ಜನ ಲೋಕಪಾಲ ಮಸೂದೆಯಲ್ಲಿ ಏನಿದೆ?

ಕರ್ನಾಟಕದ ಲೋಕಾಯುಕ್ತ, ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಸಂತೋಷ ಹೆಗಡೆ, ಸುಪ್ರೀಂ ಕೋರ್ಟ್ ವಕೀಲ ಪ್ರಶಾಂತ್ ಭೂಷಣ್ ಮತ್ತು ಆರ್ಟಿಐ ಕಾರ್ಯಕರ್ತ ಅರವಿಂದ್ ಕೇಜ್ರಿವಾಲ್ ಅವರು ರೂಪಿಸಿರುವ ಹೊಸ ಜನ ಲೋಕಪಾಲ ಮಸೂದೆಯ ಮಂಡನೆ ಆಗಲೇಬೇಕು, ಭ್ರಷ್ಟಾಚಾರವನ್ನು ಬೇರುಸಹಿತ ಕಿತ್ತುಹಾಕಲೇಬೇಕು ಎಂದು ಹಜಾರೆ ಆಗ್ರಹಿಸುತ್ತಿದ್ದಾರೆ.
ಹಳೆ ಭ್ರಷ್ಟಾಚಾರ ವಿರೋಧಿ ಕಾಯ್ದೆಯನ್ನು ಕಿತ್ತುಹಾಕಿ ಈಗ ರಚಿತವಾಗಿರುವ ಹೊಸ ಮಸೂದೆಯನ್ನು ಜಾರಿಗೆ ತಂದರೆ, ದೂರುಬಂದ ಒಂದು ವರ್ಷದಲ್ಲಿ ತನಿಖೆ ಪೂರ್ಣಗೊಂಡು, ಮುಂದಿನ ವರ್ಷದಲ್ಲಿ ವಿಚಾರಣೆ ಮುಗಿದು ಆರೋಪಿ ಜೈಲು ಸೇರಬೇಕಾಗುತ್ತದೆ. ರಾಜಕಾರಣಿ ಮತ್ತು ಸರಕಾರಿ ಅಧಿಕಾರಿಗಳನ್ನು ಕೂಡ ಇದರ ವ್ಯಾಪ್ತಿಯಲ್ಲಿ ತರಬೇಕೆಂದು ಆಗ್ರಹಿಸಲಾಗುತ್ತಿದೆ.
ಅಣ್ಣಾ ಹಜಾರೆ ಜೊತೆಗೆ ನಿವೃತ್ತ ಐಪಿಎಸ್ ಅಧಿಕಾರಿ ಕಿರಣ್ ಬೇಡಿ, ಸ್ವಾಮಿ ಅಗ್ನಿವೇಶ್, ಆರ್ಟ್ ಆಪ್ ಲಿವಿಂಗ್ ನ ರವಿ ಶಂಕರ್ ಗುರೂಜಿ, ನೃತ್ಯಗಾರ್ತಿ ಮಲ್ಲಿಕಾ ಸಾರಾಭಾಯ್ ಮುಂತಾದವರು ಭ್ರಷ್ಟಾಚಾರ ವಿರೋಧಿ ಆಂದೋಳನವನ್ನು ಹುಟ್ಟುಹಾಕಿದ್ದಾರೆ. ಇದಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಮುಂತಾದವರು ಬೆಂಬಲ ಸೂಚಿಸಿದ್ದಾರೆ. ಆನ್ ಲೈನ್ ನಲ್ಲಿ ಈ ಚಳವಳಿಗೆ 5 ಲಕ್ಷ 70 ಸಾವಿರ ಜನ ಬೆಂಬಲ ವ್ಯಕ್ತಪಡಿಸಿದ್ದಾರೆ.
ಇಷ್ಟೆಲ್ಲ ಜನಾಗ್ರಹಕ್ಕೆ ಕಾರಣವಾಗಿರುವ ಈ ಜನ ಲೋಕಪಾಲ್ ಕಾಯ್ದೆಯಲ್ಲಿ ಏನಿದೆ?
* ಕೇಂದ್ರದಲ್ಲಿ ಲೋಕಪಾಲ ಮತ್ತು ಪ್ರತಿರಾಜ್ಯದಲ್ಲಿ ಲೋಕಾಯುಕ್ತ ನೇಮಕ.
* ಸುಪ್ರೀಂ ಕೋರ್ಟ್ ಮತ್ತು ಚುನಾವಣಾ ಆಯೋಗದಂತೆ ಲೋಕಪಾಲ ಸಂಸ್ಥೆ ಕೂಡ ಸ್ವತಂತ್ರವಾಗಿರುತ್ತದೆ.
* ಭ್ರಷ್ಟ ವ್ಯಕ್ತಿ ರಾಜಕಾರಣಿ, ಅಧಿಕಾರಿ, ನ್ಯಾಯಮೂರ್ತಿ ಯಾರೇ ಆಗಿರಲಿ, ಆರೋಪ ಸಾಬೀತಾದರೆ ಎರಡು ವರ್ಷದಲ್ಲಿ ಜೈಲು ಸೇರಬೇಕು.
* ಭ್ರಷ್ಟ ವ್ಯಕ್ತಿಯಿಂದ ಸರಕಾರಕ್ಕೆ ಆದ ನಷ್ಟವನ್ನು ಶಿಕ್ಷೆ ಆಗುವ ದಿನ ಮರುಪಾವತಿಸಬೇಕು.
* ಸರಿಯಾದ ಸಮಯದಲ್ಲಿ ಯಾವುದೇ ವ್ಯಕ್ತಿಗೆ ಸಂಬಂಧಿಸಿದ ಕೆಲಸ ನೆರವೇರದಿದ್ದರೆ ಕರ್ತವ್ಯಚ್ಯುತಿ ಮಾಡಿದ ಅಧಿಕಾರಿಗೆ ದಂಡ ವಿಧಿಸಿ, ಅದನ್ನು ಸಂಬಂಧಪಟ್ಟ ವ್ಯಕ್ತಿಗೆ ನೀಡಲಾಗುವುದು.
* ಪಂಚಾಯತ್ ನಲ್ಲಿ ಹಣ ದುರುಪಯೋಗವಾದರೆ, ರೇಶನ್ ಕಾರ್ಡ್ ನಲ್ಲಿ ಗೋಲ್ ಮಾಲ್ ನಡೆದರೆ, ಪೊಲೀಸ್ ಲಂಚ ಕೇಳಿದರು, ರಸ್ತೆ ಸರಿಯಾಗಿ ಹಾಕದಿದ್ದರೆ, ಪಾಸ್ ಪೋರ್ಟ್ ಸೂಕ್ತ ಸಮಯದಲ್ಲಿ ದೊರಯದಿದ್ದರೆ, ಲೈಸೆನ್ಸ್ ನೀಡುವ ಅಧಿಕಾರಿ ಕಿರಿಕ್ ಮಾಡಿದರೆ, ಸಬ್ ರಿಜಿಸ್ಟ್ರಾರ್ ಟೇಬಲ್ ಕೆಳಗೆ ಕೈ ಚಾಚಿದರೆ ಲೋಕಪಾಲನಿಗೆ ದೂರು ನೀಡಬಹುದು.
* ಲೋಕಪಾಲ ರಾಜಕಾರಣಿಗಳಿಂದ ನೇಮಕವಾಗದೆ, ಜನರಿಂದ, ಸಾಂವಿಧಾನಿಕ ಅಧಿಕಾರಿಯಿಂದ, ನ್ಯಾಯಮೂರ್ತಿಗಳಿಂದ ನೇಮಕವಾಗುವುದರಿಂದ ನೇಮಕವಾಗುವುದರಿಂದ ಭ್ರಷ್ಟಾಚಾರಕ್ಕೆ ಅವಕಾಶವೇ ಇಲ್ಲ.
* ಜನ ಲೋಕಪಾಲ ಮಸೂದೆ ಜಾರಿಗೆ ಬಂದರೆ ಮುಖ್ಯ ಜಾಗೃತ ಆಯುಕ್ತ, ವಿಚಕ್ಷುದಳ, ಸಿಬಿಐನ ಭ್ರಷ್ಟವಿರೋಧಿ ಶಾಖೆಗಳು ಲೋಕಪಾಲದಲ್ಲಿ ಸೇರಿಕೊಳ್ಳುತ್ತವೆ.
* ಭ್ರಷ್ಟಾಚಾರದ ವಿರುದ್ಧ ದನಿಯೆತ್ತುವ ವ್ಯಕ್ತಿಗೆ ಲೋಕಪಾಲರಿಂದ ಸಂಪೂರ್ಣ ಭದ್ರತೆ ದೊರೆಯುತ್ತದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications