ಅಕ್ರಮ ಗಣಿಗಾರಿಕೆಯಲ್ಲಿ ಕರ್ನಾಟಕ ನಂ.1

ಇದರಲ್ಲಿ ಸಂಶಯವೇ ಇಲ್ಲ. ಅಕ್ರಮ ಗಣಿಗಾರಿಕೆಯಲ್ಲಿ ಕರ್ನಾಟಕದ ದೇಶದಲ್ಲಿ ಮೊದಲ ಸ್ಥಾನದಲ್ಲಿದೆ ಎಂದು ಬೆಳಗಾವಿಗೆ ತೆರಳುವ ಮುನ್ನ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಭಾರದ್ವಾಜ್ ಪತ್ರಕರ್ತರಿಗೆ ತಿಳಿಸಿದರು. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಬಿಜೆಪಿ ಸರಕಾರದ ವಿರುದ್ಧ ಸಮಯ ಸಿಕ್ಕಾಗಲೆಲ್ಲ ಮಾತಿನ ಚಾಟಿ ಬೀಸುವುದನ್ನು ತಪ್ಪಿಸಿಕೊಳ್ಳದ ಭಾರದ್ವಾಜ್, ಸಿಇಸಿಯೇ ತನ್ನ ವರದಿಯಲ್ಲಿ ಇಲ್ಲಿ ಅಕ್ರಮ ಗಣಿಗಾರಿಕೆ ಅವ್ಯಾಹತವಾಗಿ ನಡೆದಿದೆ ಎಂದು ತಿಳಿಸಿದೆ ಎಂದು ನುಡಿದರು.
ಅಕ್ರಮ ಗಣಿಗಾರಿಕೆ ನಡೆಯುತ್ತಿರುವುದರ ಬಗ್ಗೆ ಯಾರಿಗಾದರೂ ಸಂಶಯವಿದ್ದರೆ ಸಿಇಸಿ ಸಲ್ಲಿಸಿರುವ ವರದಿಯನ್ನು ತರಿಸಿಕೊಂಡ ಓದಲಿ ಎಂದು ಪರೋಕ್ಷವಾಗಿ ಮುಖ್ಯಮಂತ್ರಿಯನ್ನು ಭಾರದ್ವಾಜ್ ತರಾಟೆಗೆ ತೆಗೆದುಕೊಂಡರು. ಸಿಇಸಿ ವರದಿ ಸಲ್ಲಿಸಿದ ನಂತರ, ಅಕ್ರಮ ಗಣಿಗಾರಿಕೆಯಲ್ಲಿ ರೆಡ್ಡಿ ಸಹೋದರರ ಪಾಲಿಲ್ಲ. ಇದು ಕಾಂಗ್ರೆಸ್ ಮತ್ತು ಜೆಡಿಎಸ್ ಪಕ್ಷಗಳ ಬಳುವಳಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಆರೋಪಿಸಿದ್ದರು.
ಸಿಇಸಿ ಸಲ್ಲಿಸಿರುವ ವರದಿಯ ಮೇಲೆ ವಿಚಾರಣೆಯನ್ನು ಏಪ್ರಿಲ್ 22ರಂದು ಸುಪ್ರೀಂ ಕೋರ್ಟ್ ನಡೆಸಲಿದೆ. ಇದರಲ್ಲಿ ರಾಜ್ಯದ 64 ಗಣಿ ಕಂಪನಿಗಳನ್ನು ಮುಚ್ಚಬೇಕೆಂದು ಸಿಇಸಿ ಶಿಫಾರಸು ಮಾಡಿದೆ ಮತ್ತು ಈ ಅಕ್ರಮದಿಂದ ಆಗಿರುವ ನಷ್ಟವನ್ನು ಆಯಾ ಕಂಪನಿಗಳೇ ಭರಿಸಬೇಕೆಂದು ಮನವಿ ಮಾಡಿದೆ. ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿರುವ ಲೋಕಾಯುಕ್ತ ನ್ಯಾ. ಸಂತೋಷ ಹೆಗಡೆ ಅವರು ಇನ್ನೆರಡು ತಿಂಗಳಲ್ಲಿ 2ನೇ ವರದಿಯನ್ನು ಸರಕಾರಕ್ಕೆ ನೀಡುವುದಾಗಿ ನುಡಿದಿದ್ದಾರೆ.
-
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Byadgi Chilli Market: ಬ್ಯಾಡಗಿ ಮೆಣಸಿನಕಾಯಿ ಮಾರುಕಟ್ಟೆ ಮೇಲೆ ಯುದ್ಧದ ಪ್ರಭಾವ, ರಫ್ತು ಸ್ಥಗಿತ -
Gold Price Today: ಆಭರಣ ಪ್ರಿಯರಿಗೆ ಬಿಗ್ ರಿಲೀಫ್: ಬೆಂಗಳೂರಿನಲ್ಲಿ ಚಿನ್ನದ ಬೆಲೆ ದಿಢೀರ್ ಇಳಿಕೆ; ಇಂದಿನ ದರ ಇಲ್ಲಿದೆ -
Horoscope March 9; ಈ ರಾಶಿಯವರ ಅದೃಷ್ಟವೇ ಬದಲಾಗುತ್ತೆ: 12 ರಾಶಿ ಭವಿಷ್ಯ ತಿಳಿಯಿರಿ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
Sensex crash: ಷೇರು ಮಾರುಕಟ್ಟೆಯಲ್ಲಿ ಭಾರಿ ಸಂಚಲನ; ಸೆನ್ಸೆಕ್ಸ್ 2100 ಅಂಕ ಕುಸಿತ -
E-Bus: ಕರ್ನಾಟಕದ ಹೊಸ ಯೋಜನೆಯಡಿ ಗ್ರಾಮೀಣ ಭಾಗಗಳಲ್ಲೂ ಓಡಾಡಲಿವೆ 1950 ಎಲೆಕ್ಟ್ರಿಕ್ ಬಸ್ಗಳು -
Prediction on Donald Trump: ಟ್ರಂಪ್ ಗೆಲುವು, ಇರಾನ್ ಯುದ್ಧ ಭವಿಷ್ಯ: 3 ಭವಿಷ್ಯವಾಣಿಯಲ್ಲಿ 2 ನಿಜ, ಮತ್ತೊಂದೇನು -
ಕರ್ನಾಟಕದಲ್ಲಿ 40 ಡಿಗ್ರಿ ಸೆಲ್ಸಿಯಸ್ ದಾಟಿದೆ ಉಷ್ಣಾಂಶ: ಈಗಿನ್ನೂ ಮಾರ್ಚ್, ಮೇ ಕಥೆ ಹೇಗೆ? ಬಿಸಿಗಾಳಿಗೆ ಬಸವಳಿದ ಜನ -
Sanju Samson: ಟಿ20 ವಿಶ್ವಕಪ್ ಗೆಲುವಿನ ಬಳಿಕ ಕ್ರಿಕೆಟ್ ದೇವರ ಬಗ್ಗೆ ಮನದಾಳದ ಮಾತು ಬಿಚ್ಚಿಟ್ಟ ಸಂಜು ಸ್ಯಾಮ್ಸನ್












Click it and Unblock the Notifications