ಮೈಸೂರಿನಲ್ಲಿ ನಕಲಿ ನರ್ಸಿಂಗ್ ಹೋಂಗಳಿಗೆ ಬೀಗ

ಮೈಸೂರಿನಲ್ಲಿ ಚಿಕಿತ್ಸೆ ನೀಡಲು ಅನರ್ಹರಾಗಿರುವಂತಹ ಕೆಲವು ನಕಲಿ ವೈದ್ಯರು ಅಲ್ಲಲ್ಲಿ ಕ್ಲಿನಿಕ್ಗಳನ್ನು ತೆರದು ಅಮಾಯಕರ ಪ್ರಾಣದೊಂದಿಗೆ ಚೆಲ್ಲಾಟವಾಡುತ್ತಿದ್ದಾರೆ ಎಂಬ ಆರೋಪ ಕೇಳಿ ಬಂದಿತ್ತು. ಈ ನಡುವೆ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಲ್ಯಾಬ್ ಆಪರೇಟರ್, ಕಂಪೌಂಡರ್ಗಳು ಮನೆಯಲ್ಲಿ ವೈದ್ಯರಂತೆ ಚಿಕಿತ್ಸೆ ನೀಡುವ ಮೂಲಕ ಸಾರ್ವಜನಿಕರಿಂದ ಹಣ ಕೀಳುತ್ತಿರುವ ಬಗ್ಗೆ ಈ ಹಿಂದೆ ಖಾಸಗಿ ವಾಹಿನಿಯೊಂದು ರಹಸ್ಯ ಕಾರ್ಯಾಚರಣೆ ನಡೆಸಿತ್ತು.
ನಗರದ ಗಲ್ಲಿಗಲ್ಲಿಯಲ್ಲಿ ನಕಲಿ ವೈದ್ಯರು ಕ್ಲಿನಿಕ್ ತೆರದು ಸಾರ್ವಜನಿಕರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂಬ ದೂರು ಜಲ್ಲಾಧಿಕಾರಿ ಹರ್ಷಗುಪ್ತಾ ಅವರ ಬಳಿಗೆ ಹೋಗಿತ್ತು. ಹೀಗಾಗಿ ನಿನ್ನೆ ಸಭೆ ನಡೆಸಿದ ಜಿಲ್ಲಾಧಿಕಾರಿಗಳು ನಗರದಲ್ಲಿರುವ ಕೆಲವು ಖಾಸಗಿ ನರ್ಸಿಂಗ್ ಹೋಂಗಳ ಮೇಲೆ ದಾಳಿ ನಡೆಸಿ ಪರಿಶೀಲಿಸುವಂತೆ ಜಿಲ್ಲಾ ಆರೋಗ್ಯಾಧಿಕಾರಿಗಳಿಗೆ ಸೂಚಿಸಿದ್ದರು. ಅದರಂತೆ ಇಂದು ಆರೋಗ್ಯ ಇಲಾಖೆಯ ಅಧಿಕಾರಿಗಳ ತಂಡ ಹಾಗೂ ಕರ್ನಾಟಕ ಖಾಸಗಿ ವೈದ್ಯಕೀಯ ಮಂಡಳಿಯ ಸದಸ್ಯರು ದಾಳಿ ನಡೆಸಿದ್ದಾರೆ.
ಮೈಸೂರಿನ ಉದಯಗಿರಿಯ ಮಹದೇವಪುರ ರಸ್ತೆಯಲ್ಲಿರುವ ಲತಾ ನರ್ಸಿಂಗ್ ಹೋಂ, ತಿಲಕ್ ನಗರದ ಶಾಂತಿ ಕ್ಲಿನಿಕ್, ರಾಜೇಂದ್ರನಗರದಲ್ಲಿ ಡಾ.ನಾಗರಾಜ್ ಎಂಬಾತ ನಡೆಸುತ್ತಿದ್ದ ಕ್ಲಿನಿಕ್ ಹಾಗೂ ಉದಯಗಿರಿಯ ಬಯೋಟೆಕ್ ಲ್ಯಾಬ್ವೊಂದಕ್ಕೆ ದಾಳಿ ನಡೆಸಿ ಪರಿಶೀಲಿಸಿದ ಅಧಿಕಾರಿಗಳು ಸೂಕ್ತ ನಿರ್ವಹಣೆ ಇಲ್ಲದೆ ಇರುವುದು ಹಾಗೂ ಕೆಲವು ನರ್ಸಿಂಗ್ ಹೋಂಗಳಲ್ಲಿ ಸ್ತ್ರೀರೋಗ ತಜ್ಞರಲ್ಲದವರು ಹೆರಿಗೆ ಮಾಡಿಸುತ್ತಿದ್ದುದನ್ನು ಕಂಡು ಹೌಹಾರಿದರು. ಅಲ್ಲದೆ ಎರಡೇ ಕೊಠಡಿಯ ನರ್ಸಿಂಗ್ ಹೋಂನಲ್ಲಿ ಆಪರೇಷನ್ ಇನ್ನಿತರ ಎಲ್ಲಾ ಚಿಕಿತ್ಸೆಯನ್ನು ಅಲ್ಲಿಯೇ ನೀಡುತ್ತಿರುವುದನ್ನು ಕಂಡು ಆತಂಕಗೊಂಡರು. ಬಳಿಕ ನಾಲ್ಕು ನರ್ಸಿಂಗ್ ಹೋಂಗಳಿಗೆ ಬೀಗ ಮುದ್ರೆ ಹಾಕಲಾಯಿತು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications