ಬಂಗಾರಪೇಟೆ: ಕಾಂಗ್ರೆಸ್ ಪ್ರಚಾರಕ್ಕೆ ಚಿರು

ಕೇಂದ್ರ ರೈಲ್ವೇ ಖಾತೆ ರಾಜ್ಯ ಸಚಿವ ಕೆ ಮುನಿಯಪ್ಪ ಅವರ ಆಹ್ವಾನದ ಮೇರೆಗೆ ಗುರುವಾರ ಚಿರಂಜೀವಿ ಅವರು ಪ್ರಚಾರ ಕಾರ್ಯದಲ್ಲಿ ತೊಡಗಲಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ನಾರಾಯಣಸ್ವಾಮಿ ಅವರ ಪರ ಮತಯಾಚಿಸಲಿದ್ದಾರೆ ಎಂದು ಪ್ರಜಾರಾಜ್ಯಂ ಪಾರ್ಟಿ ವಕ್ತಾರರು ಹೇಳಿದ್ದಾರೆ.
ಇತ್ತೀಚೆಗೆ ಚಿಕ್ಕಬಳ್ಳಾಪುರ ಮೂಲಕ ಅನಂತಪುರಕ್ಕೆ ಸಾಗಿದ್ದ ಚಿರಂಜೀವಿಗೆ ಅಭಿಮಾನಿಗಳು ಮುತ್ತಿಗೆ ಹಾಕಿ, ಜೈ ಕಾರ ಹಾಕಿದ್ದರು. ಕರ್ನಾಟಕದಲ್ಲೂ ಪ್ರಜಾರಾಜ್ಯಂ ಪಕ್ಷ ಅಧಿಕೃತ ಎಂಟ್ರಿ ಪಡೆಯಲಿದೆ ಎಂದು ಚಿರಂಜೀವಿ ಹೇಳಿದ್ದರು. ರಾಜ್ಯದ ಮೂರು ಕ್ಷೇತ್ರದಲ್ಲಿ ಪ್ರಜಾರಾಜ್ಯಂ ಸ್ಪರ್ಧೆ, ಸಿದ್ದರಾಮಯ್ಯ ಪ್ರಜಾರಾಜ್ಯಂ ಸೇರ್ಪಡೆ ಈ ರೀತಿ ಸುದ್ದಿ ಈ ಹಿಂದೆ ಹರಡಿತ್ತು.
ಗಡಿ ಭಾಗದ ಪ್ರದೇಶಗಳಲ್ಲಿ ತೆಲುಗು ಸ್ಟಾರ್ ಚಿರಂಜೀವಿ ಬಗ್ಗೆ ಜನರಿಗಿರುವ ಕ್ರೇಜ್ ನ ಲಾಭ ಪಡೆಯಲು ಕಾಂಗ್ರೆಸ್ ಉದ್ದೇಶಿಸಿದೆ. ಇತ್ತೀಚೆಗೆ ಕಾಂಗ್ರೆಸ್ ಪಕ್ಷದೊಡನೆ ಕೈ ಜೋಡಿಸಿರುವ ಪ್ರಜಾ ರಾಜ್ಯಂ ಪಕ್ಷದ ಅಧ್ಯಕ್ಷ ಕೆ ಚಿರಂಜೀವಿ, ಸ್ಟಾರ್ ಕ್ಯಾಂಪೇನರ್ ಆಗಿದ್ದಾರೆ.
ಸೋನಿಯಾ ಗಾಂಧಿ ಅವರ ಅಣತಿಯಂತೆ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಗುಲಾಂ ನಬಿ ಅಜಾದ್ ಅವರ ಯೋಜನೆಯಂತೆ ಸದ್ಯಕ್ಕೆ ತಮಿಳುನಾಡು ಅಸೆಂಬ್ಲಿ ಚುನಾವಣೆಗೆ ಚಿರಂಜೀವಿ ಸ್ಟಾರ್ ಪ್ರಚಾರಕರಾಗಿದ್ದಾರೆ. ಕಾಂಗ್ರೆಸ್ ಡಿಎಂಕೆ ಮೈತ್ರಿಯನ್ನು ಬೆಂಬಲಿಸುವಂತೆ ಓಟ್ ಕೇಳುತ್ತಿರುವ ಚಿರು, ನಾಳೆ ಬಂಗಾರಪೇಟೆ ಕಡೆ ಬಂದು ಕಾಂಗ್ರೆಸ್ ಗೆ ಓಟು ಕೊಡಿ ಎನ್ನಲಿದ್ದಾರೆ.
-
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು -
Udaan Yatri Cafe: ಏರ್ಪೋರ್ಟ್ನಲ್ಲಿ ದುಬಾರಿ ಊಟಕ್ಕೆ ಬ್ರೇಕ್: 17 ಕಡೆ ಉಡಾನ್ ಕೆಫೆ ಆರಂಭ -
ಖಾಸಗಿ ಬಸ್ಗಳಿಗಾಗಿ ಹುಬ್ಬಳ್ಳಿ-ಮುಂಬೈ ಮಾರ್ಗದಲ್ಲಿ NWKRTC ಸಂಚಾರ ಸ್ಥಗಿತ? ನೆಟ್ಟಿಗರ ಆಕ್ರೋಶ












Click it and Unblock the Notifications