ಅಂದು ಐಟಿನಲ್ಲಿ ಇಂದು ಭ್ರಷ್ಟಾಚಾರದಲ್ಲಿ ನಂ.1

ಒಂದು ದಿನದ ಕರ್ನಾಟಕ ಪ್ರವಾಸದಲ್ಲಿರುವ ರಾಹುಲ್ ಗಾಂಧಿ ಇಂದು ಹುಬ್ಬಳ್ಳಿ, ಬಿಜಾಪುರ ಮತ್ತು ಉಡುಪಿಯಲ್ಲಿ ಯುವ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದ ನಂತರ, ಸಂಜೆ ಬೆಂಗಳೂರಿನ ಅರಮನೆ ಮೈದಾನದ ಗಾಯತ್ರಿ ವಿಹಾರದಲ್ಲಿ ಯುವ ಕಾರ್ಯಕರ್ತರೊಂದಿಗೆ ಹಿಂದಿಯಲ್ಲಿ ಸಂವಾದ ನಡೆಸಿದರು. ಈ ಸಂವಾದದಲ್ಲಿ ಎರಡು ದಿನಗಳ ಹಿಂದೆ ಯುವ ಕಾಂಗ್ರೆಸ್ ಸೇರಿದ ಕನ್ನಡ ನಟಿ ರಮ್ಯಾ ಕೂಡ ಭಾಗವಹಿಸಿದ್ದರು.
ಭ್ರಷ್ಟಾಚಾರದಲ್ಲಿ ಅಗ್ರಸ್ಥಾನ ಪಡೆದಿರುವುದರಿಂದ ಅನುಭವಿಸುತ್ತಿರುವವರು ಸಾಮಾನ್ಯ ಜನರು. ಇದರ ವಿರುದ್ಧ ಯುವ ಕಾಂಗ್ರೆಸ್ಸಿಗರೇ ಹೋರಾಟ ಮಾಡಬೇಕು. ಭ್ರಷ್ಟಾಚಾರವನ್ನು ಬೇರು ಸಹಿತ ಕಿತ್ತುಹಾಕಬೇಕು ಎಂದು ರಾಹುಲ್ ಆಗ್ರಹಿಸಿದರು. ಬ್ಲಾಕ್ ಮಟ್ಟದಿಂದ ವಿಧಾನಸೌಧದವರೆಗೆ ಸೂಕ್ತ ವ್ಯಕ್ತಿಯನ್ನು ಆರಿಸುವ ಜವಾಬ್ದಾರಿ ಕಾರ್ಯಕರ್ತರದ್ದು ಎಂದು ಅವರು ನುಡಿದರು.
ಯುವ ಕಾರ್ಯಕರ್ತರೊಂದಿಗೆ ಸಂವಾದ ನಡೆಸಿದ ನಂತರ ಹನ್ನೆರಡು ವರ್ಷಗಳ ನಂತರ ಇತ್ತೀಚೆಗೆ ರಚಿಸಲಾಗಿರುವ ಕೆಪಿಸಿಸಿ ಪದಾಧಿಕಾರಿಗಳ ಸಮಿತಿಗೆ ಆಯ್ಕೆಯಾಗಿರುವವರೊಂದಿಗೆ ಕೂಡ ಮಾತುಕತೆ ನಡೆಸಲಿದ್ದಾರೆ. ಸಮಿತಿ ರಚನೆಯಿಂದ ಅಸಮಾಧಾನಗೊಂಡಿರುವ ಕೆಲ ಹಿರಿಯ ನಾಯಕರೊಂದಿಗೂ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದುಬಂದಿದೆ. ಇಂದು ಆಗಮಿಸಿದ ರಾಹುಲ್ ಅವರನ್ನು ಕೆಪಿಸಿಸಿ ಅಧ್ಯಕ್ಷ ಜಿ ಪರಮೇಶ್ವರ್ ಮತ್ತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಬರಮಾಡಿಕೊಂಡರು.
ನಟಿ ರಮ್ಯಾ ಪೇಚಾಟ : ಯುವ ಕಾಂಗ್ರೆಸ್ ಸೇರಲು ಯುವ ನಾಯಕ ರಾಹುಲ್ ಗಾಂಧಿ ಅವರೇ ಸ್ಫೂರ್ತಿ ಎಂದು ಹೇಳಿದ್ದ ಕನ್ನಡ ನಟಿ ರಮ್ಯಾ [ಗ್ಯಾಲರಿ] ಅವರು ಸಂವಾದದ ನಂತರ ಸಭೆಯಿಂದ ಹೊರಬರಲು ಹರಸಾಹಸ ಪಡಬೇಕಾಯಿತು. ಅರಮನೆ ಮೈದಾನದಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ಅಭಿಮಾನಿಗಳು ಹಂಸಬಿಳುಪಿನ ಸೆಲ್ವಾರ್ ಕಮೀಜ್ ಧರಿಸಿದ್ದ ರಮ್ಯಾ ನೋಡಲು ದುಂಬಾಲುಬಿದ್ದರು.
ರಾಹುಲ್ ಗಿಂದ ರಮ್ಯಾರನ್ನು ಹತ್ತಿರದಿಂದ ನೋಡಲು ಅಭಿಮಾನಿಗಳು ಮುಗಿಬಿದ್ದರಿಂದ ಸಾಕಷ್ಟು ನೂಕುನುಗ್ಗಲು ಉಂಟಾಯಿತು. ಪೊಲೀಸರು ಜನಜಂಗುಳಿಯನ್ನು ನಿಯಂತ್ರಿಸಲು ಹರಸಾಹಸ ಪಡಬೇಕಾಯಿತು. ರಮ್ಯಾರನ್ನು ಸುತ್ತುವರಿದಿದ್ದ ಭದ್ರತಾ ಸಿಬ್ಬಂದಿಗಳು ಕೊನೆಗೂ ಅವರನ್ನು ಸುರಕ್ಷಿತವಾಗಿ ಹೊರತರುವಲ್ಲಿ ಯಶಸ್ವಿಯಾದರು.
-
Gold Price: ಇಳಿಕೆಯತ್ತ ಚಿನ್ನ, ಬೆಳ್ಳಿ ಬೆಲೆ: ಇಂದಿನ ದರವೆಷ್ಟು? ಇಲ್ಲಿದೆ ಮಾಹಿತಿ -
Bengaluru Viral: ಆಟೋ ಚಾಲಕನ ಕ್ರಿಯೇಟಿವಿಟಿಗೆ ಬೆಂಗಳೂರು ನಿಜಕ್ಕೂ ಸೃಜನಶೀಲ ನಗರ ಎಂದ ನೆಟ್ಟಿಗರು -
SSLC ವಿಜ್ಞಾನ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು? ತಜ್ಞರು ಹಾಗೂ ವಿದ್ಯಾರ್ಥಿಗಳು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
ಕೆಡಿ ಹಾಡಿನ ವಿವಾದ; ನಮ್ಮವರೇ ಕಾಲೆಳೆಯುವುದು ಸರಿಯಲ್ಲ: ಪ್ರೇಮ್ ಬೆಂಬಲಕ್ಕೆ ನಿಂತ ಯಶ್ ತಾಯಿ ಪುಷ್ಪ












Click it and Unblock the Notifications