ಮೈಸೂರಿನಲ್ಲಿ ನಕಲಿ ನರ್ಸಿಂಗ್ ಹೋಂಗಳಿಗೆ ಬೀಗ

ಮೈಸೂರಿನಲ್ಲಿ ಚಿಕಿತ್ಸೆ ನೀಡಲು ಅನರ್ಹರಾಗಿರುವಂತಹ ಕೆಲವು ನಕಲಿ ವೈದ್ಯರು ಅಲ್ಲಲ್ಲಿ ಕ್ಲಿನಿಕ್ಗಳನ್ನು ತೆರದು ಅಮಾಯಕರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ನಡುವೆ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಲ್ಯಾಬ್ ಆಪರೇಟರ್, ಕಂಪೌಂಡರ್ಗಳು ಮನೆಯಲ್ಲಿ ವೈದ್ಯರಂತೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಂದ ಹಣ ಕೀಳುತ್ತಿರುವ ಬಗ್ಗೆ ಈ ಹಿಂದೆ ಖಾಸಗಿ ವಾಹಿನಿಯೊಂದು ರಹಸ್ಯ ಕಾರ್ಯಾಚರಣೆ ನಡೆಸಿತ್ತು.
ನಗರದ ಗಲ್ಲಿಗಲ್ಲಿಯಲ್ಲಿ ನಕಲಿ ವೈದ್ಯರು ಕ್ಲಿನಿಕ್ ತೆರದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಜಲ್ಲಾಧಿಕಾರಿ ಹರ್ಷಗುಪ್ತಾ ಅವರ ಬಳಿಗೆ ಹೋಗಿತ್ತು. ಹೀಗಾಗಿ ನಿನ್ನೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ನಗರದಲ್ಲಿರುವ ಕೆಲವು ಖಾಸಗಿ ನರ್ಸಿಂಗ್ ಹೋಂಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಮಂಡಳಿಯ ಸದಸ್ಯರು ದಾಳಿ ನಡೆಸಿದ್ದಾರೆ.
ಮೈಸೂರಿನ ಉದಯಗಿರಿಯ ಮಹದೇವಪುರ ರಸ್ತೆಯಲ್ಲಿರುವ ಲತಾ ನರ್ಸಿಂಗ್ ಹೋಂ, ತಿಲಕ್ ನಗರದ ಶಾಂತಿ ಕ್ಲಿನಿಕ್, ರಾಜೇಂದ್ರನಗರದಲ್ಲಿ ಡಾ.ನಾಗರಾಜ್ ಎಂಬಾತ ನಡೆಸುತ್ತಿದ್ದ ಕ್ಲಿನಿಕ್ ಹಾಗೂ ಉದಯಗಿರಿಯ ಬಯೋಟೆಕ್ ಲ್ಯಾಬ್ವೊಂದಕ್ಕೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳು ಸೂಕ್ತ ನಿರ್ವಹಣೆ ಇಲ್ಲದೆ ಇರುವುದು ಹಾಗೂ ಕೆಲವು ನರ್ಸಿಂಗ್ ಹೋಂಗಳಲ್ಲಿ ಸ್ತ್ರೀರೋಗ ತಜ್ಞರಲ್ಲದವರು ಹೆರಿಗೆ ಮಾಡಿಸುತ್ತಿದ್ದುದನ್ನು ಕಂಡು ಹೌಹಾರಿದರು. ಅಲ್ಲದೆ ಎರಡೇ ಕೊಠಡಿಯ ನರ್ಸಿಂಗ್ ಹೋಂನಲ್ಲಿ ಆಪರೇಷನ್ ಇನ್ನಿತರ ಎಲ್ಲಾ ಚಿಕಿತ್ಸೆಯನ್ನು ಅಲ್ಲಿಯೇ ನೀಡುತ್ತಿರುವುದನ್ನು ಕಂಡು ಆತಂಕಗೊಂಡರು. ಬಳಿಕ ನಾಲ್ಕು ನರ್ಸಿಂಗ್ ಹೋಂಗಳಿಗೆ ಬೀಗ ಮುದ್ರೆ ಹಾಕಲಾಯಿತು.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications