ಲೋಕ ಕಾಯುವ ಹತ್ತೂ ಸಮಸ್ತರ ಪಟ್ಟಿ ಸಿದ್ಧ

ಜಂಟಿ ಸಮಿತಿಯ ಪಟ್ಟಿಯನ್ನು ಹಜಾರೆ ಬೆಂಬಲಿಗರಾದ ಸಾಮಾಜಿಕ ಕಾರ್ಯಕರ್ತ ಸ್ವಾಮಿ ಅಗ್ನಿವೇಶ್ ಮತ್ತು ಅರವಿಂದ್ ಕೇಜ್ರಿವಾಲ್ ರೊಂದಿಗೆ ಸಭೆ ನಡೆಸಿದ ನಂತರ ಸರಕಾರದ ವಕ್ತಾರ ಮತ್ತು ಕೇಂದ್ರ ದೂರಸಂಪರ್ಕ ಸಚಿವ ಕಪಿಲ್ ಸಿಬಾಲ್ ಪ್ರಕಟಿಸಿದ್ದಾರೆ. ಅವರೆಲ್ಲರ ಹೆಸರು ಈ ಕೆಳಗಿನಂತಿದೆ.
ಸರಕಾರೇತರ ಪ್ರತಿನಿಧಿಗಳು
* ಮಾಜಿ ಕಾನೂನು ಸಚಿವ ಶಾಂತಿಭೂಷನ್(ಕೊ-ಚೇರ್ಮನ್)
* ಅಣ್ಣಾ ಹಜಾರೆ
* ಲಾಯರ್ ಪ್ರಶಾಂತ್ ಭೂಷನ್
* ಸುಪ್ರಿಂ ಕೋರ್ಟ್ ನ ನಿವೃತ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆ
* ಆರ್ ಟಿಐ ಚಳುವಳಿಗಾರ ಅರವಿಂದ್ ಕೇಜ್ರಿವಾಲಾ
ಸರಕಾರದ ಪ್ರತಿನಿಧಿಗಳು
* ಹಣಕಾಸು ಸಚಿವ ಪ್ರಣಬ್ ಮುಖರ್ಜಿ(ಚೇರ್ಮನ್)
* ದೂರಸಂಪರ್ಕ ಸಚಿವ ಕಪಿಲ್ ಸಿಬಾಲ್
* ಕಾನೂನು ಸಚಿವ ವೀರಪ್ಪ ಮೊಯ್ಲಿ
* ಜಲಸಂಪನ್ಮೂಲ ಸಚಿವ ಸಲ್ಮಾನ್ ಖುರ್ಷಿದ್
* ಗೃಹ ಸಚಿವ ಪಿ ಚಿದಂಬರಂ
ಮಹಾತ್ಮ ಗಾಂಧಿ ಆರಂಭಿಸಿದ ಉಪವಾಸ ಸತ್ಯಾಗ್ರಹದ ಶಕ್ತಿ ಮತ್ತೊಮ್ಮೆ ಅನಾವರಣಗೊಂಡಿದೆ. ಭ್ರಷ್ಟಾಚಾರದಿಂದ ಭಾರತವನ್ನು ಬಚಾವು ಮಾಡಬಲ್ಲ ಶಕ್ತಿಯಿರುವ ಲೋಕಪಾಲ ಮಸೂದೆ ಜಾರಿಗಾಗಿ ಅಣ್ಣಾ ಹಜಾರೆ ಆರಂಭಿಸಿದ ನಿರಶನ ಮತ್ತು ಭಾರತೀಯರೆಲ್ಲರ ಪ್ರತಿಭಟನೆಗೆ ಸರಕಾರ ತಲೆಬಾಗಿದೆ.
ಮಸೂದೆ ಪಾಸಾಗೋದು ಯಾವಾಗ?: ಸರಕಾರವು ಲೋಕಪಾಲ ಮಸೂದೆಯನ್ನು ಸಂಸತ್ತಿನಲ್ಲಿ ನಡೆಯುವ ಮುಂದಿನ ಮುಂಗಾರು ಅಧಿವೇಶನದಲ್ಲಿ ಜಾರಿಗೆ ತರುವ ನಿರೀಕ್ಷೆಯಿದೆ. ಸಂಸತ್ತಿನಲ್ಲಿ ಹಲವಾರು ಮಸೂದೆಗಳು ಗೆದ್ದಲು ತಿನ್ನುತ್ತಿರುವಾಗ ನೂತನ ಮಸೂದೆಗೆ ಅಂಕಿತ ಸಿಗಬಹುದೇ ಎಂಬ ಆತಂಕವೂ ಹೆಚ್ಚಿನವರಿಗಿದೆ. ಮಹಿಳಾ ಮೀಸಲಾತಿ ಮಸೂದೆ ರಾಜ್ಯಸಭೆಯಿಂದ ಮಾತ್ರ ಒಪ್ಪಿಗೆ ಪಡೆದಿದ್ದು ಕಳೆದ ವರ್ಷದಿಂದ ಸಂಸತ್ತಿನಲ್ಲಿ ಕೊಳೆಯುತ್ತಿದೆ.
ಮತ್ತೊಂದು ಸ್ವಾತಂತ್ರ್ಯ: ಆಗಸ್ಟ್ 15ರ ಸಂಸತ್ತಿನ ಮುಂಗಾರು ಅಧಿವೇಶನದಲ್ಲಿ ಲೋಕಪಾಲ ಮಸೂದೆ ಜಾರಿಯಾಗದಿದ್ದಲ್ಲಿ ಅಣ್ಣಾ ಹಜಾರೆ ಮತ್ತು ಬೆಂಬಲಿಗರು ಮತ್ತು ಭಾರತೀಯರೆಲ್ಲರೂ ಸರಕಾರದ ವಿರುದ್ಧ ಬೃಹತ್ ಧರಣಿ ನಡೆಸಲಿದ್ದಾರೆ. ಭಾರತಕ್ಕೆ ಮತ್ತೊಂದು ಸ್ವಾತಂತ್ರ್ಯ ಸಿಗೋ ಸೂಚನೆಗಳು ದಟ್ಟವಾಗಿದೆ.
;-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications