ಕೈಗಾ ಸ್ಥಾವರ ಹೊಗೆ ಆತಂಕ ಬೇಡ

ಶುಕ್ರವಾರ ಮುಂಜಾನೆ 4:30ರ ಹೊತ್ತಿಗೆ ಕೈಗಾ ಜನರೇಟಿಂಗ್ ಸ್ಟೇಶನ್ (ಕೆಜಿಎಸ್)ನ ಘಟಕ ಸಂಖ್ಯೆ ಮೂರರಲ್ಲಿ ಹೊಗೆ ಪತ್ತೆ ಯಂತ್ರವೊಂದು ಎಚ್ಚರಿಕೆಯ ಸದ್ದನ್ನು ಮೊಳಗಿಸಿತ್ತು. ಕೂಡಲೇ 220 ಮೆಗಾ ವ್ಯಾಟ್ ವಿದ್ಯುತ್ ಉತ್ಪಾದನಾ ಸಾಮರ್ಥ್ಯದ ಘಟಕ ಸಂಖ್ಯೆ 3ನ್ನು ಮುಚ್ಚಲಾಯಿತು ಎಂದು ಅಣುಶಕ್ತಿ ನಿಗಮ ತಿಳಿಸಿದೆ.
ಆದರೆ ಸ್ಥಳದಲ್ಲಿ ಪರಿಶೀಲನೆ ನಡೆಸಿದಾಗ, ಅಲ್ಲಿ ಯಾವುದೇ ಅಸಹಜತೆ, ಘಟಕದ ಕಾರ್ಯಕ್ಷಮತೆಯಲ್ಲಿ ವ್ಯತ್ಯಯ ಕಂಡುಬರಲಿಲ್ಲ ಎಂದು ಸ್ಥಾವರದ ನಿರ್ದೇಶಕ ಜೆ.ಪಿ. ಗುಪ್ತಾ ತಿಳಿಸಿದ್ದಾರೆ. ಮೇ ತಿಂಗಳಿಗೆ ಮುಂಚಿತವಾಗಿ ಸ್ಥಾವರದ ಘಟಕ ಸಂಖ್ಯೆ 3ನ್ನು ತಪಾಸಣೆಗೊಳಿಸುವ ಯೋಜನೆಯಿತ್ತು. ಹಾಗಾಗಿ ಸ್ಥಾವರ ಮುಚ್ಚಿರುವುದರಿಂದ ಪರೀಕ್ಷೆಗಳನ್ನು ಈ ಸಂದರ್ಭದಲ್ಲಿ ನಡೆಸಲಾಗುವುದು ಎಂದು ಗುಪ್ತಾ ಹೇಳಿದರು.
ಎಲ್ಲ ಪರೀಕ್ಷೆಗಳನ್ನು ಪೂರ್ಣಗೊಳಿಸಿದ ಬಳಿಕ, ಎಪ್ರಿಲ್ 17ರೊಳಗೆ ಕೆಜಿಎಸ್ ಘಟಕ ಸಂಖ್ಯೆ 3ನ್ನು ಮರಳಿ ಕಾರ್ಯಪ್ರವೃತ್ತಗೊಳಿಸಲಾಗುವುದು ಎಂದು ಎನ್ಪಿಸಿಐಎಲ್ ತಿಳಿಸಿದ್ದಾರೆ. 2007ರ ಮೇ 6ರಂದು ಕೆಜಿಎಸ್ನ ಘಟಕ ಸಂಖ್ಯೆ 3 ಕಾರ್ಯಾರಂಭಗೊಂಡಿತ್ತು. ಪ್ರಸ್ತುತ ಸ್ಥಾವರದ ಘಟಕ ಸಂಖ್ಯೆ 1, 2 ಹಾಗೂ 4 ಸುರಕ್ಷಿತವಾಗಿ ಕಾರ್ಯಾಚರಿಸುತ್ತಿದ್ದು, ಅವು ಸುಮಾರು 560 ಮೆಗಾ ವ್ಯಾಟ್ ಅಣುವಿದ್ಯುತ್ ಉತ್ಪಾದಿಸುತ್ತಿದೆ. ಭಾರತದಲ್ಲಿ ಒಟ್ಟು 20 ಅಣು ಸ್ಥಾವರಗಳು ಕಾರ್ಯ ನಿರ್ವಹಿಸುತ್ತಿದ್ದು, ಒಟ್ಟಾರೆ 4780 ಮೆ.ವ್ಯಾ ಸಾಮರ್ಥ್ಯದ ವಿದ್ಯುತ್ ಉತ್ಪಾದನೆಯಾಗುತ್ತಿದೆ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications