ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಿವಮೊಗ್ಗದಲ್ಲಿ ಎಸ್ಸೆಸ್ಸೆಲ್ಸಿ ಉತ್ತರ ಪತ್ರಿಕೆಗಳು ಬೆಂಕಿಗೆ ಆಹುತಿ

By Rajendra
|
Google Oneindia Kannada News

SSLC answer scripts were burnt in Shimoga
ಶಿವಮೊಗ್ಗ, ಏ.16: ಪರೀಕ್ಷೆ ಇನ್ನೇನು ಮುಗೀತಪ್ಪಾ ಎಂದು ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳು ರಜೆಯ ಮಜೆಯಲ್ಲಿದ್ದಾರೆ. ಆದರೆ ಮೈಸೂರಿನ 2,500 ಎಸ್ಸೆಸ್ಸೆಲ್ಸಿ ವಿದ್ಯಾರ್ಥಿಗಳ ಪಾಲಿಗೆ ಈ ಸಂತಸ ಇಲ್ಲ. ತಮ್ಮದಲ್ಲದ ತಪ್ಪಿಗೆ ಈ ವಿದ್ಯಾರ್ಥಿಗಳು ಮರು ಪರೀಕ್ಷೆ ಬರಯಬೇಕಾದ ಪರಿಸ್ಥಿತಿ ನಿರ್ಮಾಣವಾಗಿದೆ. ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯ ಬೇಜಾಬ್ದಾರಿತನಕ್ಕೆ ವಿದ್ಯಾರ್ಥಿಗಳು ಪರಿತಪಿಸುವಂತಾಗಿದೆ.

ಶಿವಮೊಗ್ಗದಲ್ಲಿ ಮೌಲ್ಯಮಾಪನಕ್ಕಾಗಿ ಸಂಗ್ರಹಿಸಿಡಲಾಗಿದ್ದ ಹಿಂದಿ ಭಾಷೆಯ ಉತ್ತರ ಪತ್ರಿಕೆಗಳ ಸುಮಾರು 16 ಬಂಡಲ್‌ಗಳು ಬೆಂಕಿ ಆಕಸ್ಮಿಕದಲ್ಲಿ ಸುಟ್ಟು ಬೂದಿಯಾಗಿವೆ. ಇವೆಲ್ಲವೂ ಮೈಸೂರು ಜಿಲ್ಲೆಯ ವಿದ್ಯಾರ್ಥಿಗಳ ಉತ್ತರ ಪತ್ರಿಕೆಗಳು. ಪರೀಕ್ಷೆ ಬರೆದು ರಜಾ ಕಳೆಯುತ್ತಿದ್ದ ವಿದ್ಯಾರ್ಥಿಗಳು ಈಗ ಮತ್ತೆ ಪರೀಕ್ಷೆಗೆ ಸಿದ್ಧತೆಗಳನ್ನು ಮಾಡಿಕೊಳ್ಳುವಂತಾಗಿದೆ.

ಉತ್ತರ ಪತ್ರಿಕೆಗಳು ಸುಟ್ಟು ಕರಕಲಾದ ಕಾರಣ, ಮೈಸೂರು ಜಿಲ್ಲೆಯ 14 ಕೇಂದ್ರಗಳಲ್ಲಿ ಪರೀಕ್ಷೆ ಬರೆದಿದ್ದ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ನಡೆಸಲು ಮಂಡಳಿ ನಿರ್ಧರಿಸಿದೆ. ಉತ್ತರ ಪತ್ರಿಕೆಗಳು ಅಷ್ಟೇನು ಹಾನಿಯಾಗಿಲ್ಲ ಎಂದು ಮಂಡಳಿ ಪ್ರತಿಪಾದಿಸುತ್ತಿತ್ತು. ಮಂಡಳಿ ನಿರ್ದೇಶಕರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿದಾಗ ಉತ್ತರ ಪತ್ರಿಕೆಗಳು ಸುಟ್ಟು ಕರಕಲಾಗಿರುವ ಅಂಶ ಬೆಳಕಿಗೆ ಬಂದಿದೆ.

ಈ ಹಿನ್ನೆಲೆಯಲ್ಲಿ ಮರು ಪರೀಕ್ಷೆ ಅನಿವಾರ್ಯವಾಗಿದ್ದು ಒಂದೆರಡು ದಿನಗಳಲ್ಲಿ ದಿನಾಂಕ ಮತ್ತಿರರ ವಿವರಗಳನ್ನು ಪ್ರಕಟಿಸಲಾಗುತ್ತದೆ ಎಂದು ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ. ಆದರೆ ಪರೀಕ್ಷೆ ಮುಗಿಸಿ ರಜೆಯಲ್ಲಿರುವ ವಿದ್ಯಾರ್ಥಿಗಳಿಗೆ ಮರು ಪರೀಕ್ಷೆ ಮಾಹಿತಿ ನೀಡುವುದು ಹೇಗೆ ಎಂಬುದು ಮಂಡಳಿಗೆ ದೊಡ್ಡತಲೆನೋವಾಗಿದೆ. ಮಾಧ್ಯಮಗಳ ಮೂಲಕ ಈ ಬಗ್ಗೆ ತಿಳುವಳಿಕೆ ನೀಡಲು ಮಂಡಲಿ ಮುಂದಾಗಿದೆ.

English summary
Minister for Primary and Secondary Education Vishweshwar Hegde Kageri has said the Karnataka State Secondary Education Examination Board will have to conduct a re-examination for about 2,500 students from Mysore district, whose Hindi answer scripts of the recently held SSLC examination were burnt in an accidental fire.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X