ಲೋಕಪಾಲ ಮಸೂದೆ : ಸಮಿತಿಗೆ ಹೆಗಡೆ ಹೆಸರು

ಈ ಭ್ರಷ್ಟಾಚಾರ ವಿರೋಧಿ ಮಸೂದೆ ಕರಡು ಸಿದ್ಧಪಡಿಸುವ ಜಂಟಿ ಸಮಿತಿಯಲ್ಲಿ ರಾಜಕಾರಣಿಗಳು ಮಾತ್ರವಲ್ಲ ಐವರು ನಾಗರಿಕರು ಕೂಡ ಇರಬೇಕೆನ್ನುವ ಆಗ್ರಹಕ್ಕೆ ಕೇಂದ್ರ ಮಣಿದಿದೆ. ಜಂತರ್ ಮಂತರ್ ನಲ್ಲಿ ಉಪವಾಸ ಸತ್ಯಾಗ್ರಹಕ್ಕೆ ಕುಳಿತಿರುವ ಅಣ್ಣಾ ಹಜಾರೆ ಅವರು ತಾವೇ ಸಮಿತಿಯ ಅಧ್ಯಕ್ಷರಾಗಬೇಕು ಎನ್ನುವ ಹಟಕ್ಕೆ ಒಪ್ಪಿಕೊಳ್ಳಲು ಕೇಂದ್ರ ಸುತಾರಾಂ ತಯಾರಿಲ್ಲ. ಚುನಾಯಿತ ಪ್ರತಿನಿಧಿಯ ಎದುರಿಗೆ ಜನಪ್ರತಿನಿಧಿಗಳು ತಲೆತಗ್ಗಿ ನಿಲ್ಲುವುದು ಕೇಂದ್ರಕ್ಕೆ ಬೇಕಾಗಿಲ್ಲ.
ಆದರೆ, ಕರಡನ್ನು ಪ್ರಾಥಮಿಕವಾಗಿ ರೂಪಿಸಿರುವ ತಂಡದಲ್ಲಿ ಇರುವ ಕರ್ನಾಟಕದ ಲೋಕಾಯುಕ್ತ, ಸುಪ್ರೀಂ ಕೋರ್ಟಿನ ಮಾಜಿ ನ್ಯಾಯಮೂರ್ತಿ ಸಂತೋಷ್ ಹೆಗಡೆ ಅಥವಾ ಸುಪ್ರೀಂ ಕೋರ್ಟ್ ನ ಮಾಜಿ ಮುಖ್ಯ ನ್ಯಾಯಮೂರ್ತಿ ಜೆಎಸ್ ವರ್ಮಾ ಅವರು ಸಮಿತಿಯ ಅಧ್ಯಕ್ಷರಾಗಬೇಕು ಎನ್ನುವ ಇಂಗಿತವನ್ನು ಕೆಜ್ರಿವಾಲ್ ಅವರು ವ್ಯಕ್ತಪಡಿಸಿದ್ದಾರೆ. ಇದಕ್ಕೂ ಮೊದಲು ಕೆಜ್ರಿವಾಲ್ ಅವರೇ ಸಮಿತಿ ಅಧ್ಯಕ್ಷರಾಗಬೇಕೆಂದು ಕೇಂದ್ರ ಸೂಚಿಸಿತ್ತು. ಭ್ರಷ್ಟಾಚಾರ ವಿರೋಧಿ ಆಂದೋಲನದ ಇನ್ನೊಬ್ಬ ರೂವಾರಿ ಸ್ವಾಮಿ ಅಗ್ನಿವೇಶ್ ಅವರು ಕೂಡ ಸಮಿತಿಯಲ್ಲಿರಬೇಕು ಎಂಬು ಮಾತು ಕೇಳಿಬರುತ್ತಿವೆ.
ಕರ್ನಾಟಕದ ಲೋಕಾಯುಕ್ತ ಸಂತೋಷ ಹೆಗಡೆ ಅವರು ಸಮಿತಿಯ ಅಧ್ಯಕ್ಷತೆ ವಹಿಸುವಲ್ಲಿ ಸಮರ್ಥರಾಗಿದ್ದಾರೆ ಎನ್ನುವುದರಲ್ಲಿ ಎರಡು ಮಾತಿಲ್ಲ. ಯಾವುದೇ ವಿಧವಾದ ವಿವಾದಗಳಲ್ಲಿ ಭಾಗಿಯಾಗಿರದ ಸಂತೋಷ ಹೆಗಡೆ ಅವರು ಸಮಿತಿಯ ಅಧ್ಯಕ್ಷತೆ ವಹಿಸುವುದನ್ನು ಅಣ್ಣಾ ಹಜಾರೆ ಒಪ್ಪುವ ನಿರೀಕ್ಷೆಯಿದೆ. ಈ ನಡುವೆ, ನಾಡಿನಾದ್ಯಂತ ಯುವಜನತೆಯಿಂದ ಈ ಆಂದೋಲನಕ್ಕೆ ಭಾರೀ ಬೆಂಬಲ ವ್ಯಕ್ತವಾಗುತ್ತಿದೆ. ಆದರೆ, ಅಣ್ಣಾ ಅವರು ಆಮರಣಾಂತ ಉಪವಾಸ ಕುಳಿತುಕೊಳ್ಳುವ ಬದಲು ನಾಡಿನಾದ್ಯಂತ ಸಂಚರಿಸಿ ಜನತೆಯನ್ನು ಒಗ್ಗೂಡಿಸಿದ್ದರೆ ಈ ಚಳವಳಿಯ ಚೆಹರೆಯೇ ಬದಲಾಗಿರುತ್ತಿತ್ತು.
ಎಂಟು ಬಾರಿ ಸತ್ತ ಮಸೂದೆ : 1968ರಲ್ಲಿ ಪ್ರಥಮ ಬಾರಿಗೆ ಲೋಕಸಭೆಯಲ್ಲಿ ಮಂಡನೆಯಾದಂದಿನಿಂದ ಎಂಟು ಬಾರಿ ಸಂಸತ್ತಿನಲ್ಲಿ ಜನಪ್ರತಿನಿಧಿಗಳ ಬೆಂಬಲ ಪಡೆಯಲು ಸೋತಿದೆ. ಇಂದಿರಾಗಾಂಧಿಯಿಂದ ಹಿಡಿದು, ಅಟಲ್ ಬಿಹಾರಿ ವಾಜಪೇಯಿಯಿಂದ ಮನಮೋಹನ ಸಿಂಗ್ ಅವರವರೆಗೆ ಸಂಸದರ ಅನುಮೋದನೆ ಪಡೆಯುವಲ್ಲಿ ವಿಫಲವಾಗಿದೆ. ಈ ಬಾರಿಯಾದರೂ ಮುಂಗಾರು ಅಧಿವೇಶನದಲ್ಲಿ ಜನ ಲೋಕಪಾಲ ಮಸೂದೆ ಮಂಡನೆಯಾಗಿ ಜನಪ್ರತಿನಿಧಿಗಳು ಕೃಪೆಗೆ ಪಾತ್ರವಾಗುವುದೆ?
-
IMD Weather Forecast: ಈ ಭಾಗಗಳಲ್ಲಿ ಮುಂದಿನ 3 ದಿನ ಬಿರುಗಾಳಿ, ಆಲಿಕಲ್ಲು ಸಹಿತ ಭಾರೀ ಮಳೆ -
New Railway Lines: ಬಿರೂರು-ಶಿವಮೊಗ್ಗ ರೈಲು ಹಳಿ ಡಬ್ಲಿಂಗ್, ಮಲೆನಾಡಿನಿಂದ ಕರಾವಳಿ, ಹುಬ್ಬಳ್ಳಿ ಸಂಪರ್ಕಕ್ಕೆ ಒತ್ತಾಯ -
March 19 Horoscope: ಈ ರಾಶಿಯವರಿಗೆ ಶುಭಸುದ್ದಿ, ಇತರರಿಗೆ ಎಚ್ಚರಿಕೆ -
13,00,000 ಕೋಟಿ ರೂಪಾಯಿ ಹೂಡಿಕೆದಾರರ ಹಣ ಉಡೀಸ್, ಭಾರತೀಯ ಷೇರುಪೇಟೆಯಲ್ಲಿ ಬಿರುಗಾಳಿ... Stock Market -
Traffic Advisory: ಮಾ.21 ರಂಜಾನ್ ಪ್ರಯುಕ್ತ ಬೆಂಗಳೂರಿನ ಈ ರಸ್ತೆಗಳಲ್ಲಿ ಸಂಚಾರ ನಿಷೇಧ, ಪರ್ಯಾಯ ಮಾರ್ಗ -
ಬೆಂಗಳೂರಿನಿಂದ ಬೀದರ್-ಕಲಬುರಗಿಗೆ ವಿಮಾನಸೇವೆ: 23ರೊಳಗೆ ಪ್ರಸ್ತಾವನೆ ಸಲ್ಲಿಸಲು ಸೂಚನೆ -
ಕರ್ನಾಟಕ ಉಪಚುನಾವಣೆ: ದಾವಣಗೆರೆ ದಕ್ಷಿಣ, ಬಾಗಲಕೋಟೆ ಕ್ಷೇತ್ರಗಳಿಗೆ ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಿದ ಬಿಜೆಪಿ -
ರೈಲ್ವೆ ಇಲಾಖೆಗೆ ಕರ್ನಾಟಕ ರಕ್ಷಣಾ ವೇದಿಕೆಯಿಂದ ಏ.15ರ ಗಡುವು: ಟಿ.ಎ.ನಾರಾಯಣಗೌಡ ಹೇಳಿದ್ದೇನು -
ವೆಜ್ ಬಿರಿಯಾನಿ 50, ಮಟನ್ ಬಿರಿಯಾನಿಗೆ 180 ರೂಪಾಯಿ ರೇಟ್ ಫಿಕ್ಸ್... Tamil Nadu Election -
Gold Price: ಯುಗಾದಿಗೆ ಚಿನ್ನಪ್ರಿಯರಿಗೆ ಶುಭ ಸುದ್ದಿ: ಚಿನ್ನದ ಬೆಲೆಯಲ್ಲಿ ಭರ್ಜರಿ ಇಳಿಕೆ, ಬೆಳ್ಳಿ ದರ 15,000 ರೂ.ಕುಸಿತ -
ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರ ಸಹೋದರಿ ಜವರಮ್ಮ ನಿಧನ -
ಆಕ್ಸಿಜನ್ ಸಿಲಿಂಡರ್ ನೆರವಿನಿಂದ ಎಸ್ಎಸ್ಎಲ್ಸಿ ಪರೀಕ್ಷೆ ಬರೆದ ವಿದ್ಯಾರ್ಥಿ: ಸಲಾಂ ಎಂದ ದೇಶದ ಜನತೆ












Click it and Unblock the Notifications