ರಾಜಧಾನಿಯಲ್ಲಿ 'ಕರಗದ' ಮಹೋತ್ಸವ

ಚೈತ್ರ ಹುಣ್ಣಿಮೆಯ ದಿನ ನಡೆಯುವ ಕರಗದ ವೀಕ್ಷಣೆಗೆ ಬೆಂಗಳೂರಿಗರ ಜತೆಗೆ ಚಿಕ್ಕಬಳ್ಳಾಪುರ, ಕೋಲಾರ, ಬೆಂಗಳೂರು ಗ್ರಾಮಾಂತರ ಜಿಲ್ಲೆಗಳಿಂದಲೂ ಭಕ್ತರು ಆಗಮಿಸುತ್ತಾರೆ. ಕರಗ ಮಹೋತ್ಸವ 11 ದಿನಗಳ ಆಚರಣೆಯದ್ದಾಗಿದೆ. ಚೈತ್ರ ಶುಕ್ಲ ಸಪ್ತಮಿಯಿಂದ ಆರಂಭವಾಗಿ ಬಿದಿಗೆಯವರೆಗೆ. ಅಂದರೆ ಇಂದು ಕೊನೆಯ ದಿನ. ರಾತ್ರಿ ಆಚರಣೆ ಇದರ ವಿಶೇಷ.
ಕರಗ ಹೊತ್ತವರ ಅಕ್ಕ-ಪಕ್ಕ ಇರುವ ವೀರಕುಮಾರರು ಗೋವಿಂದಾ, ಗೋವಿಂದಾ ಎನ್ನುವುದು ಎಂಥವರಲ್ಲೂ ಭಕ್ತಿ-ಭಾವ ಹೊಮ್ಮಿಸುತ್ತದೆ. ಶ್ರದ್ಧೆ ಮತ್ತು ಭಕ್ತಿಯ ಪರಾಕಾಷ್ಠೆಯಲ್ಲಿ ಕೂಡಿದ ಈ ಮಹೋತ್ಸವದಲ್ಲಿ ದ್ರೌಪದಿಯ ಮೂರ್ತಿಯನ್ನು ಹೊತ್ತುಕೊಳ್ಳುವ ಗೌರವ ಈ ಬಾರಿಯೂ ಸಿ.ಎಂ. ಲೋಕೇಶ್ ಅವರದ್ದಾಗಿದೆ.
ಕೇಂಪೇಗೌಡರ 500ನೇ ಜಯಂತ್ಯುತ್ಸವ: ತಳಿರು ತೋರಣಗಳಿಂದ ಅಲಂಕೃತಗೊಂಡ ಕಟ್ಟಡಗಳು, ಎಲ್ಲೆಡೆ ರಾರಾಜಿಸುತ್ತಿರುವ ಬಾವುಟಗಳು, ಝಗಮಗಿಸುವ ವಿದ್ಯುತ್ ದೀಪಾಲಂಕಾರ, ಎಲ್ಲೆಲ್ಲೂ ಕೆಂಪೇಗೌಡ ಭಾವಚಿತ್ರಗಳ ಮಿಂಚು, ಒಟ್ಟಾರೆ ಹಬ್ಬದ ವಾತಾವರಣ. ಇದು ನಾಡಪ್ರಭು ಕೆಂಪೇಗೌಡರ ದಿನಾಚರಣೆಗೆ ಅದ್ದೂರಿಯಾಗಿ ಸಿಂಗಾರಗೊಂಡಿರುವ ಬೆಂಗಳೂರು ನಗರದ ಇಂದಿನ ಝಲಕ್. ಇದಕ್ಕೆ ಪುಟವಿಟ್ಟಂತೆ ಇಂದು ಧರ್ಮರಾಯನ ಕರಗವೂ ಮಿಳಿತವಾಗಿದೆ.
ಬಿಬಿಎಂಪಿ ಅಸ್ತಿತ್ವಕ್ಕೆ ಬಂದ ಬಳಿಕ ಇದೇ ಮೊದಲ ಬಾರಿಗೆ ಕೆಂಪೇಗೌಡರ ದಿನಾಚರಣೆ ನಡೆಯುತ್ತಿದೆ. ಪಾಲಿಕೆಯ ಕೇಂದ್ರ ಕಚೇರಿಯಲ್ಲಿ ಭಾನುವಾರ ಸಂಜೆ ಮೇಯರ್ ಎಸ್.ಕೆ. ನಟರಾಜ್ ಅವರು ಕೇಂಪೇಗೌಡ ದಿನಾಚರಣೆಗೆ ಚಾಲನೆ ನೀಡಿದರು. ಇದೇ ಸಂದರ್ಭದಲ್ಲಿ, ಐಟಿ-ಬಿಟಿ ಕ್ಷೇತ್ರದಲ್ಲಿನ ಅಂತಾರಾಷ್ಟ್ರೀಯ ಮಟ್ಟದ ಬೆಳವಣಿಗೆಯ ಸಮ್ಮುಖದಲ್ಲಿ ನಗರದ ಐತಿಹಾಸಿಕ ಪರಂಪರೆ ಎತ್ತ ಸಾಗಿದೆ ಎಂಬ ಪ್ರಶ್ನೆ ಮೂಡಿದೆ.
-
ನಮ್ಮದು ಲವ್ ಜಿಹಾದ್ ಅಲ್ಲ, ಮತಾಂತರವೂ ಇಲ್ಲ, ಹಿಂದೂ ಸಂಪ್ರದಾಯದಂತೆ ವಿವಾಹ: ಮೊನಾಲಿಸಾ-ಫರ್ಹಾನ್ ಖಾನ್ ಸ್ಪಷ್ಟನೆ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Bengaluru Drone Survey: ಬೆಂಗಳೂರಿನಲ್ಲಿ ಆಸ್ತಿಗಳ ಡ್ರೋನ್ ಸರ್ವೇ: ಇದರ ಉದ್ದೇಶವೇನು, ವಿರೋಧವೇಕೆ ಇಲ್ಲಿದೆ ಮಾಹಿತಿ -
ಇರಾನ್ ಸಂಘರ್ಷ: ಭಾರತದ ಪ್ರಯತ್ನಕ್ಕೆ ಫಲ, ಕೊಲ್ಲಿ ಮಾರ್ಗವಾಗಿ ಭಾರತಕ್ಕೆ ಬಂದ ಮೊದಲ ತೈಲ ಟ್ಯಾಂಕರ್ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
ಭಾರತದ ಹಡಗುಗಳಿಗೆ ಭರ್ಜರಿ ಸುದ್ದಿ ನೀಡಿದ ಇರಾನ್, ಗ್ಯಾಸ್ ಸಮಸ್ಯೆ ಇತ್ಯರ್ಥ ಸಾಧ್ಯತೆ | Operation Roaring Lion -
Swamijis: ಬಹುತೇಕ ಕಾವಿಧಾರಿ ಸ್ವಾಮೀಜಿಗಳು ಅವಿವಾಹಿತರು, ಆದರೆ ಅವರೆಲ್ಲರೂ ಬ್ರಹ್ಮಚಾರಿಗಳಲ್ಲ: ರವಿಕೃಷ್ಣ ರೆಡ್ಡಿ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಅರಬ್ ದೇಶಗಳ ಬ್ಯಾಕಿಂಗ್ ಸೇವೆ ಮೇಲೆ ಇರಾನ್ ಸೇನೆ ದಾಳಿ ಸಾಧ್ಯತೆ ಹಿನ್ನೆಲೆ ಕಟ್ಟೆಚ್ಚರ | Operation Roaring Lion -
LPG Gas: ಗೃಹ-ವಾಣಿಜ್ಯ ಸಿಲಿಂಡರ್ ಬುಕಿಂಗ್ ಮಿತಿ, ದಾಸ್ತಾನು ನಿಯಮಗಳೇನು? ಗ್ಯಾಸ್ ದರಪಟ್ಟಿ












Click it and Unblock the Notifications