ಮೇ ತಿಂಗಳಲ್ಲಿ ಸಂತ್ರಸ್ತರ ಕೈಗೆ ಆಸರೆ ಮನೆಗಳ ಕೀಲಿ ಕೈ
1,800 ಸರ್ವೆಯರ್ಗಳ ನೇಮಕದ ಪೂರ್ವಭಾವಿ ಪ್ರಕ್ರಿಯೆ ನಡೆದಿದೆ. ಅರ್ಜಿಗಳನ್ನು ಆಹ್ವಾನಿಸಿ, ಸಿಇಟಿ ಮೂಲಕ ಆಯ್ಕೆ ಮಾಡಲಾಗುತ್ತದೆ. ಕಂದಾಯ ಇಲಾಖೆಯಲ್ಲಿಯ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸರ್ಕಾರ ಬದ್ಧವಾಗಿದೆ ಎಂದು ಅವರು ಹೇಳಿದರು.
ಬಳ್ಳಾರಿ ಜಿಲ್ಲೆಯಲ್ಲಿ ಮೇ 15ರೊಳಗಾಗಿ 4,500ಆಸರೆ ಮನೆಗಳ ನಿರ್ಮಾಣಕಾರ್ಯ ಪೂರ್ಣಗೊಳ್ಳಲಿದೆ. ಉಳಿದ ಮನೆಗಳ ನಿರ್ಮಾಣ ಕಾರ್ಯಕೂಡ ಶೀಘ್ರದಲ್ಲೇ ಕೈಗೆತ್ತಿಕೊಂಡು ತ್ವರಿತವಾಗಿ ಪೂರ್ಣಗೊಳಿಸಲಾಗುತ್ತದೆ. ಈ ನಿಟ್ಟಿನಲ್ಲಿ ದಾನಿಗಳ ಸಭೆಯನ್ನು ಕೂಡ ನಡೆಸಲಾಗಿತ್ತು, ದಾನಿಗಳು ತಮ್ಮ ಮಾತನ್ನು ಪೂರೈಸಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ನವಗ್ರಾಮಗಳಿಗೆ ಮಹಾತ್ಮಗಾಂಧಿ ರಾಷ್ಟ್ರೀಯ ಉದ್ಯೋಗ ಖಾತರಿ ಯೋಜನೆಯಡಿ ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುತ್ತಿದೆ. ಎಲ್ಲಾ ನವಗ್ರಾಮಗಳಿಗೆ ಮೂಲಭೂತ ಸೌಕರ್ಯಗಳನ್ನು ಒದಗಿಸಿದ ನಂತರವೇ ಹಸ್ತಾಂತರ ಮಾಡಲಾಗುತ್ತದೆ. ಫಲಾನುಭವಿಗಳು ಆತಂಕಗೊಳ್ಳುವ ಅಗತ್ಯವಿಲ್ಲ ಎಂದರು.
ರಾಜ್ಯದಲ್ಲಿ ನೆರೆ ಸಂತ್ರಸ್ತರಿಗೆ ಒಟ್ಟು 50 ಸಾವಿರ ಮನೆಗಳನ್ನು ನಿರ್ಮಿಸಲಾಗಿದೆ. ಇನ್ನೂ 9 ಸಾವಿರ ಮನೆಗಳ ನಿರ್ಮಾಣ ಕಾಮಗಾರಿ ಪ್ರಗತಿಯಲ್ಲಿದೆ. ಎಲ್ಲಾ ಮನೆಗಳ ಹಂಚಿಕೆ ಕಾರ್ಯಕೂಡ ಶೀಘ್ರದಲ್ಲೇ ಪ್ರಾರಂಭವಾಗಲಿದೆ ಎಂದು ಅವರು ಹೇಳಿದರು.ಜಿಲ್ಲಾಧಿಕಾರಿ ಅಮ್ಲನ್ ಆದಿತ್ಯ ಬಿಸ್ವಾಸ್, ಜಿಲ್ಲಾ ಪಂಚಾಯತ್ ಮುಖ್ಯಕಾರ್ಯ ನಿರ್ವಹಣಾಧಿಕಾರಿ ಎಸ್. ಮುತ್ತಯ್ಯ ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.