Get Updates
Get notified of breaking news, exclusive insights, and must-see stories!

ಕರ್ನಾಟಕದಲ್ಲಿ ಗಣಿಗಾರಿಕೆ ಸಂಪೂರ್ಣ ಬಂದ್

Illegal Mining License cancel, Yeddyurappa
ಬೆಂಗಳೂರು, ಏ.19: ಅಕ್ರಮ ಗಣಿಗಾರಿಕೆಯಲ್ಲಿ ಕರ್ನಾಟಕ ದೇಶಕ್ಕೆ ನಂ.1 ಎಂಬ ಪ್ರಮಾಣಪತ್ರ ನೀಡಿದ ರಾಜ್ಯಪಾಲ ಎಚ್ ಭಾರದ್ವಾಜ್ ಅವರ ಹೇಳಿಕೆಯನ್ನು ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಒಪ್ಪಿಕೊಂಡಿದ್ದಾರೆ. ಆದರೆ, ಅಕ್ರಮ ಗಣಿಗಾರಿಕೆ ತಡೆಗಟ್ಟಲು ಕೇಂದ್ರ ಸರ್ಕಾರ ಸೂಕ್ತ ಸಹಕಾರ ನೀಡುತ್ತಿಲ್ಲ. ರಾಜ್ಯದಲ್ಲಿ ಗಣಿಗಾರಿಕೆ ನಡೆಸಲು ನೀಡಿದ್ದ ಅನುಮತಿಯನ್ನು ರದ್ದುಪಡಿಸಲು ಸರ್ಕಾರ ಮುಂದಾಗಿದೆ ಎಂದರು.

ಅಕ್ರಮ ಗಣಿಗಾರಿಕೆಗೆ ಸಂಬಂಧಿಸಿದಂತೆ ಕೇಂದ್ರ ಉನ್ನತಾಧಿಕಾರ ಸಮಿತಿ(ಸಿಇಸಿ) ಸಲ್ಲಿಸಿರುವ ವರದಿಯ ಮೇಲೆ ವಿಚಾರಣೆಯನ್ನು ಏ.21, 22ರಂದು ಸುಪ್ರೀಂ ಕೋರ್ಟ್ ನಡೆಸಲಿದೆ. ಸಿಇಸಿ ತನ್ನ ವರದಿಯಲ್ಲಿ ರಾಜ್ಯದ 64 ಗಣಿ ಕಂಪನಿಗಳನ್ನು ಮುಚ್ಚಬೇಕೆಂದು ಶಿಫಾರಸು ಮಾಡಿದೆ. ಇದೇ ವೇಳೆಗೆ ಗಣಿ ಲೈಸನ್ಸ್ ರದ್ದುಪಡಿಸಿ ಸಿಇಸಿ ಶಿಫಾರಸುಗಳನ್ನು ಜಾರಿಗೆ ತರಲು ಸರ್ಕಾರ ಬದ್ಧವಾಗಿದೆ ಎಂದು ಕೋರ್ಟ್ ನಲ್ಲಿ ಸರ್ಕಾರ ಪ್ರತಿಪಾದಿಸಲಿದೆ.

ಬಳ್ಳಾರಿ ಮತ್ತು ರಾಯಚೂರು ಜಿಲ್ಲೆಯ ಕೆಲವು ಭಾಗಗಳಲ್ಲಿ ಅಕ್ರಮ ಗಣಿಗಾರಿಕೆಗೆ ಸಹಾಯ ಮಾಡುತ್ತಿರುವ ಸರ್ಕಾರಿ ನೌಕರರಿಗೆ ಸರಿಯಾದ ಶಿಕ್ಷೆ ಕಾದಿದೆ. ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿರುವವರು ಯಾರೇ ಆಗಲಿ ಅವರ ವಿರುದ್ಧ ಕಠಿಣ ಕ್ರಮ ಜರುಗಿಸುವಂತೆ ಸೂಚಿಸಲಾಗಿದೆ. ರಫ್ತು ನಿಷೇಧ ನಿರ್ಧಾರವನ್ನು ನಮ್ಮ ಸರ್ಕಾರವೇ ಮೊದಲು ಕೈಗೊಂಡಿದ್ದು ಎಂಬುದನ್ನು ರಾಜ್ಯಪಾಲರು ಮರೆಯಬಾರದು ಎಂದು ಯಡಿಯೂರಪ್ಪ ಹೇಳಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+