ಅಶುಭವೋ, ಉತ್ತರ ದ್ವಾರದ ವಾಸ್ತು ರಹಸ್ಯಗಳೇನು ಇಲ್ಲಿದೆ ಸಂಪೂರ್ಣ ಮಾಹಿತಿ -
ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅಸ್ತು: 13 ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಮಗನಿಗೆ ಮುಕ್ತಿ ನೀಡಲು ಕೋರಿದ್ದ ಪೋಷಕರು -
ಮತ್ತೆ ಶುರುವಾಗುತ್ತಾ ವರ್ಕ್ ಫ್ರಂ ಹೋಮ್? ಇಂಧನ ಕೊರತೆ ಬೆನ್ನಲ್ಲೇ ಹಲವು ದೇಶಗಳಲ್ಲಿ ಕಚೇರಿಗಳಿಗೆ ನಿರ್ಬಂಧ -
ಬೇಸಿಗೆಯಲ್ಲಿ ನೀವು ಚಿಲ್ಡ್ ಬಿಯರ್ ಕುಡಿಯುತ್ತೀರಾ, ಬಾಟಲ್ ಕೆಳಗಿಟ್ಟು ಇದನ್ನು ಓದಿ -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion












Click it and Unblock the Notifications