ರಾಮನವಮಿ ಕೊಡುಗೆ ಕಾವೇರಿ ನದಿಗೆ ತೂಗುಸೇತುವೆ

ಇದರಿಂದಾಗಿ ಕೊಡಗು ಮತ್ತು ಮೈಸೂರು ಜಿಲ್ಲೆಗಳ ಗಡಿ ಗ್ರಾಮಗಳ ನಡುವೆ ಸಂಪರ್ಕ ದೊರೆಯಲಿದ್ದು, ದೋಣಿ ಮೂಲಕ, ನದಿಯನ್ನು ಈಜಿ ದಾಟಬೇಕಾದ ಹಾಗೂ ಹತ್ತಾರು ಕಿ.ಮೀ. ದೂರವನ್ನು ಕ್ರಮಿಸಿ ಹೋಗಬೇಕಾದ ತೊಂದರೆ ತಪ್ಪಲಿದೆ.
ತೂಗುಸೇತುವೆ ನಿರ್ಮಿಸಿ ಕೊಡಿ ಎಂಬುವುದು ಕಣಿವೆ ಸುತ್ತಮುತ್ತಲಿನ ಗ್ರಾಮಸ್ಥರು ಮತ್ತು ಪಿರಿಯಾಪಟ್ಟಣ ತಾಲ್ಲೂಕಿನ ದೊಡ್ಡಕಮರವಳ್ಳಿ, ಶ್ಯಾನುಭೋಗನಹಳ್ಳಿ, ಮಂಟಿಕೊಪ್ಪಲು ಮತ್ತಿತರ ಹಳ್ಳಿಗಳ ಜನತೆಯ ಬಹುದಿನದ ಬೇಡಿಕೆಯಾಗಿತ್ತು.
ಈ ಹಳ್ಳಿಗಳ ಜನತೆ ದಿನನಿತ್ಯ ತಮ್ಮ ಕೆಲಸ ಕಾರ್ಯಗಳಿಗಾಗಿ ಕೊಡಗು ಜಿಲ್ಲೆಯನ್ನು ಅವಲಂಭಿಸಿದ್ದು, ಆ ಭಾಗದ ವಿದ್ಯಾರ್ಥಿಗಳು ಕುಶಾಲನಗರ, ಹೆಬ್ಬಾಲೆ, ಶಿರಂಗಾಲ ಶಾಲಾ - ಕಾಲೇಜಿಗೆ ಬರುತ್ತಿದ್ದಾರೆ. ಆದರೆ ಮಳೆಗಾಲದಲ್ಲಿ ನದಿಯಲ್ಲಿ ಪ್ರವಾಹ ಉಕ್ಕಿ ಹರಿದಾಗ ಜನತೆ ನದಿದಾಟಲು ತೊಂದರೆಯುಂಟಾಗಿ ಬಳಸು ದಾರಿಯಲ್ಲಿ ಕುಶಾಲನಗರದಿಂದ ಕೊಪ್ಪ, ಆವರ್ತಿ ಕಡೆಯಿಂದ 15 ರಿಂದ 16 ಕಿ.ಮೀ.ದೂರ ಕ್ರಮಿಸಬೇಕಾಗಿತ್ತು.
ಈ ಮಧ್ಯೆ ನದಿ ದಾಟಲು ಒದಗಿಸಿದ್ದ ನಾಡಾ ದೋಣಿಯೂ ದುಸ್ಥಿತಿಗೀಡಾಗಿದ್ದರಿಂದಾಗಿ ಪರದಾಡುವಂತಾಗಿತ್ತು. ಈ ಸಂದರ್ಭ ಕಣಿವೆ ರಾಮಲಿಂಗೇಶ್ವರ ದೇವಸ್ಥಾನ ಸಮಿತಿ ಕೋರಿಕೆ ಮೇರೆಗೆ ಕಳೆದ ವರ್ಷ ಇದೇ ವೇಳೆಗೆ ಅಂದಿನ ಜಿಲ್ಲಾ ಪಂಚಾಯ್ತಿ ಅಧ್ಯಕ್ಷರಾಗಿದ್ದ ವಿ.ಎಂ.ವಿಜಯ ಅವರು ಜಿ.ಪಂ.ವತಿಯಿಂದ ದೋಣಿ ವ್ಯವಸ್ಥೆ ಕಲ್ಪಿಸಿಕೊಟ್ಟರು. ಆದರೆ ಈ ದೋಣಿ ಕೂಡ ನದಿಯಲ್ಲಿ ಸರಾಗವಾಗಿ ಸಾಗದೆ ನದಿದಂಡೆ ಸೇರಿತು.
ಕಣಿವೆಗೆ ದೋಣಿ ಸೌಲಭ್ಯ ಕಲ್ಪಿಸಬೇಕು ಎಂಬ ಬೇಡಿಕೆ ಬಗ್ಗೆ ಶಾಸಕ ಎಂ.ಪಿ.ಅಪ್ಪಚ್ಚುರಂಜನ್, ಜಿ.ಪಂ.ಮಾಜಿ ಅಧ್ಯಕ್ಷ ಎಚ್.ಎಸ್.ಅಶೋಕ್ ಅವರು ಸರ್ಕಾರಕ್ಕೆ ಹಲವು ಬಾರಿ ಪತ್ರ ಬರೆದು ಮನವಿ ಮಾಡಿಕೊಂಡ ಮೇರೆಗೆ ಇದೀಗ ತೂಗು ಸೇತುವೆಯ ನಿರ್ಮಾಣಕ್ಕೆ ಸರ್ಕಾರ ಮುಂದಾಗಿದೆ.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications