Get Updates
Get notified of breaking news, exclusive insights, and must-see stories!

ಮೇ ತಿಂಗಳಲ್ಲಿ ಸಂತ್ರಸ್ತರ ಕೈಗೆ ಆಸರೆ ಮನೆಗಳ ಕೀಲಿ ಕೈ

Karunakara Reddy
ಬಳ್ಳಾರಿ.ಏ. 9: ಕರ್ನಾಟಕ ರಾಜ್ಯದಲ್ಲಿಯ ಕುಡಿಯುವ ನೀರಿನ ಸಮಸ್ಯೆ ಕುರಿತು ಏಪ್ರಿಲ್ 13ರ ಬುಧವಾರ ಬೆಂಗಳೂರಿನಲ್ಲಿ ವಿಶೇಷ ಸಭೆ ನಡೆಯಲಿದೆ ಎಂದು ಕಂದಾಯ ಸಚಿವ ಜಿ. ಕರುಣಾಕರರೆಡ್ಡಿ ಅವರು ತಿಳಿಸಿದ್ದಾರೆ.ಮಾಧ್ಯಮಗಳ ಜೊತೆ ಶುಕ್ರವಾರ ಮಾತನಾಡಿದ ಅವರು, ರಾಜ್ಯದಲ್ಲಿ ಕುಡಿಯುವ ನೀರು ಪೂರೈಕೆಗಾಗಿ ಕಂದಾಯ ಇಲಾಖೆ 13 ಕೋಟಿ ರುಪಾಯಿಗಳನ್ನು, ಗ್ರಾಮೀಣಾಭಿವೃದ್ದಿ ಮತ್ತು ಪಂಚಾಯತ್ ರಾಜ್ ಇಲಾಖೆಯು 100 ಕೋಟಿ ರುಪಾಯಿಗಳನ್ನು ಬಿಡುಗಡೆ ಮಾಡಿದೆ.

1,800 ಸರ್ವೆಯರ್‌ಗಳ ನೇಮಕದ ಪೂರ್ವಭಾವಿ ಪ್ರಕ್ರಿಯೆ ನಡೆದಿದೆ. ಅರ್ಜಿಗಳನ್ನು ಆಹ್ವಾನಿಸಿ, ಸಿಇಟಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಂದಾಯ ಇಲಾಖೆಯಲ್ಲಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.

ಬಳ್ಳಾರಿ ಜಿಲ್ಲೆಯಲ್ಲಿ ಮೇ 15ರೊಳಗಾಗಿ 4,500ಆಸರೆ ಮನೆಗಳ ನಿರ್ಮಾಣಕಾರ್ಯ ಪೂರ್ಣಗೊಳ್ಳಲಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯಕೂಡ ಶೀಘ್ರದಲ್ಲೇ ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ದಾನಿಗಳ ಸಭೆಯನ್ನು ಕೂಡ ನಡೆಸಲಾಗಿತ್ತು, ದಾನಿಗಳು ತಮ್ಮ ಮಾತನ್ನು ಪೂರೈಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.

ನವಗ್ರಾಮಗಳಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ನವಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರವೇ ಹಸ್ತಾಂತರ ಮಾಡಲಾಗುತ್ತದೆ. ಫಲಾನುಭವಿಗಳು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.

ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಒಟ್ಟು 50 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 9 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲಾ ಮನೆಗಳ ಹಂಚಿಕೆ ಕಾರ್ಯಕೂಡ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.ಜಿಲ್ಲಾಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಸ್. ಮುತ್ತಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+