ಬಳ್ಳಾರಿ : ಮಾನವೀಯತೆಗೆ ಸಿಕ್ಕ ಬೆಲೆ ಇಷ್ಟೇನಾ?

ಕುಸಿದ ಕಟ್ಟಡದ ಅಡಿಯಲ್ಲಿ ಸಿಲುಕಿದ್ದ ಶವಗಳು, ಗಾಯಾಳುಗಳು ಮತ್ತು ಅಳಿದುಳಿದ ಅವಶೇಷಗಳನ್ನು ಹೊರಕ್ಕೆ ತೆಗೆಯಲು ಇದ್ದ ಸ್ಥಳಾಭಾವ ಪರಿಹಾರ ಸಿಬ್ಬಂದಿಯನ್ನು ತೀವ್ರವಾಗಿ ಕಾಡಿತ್ತು. ಆ ಸಂದರ್ಭದಲ್ಲಿ ನೆರೆಮನೆಯ ರವಿಚಂದ್ರನ್ ಅವರ ಮನವೊಲಿಸಿದ ಪಾಲಿಕೆ ಆಯುಕ್ತರ ಮನವಿಯ ಮೇರೆಗೆ, ಮಾನವೀಯತೆಯ ಆಧಾರದ ಮೇಲೆ ತಮ್ಮ ಕಟ್ಟಡ ಧ್ವಂಸಗೊಳಿಸಲು ಅವಕಾಶ ನೀಡಿದ್ದರು. ಇದರಿಂದಾಗಿ ಅನೇಕ ಕಾರ್ಮಿಕರ ಜೀವ ಉಳಿದಿತ್ತು. ಮಲ್ಲಯ್ಯ ಎಂಬಾತ ಪವಾಡಸದೃಶ ಜೀವಂತವಾಗಿ ಹೊರಬಂದಿದ್ದ.
ರವಿಚಂದ್ರನ್ ತೋರಿದ್ದ ಮಾನವೀಯತೆ ಮರೆತ ಪಾಲಿಕೆ, ಘಟನೆ ನಡೆದು 1 ವರ್ಷವಾದರೂ ಇವರಿಗೆ ಪರಿಹಾರ ನೀಡಿರಲಿಲ್ಲ. ಹತಾಶರಾದರೂ ರವಿಚಂದ್ರನ್ ತಮ್ಮ ಹೋರಾಟ ಕೈಬಿಡಲಿಲ್ಲ. ರವಿಚಂದ್ರನ್ ಅವರು ಪರಿಹಾರಕ್ಕಾಗಿ ಕಾರ್ಪೊರೇಟರ್ಗಳನ್ನು ಸಂಪರ್ಕಿಸಿದಾಗಲೆಲ್ಲಾ ಯಡಿಯೂರಪ್ಪ ಅವರ ಸರ್ಕಾರದ ಭವಿಷ್ಯ ಅತಂತ್ರಕ್ಕೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಯಾವೊಬ್ಬ ಕಾರ್ಪೊರೇಟರ್ಗಳು ಕೂಡ ರವಿಚಂದ್ರನ್ಗೆ ಪರಿಹಾರ ನೀಡಿಸಲು ಆಸಕ್ತಿ ತೋರುತ್ತಿರಲಿಲ್ಲ. ಪರಿಹಾರ ನೀಡಬೇಕಾಗಿದ್ದ ಆಯುಕ್ತ ಬಿ. ತಿಮ್ಮಪ್ಪ ಕೂಡ ವರ್ಗವಾದರು.
ತೀವ್ರ ಆತಂಕ್ಕೆ ಈಡಾಗಿದ್ದ ರವಿಚಂದ್ರನ್ ತಮ್ಮ ಹೋರಾಟವನ್ನು ಮುಂದುವರೆಸಿ ಪರಿಹಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆ ವಿಶೇಷ ಅನುದಾನದ ಅಡಿಯಲ್ಲಿ ರುಪಾಯಿ 2,10,150 ಅನ್ನು ಬಿಡುಗಡೆ ಮಾಡಿದ್ದು, ಶಾಸಕ, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರರೆಡ್ಡಿ ಅವರು ಸೋಮವಾರ ಚೆಕ್ ನೀಡಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
Bengaluru Property Tax: ಆಸ್ತಿ ತೆರಿಗೆ ಸ್ವೀಕಾರಕ್ಕಾಗಿ ರಾತ್ರಿ 10ಗಂಟೆವರೆಗೆ ಪಾಲಿಕೆ ಕಚೇರಿ ಓಪನ್ -
Arecanut Price: ದಾವಣಗೆರೆ ಮಾರುಕಟ್ಟೆಯಲ್ಲಿ ರಾಶಿ ಅಡಿಕೆ ಧಾರಣೆ ಭರ್ಜರಿ ಏರಿಕೆ: ಇಲ್ಲಿದೆ ಮಾರ್ಚ್ 30ರ ದರಪಟ್ಟಿ -
Hardik Pandya: ಕೇವಲ 35 ದಿನಗಳಲ್ಲಿ ಕೋಟಿ.. ಕೋಟಿ ಖರ್ಚು ಮಾಡಿದ ಹಾರ್ದಿಕ್ ಪಾಂಡ್ಯ; ಇಲ್ಲಿದೆ ಪಟ್ಟಿ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ












Click it and Unblock the Notifications