ರೈತನನ್ನು ಯೋಗಿಯನ್ನಾಗಿ ಮಾಡಿದ್ದೇ ಕುವೆಂಪು

ರಾಷ್ಟ್ರದ ರಾಜಧಾನಿಯಲ್ಲಿ 'ಕುವೆಂಪು ಸಮಗ್ರ ನೋಟ' ಮೂರು ದಿನಗಳ ರಾಷ್ಟ್ರೀಯ ವಿಚಾರ ಸಂಕಿರಣವನ್ನು ಏ.15ರಂದು ಉದ್ಘಾಟನೆ ಮಾಡಿದ ನಂತರ ಮಾತನಾಡುತ್ತಿದ್ದ ಅವರು, ಕುವೆಂಪು ಅವರು ತಮ್ಮ ಸೃಜನಶೀಲತೆಯನ್ನು ಸಾಮಾಜಿಕ ಪರಿವರ್ತನೆಗೂ ವಿನಿಯೋಗಿಸಿದ್ದಾರೆ. ಇಂಥ ಮಹಾಪುರುಷರ ಸಾನಿಧ್ಯ ತಮಗೆ ದೊರೆತದ್ದು ತಮ್ಮ ಪುಣ್ಯ ಎಂದು ಅವರು ಅಭಿಮಾನದಿಂದ ಹೇಳಿದರು.
ಹದಿಮೂರು ವರ್ಷಗಳ ಕಾಲ ರಾಮಕೃಷ್ಣಾಶ್ರಮದಲ್ಲಿ ಪರಮಹಂಸರ ಶಿಷ್ಯರಾಗಿ, ಅವರ ಉಪದೇಶಗಳನ್ನು, ಆಧ್ಯಾತ್ಮದ ಅನುಭವಗಳನ್ನು ಸ್ವೀಕರಿಸಿಕೊಂಡು ಕನ್ನಡಿಗರಿಗೆ ವಿಪುಲ ಸಾಹಿತ್ಯವನ್ನು ನೀಡಿದ ಕುವೆಂಪು ಜಗತ್ತಿನ ಅನೇಕ ಮಹಾಪುರುಷರ ಚರಿತ್ರೆಯಲ್ಲಿ ಮೇರು ಸ್ಥಾನದಲ್ಲಿ ನಿಲ್ಲುತ್ತಾರೆ ಎಂದು ಅವರು ಹೇಳಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ ಸಂಸತ್ ಸದಸ್ಯ ಮತ್ತು ಕುವೆಂಪು ಪ್ರತಿಷ್ಠಾನದ ಸ್ಥಾಪಕ ಸದಸ್ಯರಾಗಿರುವ ಡಿಬಿ ಚಂದ್ರೇಗೌಡ ಅವರು, ನೇಗಿಲನ್ನು ಉಳುವ ರೈತನನ್ನು ಯೋಗಿಯನ್ನಾಗಿ ಮಾಡಿದ ಮತ್ತೊಬ್ಬ ಕವಿಯನ್ನು ನಾನೆಲ್ಲೂ ಕಂಡಿಲ್ಲ. ಮನುಜ ಮತ, ವಿಶ್ವ ಪಥ ಎಂದು ಸಾರಿದ ವಿಶ್ವಮಾನವ ಕುವೆಂಪು ಅವರು ಕನ್ನಡಿಗರಷ್ಟೇ ಅಲ್ಲ ರಾಷ್ಟ್ರೀಯ ಜನನಾಯಕರು ಕೂಡಾ ಹೌದು, ಅವರನ್ನು ಜನ ಸಾಮಾನ್ಯರು ಕೂಡ ಗುರುತಿಸಿದ್ದಾರೆ. ಸಮನ್ವಯವನ್ನು ಸಾಧಿಸಿದ ಮಹಾನ್ ಕವಿ ಜನಮಾನಸದಲ್ಲಿ ಆಳವಾಗಿ ಬೇರೂರಿದ್ದಾರೆ. ವಾರಣಾಸಿಯಲ್ಲಿ ತುಳಸಿ ರಾಮಾಯಣ ದರ್ಶನ ಭವನ ಇರುವಂತೆ ಕರ್ನಾಟಕದಲ್ಲೂ ಶ್ರೀ ರಾಮಾಯಣ ದರ್ಶನ ಭವನ ಮಾಡಬೇಕಾಗಿದೆ ಎಂಬ ವಿಚಾರವನ್ನು ವ್ಯಕ್ತಪಡಿಸುತ್ತಾ, ಕುವೆಂಪು ಪ್ರತಿಷ್ಠಾನ, ಭಾಷಾಭಾರತಿ ನಡೆದು ಬಂದ ಹಾದಿ, ಸ್ಥಾಪನೆ, ಧ್ಯೇಯೋದ್ದೇಶಗಳ ಕುರಿತು ವಿವರಿಸಿದರು.
ಉದ್ಘಾಟನಾ ಸಮಾರಂಭದ ವಿದ್ವಾಂಸರನ್ನು ಕಡಿದಾಳ್ ಪ್ರಕಾಶ್ ಸ್ವಾಗತಿಸಿದರು. ಕುಪ್ಪಳಿ ಕನ್ನಡ ವಿಶ್ವವಿದ್ಯಾಲಯ, ಕನ್ನಡ ಅಧ್ಯಯನ ಕೇಂದ್ರದ ಮುಖ್ಯಸ್ಥರಾದ ಡಾ. ಹಿ.ಚಿ. ಬೋರಲಿಂಗಯ್ಯ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಹಂಪಿ ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಎ. ಮುರಿಗೆಪ್ಪ, ದೆಹಲಿ ಕರ್ನಾಟಕ ಸಂಘದ ಅಧ್ಯಕ್ಷ ಡಾ. ವೆಂಕಟಾಚಲ ಹೆಗಡೆ, ಕುವೆಂಪು ಪ್ರತಿಷ್ಠಾನದ ಅಧ್ಯಕ್ಷರಾದ ಹಂಪನಾ, ಕರ್ನಾಟಕ ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ಪ್ರೊ. ಎಂ.ಎಚ್. ಕೃಷ್ಣಯ್ಯ, ಕುವೆಂಫು ಭಾಷಾಭಾರತಿ ಅಧ್ಯಕ್ಷ ಪ್ರೊ. ಪ್ರಧಾನ ಗುರುದತ್ ಸಮಾರಂಭದಲ್ಲಿ ಉಪಸ್ಥಿತರಿದ್ದರು. ಡಾ. ಪುರುಷೋತ್ತಮ ಬಿಳಿಮಲೆ ವಿದ್ವಾಂಸರನ್ನು ಪರಿಚಯಿಸುತ್ತಾ ಕಾರ್ಯಕ್ರಮವನ್ನು ನಿರ್ವಹಿಸಿದರು. ಇದೇ ಸಮಾರಂಭದಲ್ಲಿ ಕುವೆಂಪು ಕುರಿತಾದ ಸಾಕ್ಷ್ಯಚಿತ್ರ ಹಾಗೂ ರವಿ ಮರೂರ್ ಅವರ ತಂಡದಿಂದ ಕುವೆಂಪು ಗೀತಗಾಯನ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications