ಬಳ್ಳಾರಿ : ಮಾನವೀಯತೆಗೆ ಸಿಕ್ಕ ಬೆಲೆ ಇಷ್ಟೇನಾ?

ಕುಸಿದ ಕಟ್ಟಡದ ಅಡಿಯಲ್ಲಿ ಸಿಲುಕಿದ್ದ ಶವಗಳು, ಗಾಯಾಳುಗಳು ಮತ್ತು ಅಳಿದುಳಿದ ಅವಶೇಷಗಳನ್ನು ಹೊರಕ್ಕೆ ತೆಗೆಯಲು ಇದ್ದ ಸ್ಥಳಾಭಾವ ಪರಿಹಾರ ಸಿಬ್ಬಂದಿಯನ್ನು ತೀವ್ರವಾಗಿ ಕಾಡಿತ್ತು. ಆ ಸಂದರ್ಭದಲ್ಲಿ ನೆರೆಮನೆಯ ರವಿಚಂದ್ರನ್ ಅವರ ಮನವೊಲಿಸಿದ ಪಾಲಿಕೆ ಆಯುಕ್ತರ ಮನವಿಯ ಮೇರೆಗೆ, ಮಾನವೀಯತೆಯ ಆಧಾರದ ಮೇಲೆ ತಮ್ಮ ಕಟ್ಟಡ ಧ್ವಂಸಗೊಳಿಸಲು ಅವಕಾಶ ನೀಡಿದ್ದರು. ಇದರಿಂದಾಗಿ ಅನೇಕ ಕಾರ್ಮಿಕರ ಜೀವ ಉಳಿದಿತ್ತು. ಮಲ್ಲಯ್ಯ ಎಂಬಾತ ಪವಾಡಸದೃಶ ಜೀವಂತವಾಗಿ ಹೊರಬಂದಿದ್ದ.
ರವಿಚಂದ್ರನ್ ತೋರಿದ್ದ ಮಾನವೀಯತೆ ಮರೆತ ಪಾಲಿಕೆ, ಘಟನೆ ನಡೆದು 1 ವರ್ಷವಾದರೂ ಇವರಿಗೆ ಪರಿಹಾರ ನೀಡಿರಲಿಲ್ಲ. ಹತಾಶರಾದರೂ ರವಿಚಂದ್ರನ್ ತಮ್ಮ ಹೋರಾಟ ಕೈಬಿಡಲಿಲ್ಲ. ರವಿಚಂದ್ರನ್ ಅವರು ಪರಿಹಾರಕ್ಕಾಗಿ ಕಾರ್ಪೊರೇಟರ್ಗಳನ್ನು ಸಂಪರ್ಕಿಸಿದಾಗಲೆಲ್ಲಾ ಯಡಿಯೂರಪ್ಪ ಅವರ ಸರ್ಕಾರದ ಭವಿಷ್ಯ ಅತಂತ್ರಕ್ಕೊಳಗಾಗಿತ್ತು. ಈ ಹಿನ್ನೆಲೆಯಲ್ಲಿ ಯಾವೊಬ್ಬ ಕಾರ್ಪೊರೇಟರ್ಗಳು ಕೂಡ ರವಿಚಂದ್ರನ್ಗೆ ಪರಿಹಾರ ನೀಡಿಸಲು ಆಸಕ್ತಿ ತೋರುತ್ತಿರಲಿಲ್ಲ. ಪರಿಹಾರ ನೀಡಬೇಕಾಗಿದ್ದ ಆಯುಕ್ತ ಬಿ. ತಿಮ್ಮಪ್ಪ ಕೂಡ ವರ್ಗವಾದರು.
ತೀವ್ರ ಆತಂಕ್ಕೆ ಈಡಾಗಿದ್ದ ರವಿಚಂದ್ರನ್ ತಮ್ಮ ಹೋರಾಟವನ್ನು ಮುಂದುವರೆಸಿ ಪರಿಹಾರವನ್ನು ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ಬಳ್ಳಾರಿ ಮಹಾನಗರ ಪಾಲಿಕೆ ವಿಶೇಷ ಅನುದಾನದ ಅಡಿಯಲ್ಲಿ ರುಪಾಯಿ 2,10,150 ಅನ್ನು ಬಿಡುಗಡೆ ಮಾಡಿದ್ದು, ಶಾಸಕ, ಕೆಎಂಎಫ್ ಅಧ್ಯಕ್ಷ ಜಿ. ಸೋಮಶೇಖರರೆಡ್ಡಿ ಅವರು ಸೋಮವಾರ ಚೆಕ್ ನೀಡಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications