ಅಣ್ಣಾ ಚಳವಳಿ ಬೆಂಬಲಿಸಿ ಸುವರ್ಣ ನ್ಯೂಸ್ ರಥ

ಇಂದು ಬೆಂಗಳೂರಿನಲ್ಲಿ ಭ್ರಷ್ಟಾಚಾರದ ವಿರುದ್ಧ ಸುವರ್ಣ ನ್ಯೂಸ್ ರಥವನ್ನು ಹೊರಡಿಸಿದೆ. 'ಭ್ರಷ್ಟರ ಬೆನ್ನತ್ತಿ...' ಎಂಬ ಘೋಷಣೆಯುಳ್ಳ ವಾಹನ ನಗರದಾದ್ಯಂತ ಸಂಚರಿಸಿ ಜನರಲ್ಲಿ ಭ್ರಷ್ಟ ವ್ಯವಸ್ಥೆಯ ವಿರುದ್ಧ ಜಾಗೃತಿ ಮೂಡಿಸುತ್ತಿದೆ. ಇದರ ನೇತೃತ್ವ ವಹಿಸಿರುವ ಸುವರ್ಣ ನ್ಯೂಸ್ ನ ಗೌರೀಶ್ ಅಕ್ಕಿ ಜೊತೆ ನಾಡಿನ ಬಗ್ಗೆ ಕಳಕಳಿಯುಳ್ಳ ನೂರಾರು ಜನ ರಸ್ತೆಯುದ್ದಕ್ಕೂ ನಡಿಗೆಯಲ್ಲಿ ಸಾಗುತ್ತಿದ್ದಾರೆ. ಹಲವರು ದ್ವಿಚಕ್ರ, ನಾಲ್ಕುಚಕ್ರ ವಾಹನಗಳಲ್ಲಿ ಭಾರತೀಯ ಬಾವುಟವನ್ನು ಹಿಡಿದು ಭ್ರಷ್ಟಾಚಾರದ ವಿರುದ್ಧ ಘೋಷಣೆಗಳನ್ನು ಕೂಗುತ್ತ ಸಾಗುತ್ತಿದ್ದಾರೆ.
ಈ ಅಭಿಯಾನಕ್ಕೆ ರಾಜ್ಯಸಭಾ ಸದಸ್ಯ ರಾಜೀವ್ ಚಂದ್ರಶೇಖರ್ ಬೆಂಬಲ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆ 9ಗಂಟೆಗೆ ಜಯನಗರ 9ನೇ ಬಡಾವಣೆಯಿಂದ ಪ್ರಾರಂಭವಾದ ಯಾತ್ರೆ ಟೌನ್ ಹಾಲ್ ಮುಖಾಂತರ ಸಾಗಿ, ಕೋರಮಂಗಲ ಫೋರಂ ಮಾಲ್ ಮೂಲಕ ಸಾಗಿ 4 ಗಂಟೆಗೆ ಹಲಸೂರು ತಲುಪಲಿದೆ. ಸಂಜೆ 6 ಗಂಟೆಗೆ ಬ್ರಿಗೇಡ್ ರಸ್ತೆ ಮತ್ತು ಮಹಾತ್ಮಾ ಗಾಂಧಿ ರಸ್ತೆ ಚೌಕದಲ್ಲಿ ಮುಕ್ತಾಯವಾಗಲಿದೆ.
ದಿನದಿಂದ ದಿನಕ್ಕೆ ವಿರಾಟ್ ರೂಪ ಪಡೆಯುತ್ತಿರುವ ಅಣ್ಣಾ ಚಳವಳಿಗೆ ಬೆಂಗಳೂರು ಮಾತ್ರವಲ್ಲ, ಮೈಸೂರು, ಮಂಡ್ಯ, ಚನ್ನಪಟ್ಟಣ, ಧರ್ಮಸ್ಥಳ, ಹಾಸನ, ಬಳ್ಳಾರಿ ಸೇರಿದಂತೆ ರಾಜ್ಯಾದ್ಯಂತ ಭಾರೀ ಸಂಖ್ಯೆಯಲ್ಲಿ ಜನರು ಧುಮುಕುತ್ತಿದ್ದಾರೆ. ಬಳ್ಳಾರಿಯಲ್ಲಿ ಚೇಂಬರ್ ಆಫ್ ಕಾಮರ್ಸ್ ನೇತೃತ್ವದಲ್ಲಿ ವಿವಿಧ ಸಂಘಟನೆಗಳು ಮತ್ತು ಸಾರ್ವಜನಿಕರು ಏ.8ರಂದು ಪಾದಯಾತ್ರೆ ಕೈಗೊಳ್ಳುತ್ತಿದ್ದಾರೆ. ಪಾದಯಾತ್ರೆಯ ಕೊನೆಯಲ್ಲಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಗುತ್ತಿದೆ.
ಚನ್ನಪಟ್ಟಣದಲ್ಲಿ ಒಗ್ಗೂಡಿರುವ ಮತದಾರರು ಇನ್ನು ಮುಂದೆ ಓಟು ಹಾಕಲು ನೋಟು ಪಡೆಯುವುದಿಲ್ಲ ಎಂದು ಪಣ ತೊಟ್ಟಿದ್ದಾರೆ. ಯಾವುದೇ ಕಾರಣಕ್ಕೂ ಭ್ರಷ್ಟಾಚಾರಕ್ಕೆ ಬೆಂಬಲ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡಿದ್ದಾರೆ.
-
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
ಜಿಯೋ, ಏರ್ಟೆಲ್ಗೆ ಸೆಡ್ಡು ಹೊಡೆಯಲು BSNL ಮಾಸ್ಟರ್ ಪ್ಲಾನ್: ವೊಡಾಫೋನ್ ಐಡಿಯಾ ಜತೆ ಮಹತ್ವದ ಹೆಜ್ಜೆ -
Vande Bharat Express: ಬೆಂಗಳೂರು-ಕಲಬುರಗಿ ಸೇರಿದಂತೆ 4 ರೈಲುಗಳ ವೇಳಾಪಟ್ಟಿ ಪರಿಷ್ಕರಣೆ -
SWR: ವಿಜಯಪುರ-ಮಂಗಳೂರು ಎಕ್ಸ್ಪ್ರೆಸ್ ರೈಲು ಸಂಚಾರದಲ್ಲಿ ಭಾಗಶಃ ರದ್ದು, ವೇಳಾಪಟ್ಟಿ ಗಮನಿಸಿ -
March 21 Horoscope: 12 ರಾಶಿಗಳ ಇಂದುದಿನ ಭವಿಷ್ಯ – ಹಣ, ಆರೋಗ್ಯ, ಕೆಲಸದ ಫಲಿತಾಂಶ -
ಯುವತಿಯರ ಜೊತೆ ಸೆಕ್ಯೂರಿಟಿ ಗಾರ್ಡ್ ಭರ್ಜರಿ ಸ್ಟೆಪ್ಸ್: 'ಬೇಬಿ ಡಾಲ್' ಡ್ಯಾನ್ಸ್ ವಿಡಿಯೋ ಸಖತ್ Viral -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
India Rain Forecast: ಮುಂದಿನ 5 ದಿನ ಈ ಭಾಗಗಳಲ್ಲಿ ವ್ಯಾಪಕ ಮಳೆ, ಉಷ್ಣ ಅಲೆ ಎಚ್ಚರಿಕೆ -
ಶೃಂಗೇರಿ ಮಠದಿಂದ ಶಾಲಾ ಮಕ್ಕಳಿಗೆ ಸುವರ್ಣಾವಕಾಶ: 'ರಾಮಾಯಣ ಪರೀಕ್ಷೆ' ಬರೆದು 50 ಸಾವಿರ ರೂ. ನಗದು ಗೆಲ್ಲಿ -
Gold Price Today: ಇಂದು ಚಿನ್ನ-ಬೆಳ್ಳಿ ದರದಲ್ಲಿ ದಾಖಲೆಯ ಇಳಿಕೆ, 30000 ರೂ ಕುಸಿದ ಬಿಳಿ ಲೋಹ -
Rain Alert: ಕರ್ನಾಟಕದಲ್ಲಿ ಮಾ.27ರವರೆಗೆ ಗುಡುಗು ಸಹಿತ ಮಳೆ, ಕರಾವಳಿಗೆ ಉಷ್ಣ ಅಲೆ ಎಚ್ಚರಿಕೆ












Click it and Unblock the Notifications