ಇನ್ಫಿಗೆ ಪೈ ರಾಜೀನಾಮೆ ರಹಸ್ಯ ಬಯಲು

ಸಂಪ್ರದಾಯ ಪ್ರಕಾರ ಹಿರಿಯ ಅನುಭವಿಗಳಿಗೆ ಆದ್ಯತೆ ನೀಡಲು ಐಟಿ ಸಂಸ್ಥೆಯಲ್ಲಿ ಸಾಧ್ಯವಿಲ್ಲ ಎಂಬುದು ಬೋರ್ಡ್ ನಲ್ಲಿದ್ದ ಹಲವರಿಗೆ ಮನವರಿಕೆ ಆಗಿಲ್ಲದಿರುವುದು ದುರದೃಷ್ಟದ ಸಂಗತಿ ಎಂದು ಎನ್ಡಿಟಿವಿಗೆ ಮಂಗಳವಾರ ನೀಡಿರುವ ಸಂದರ್ಶನದಲ್ಲಿ ಸಂಸ್ಥೆಯ ನಿರ್ದೇಶಕ ಮಂಡಳಿಯ ಧೋರಣೆಗಳ ವಿರುದ್ಧ ಕಟು ಟೀಕಾ ಪ್ರಹಾರ ಮಾಡಿದ್ದಾರೆ.
ಸಂಸ್ಥೆಯ ಸ್ಥಾಪಕರಾಗಿರುವ ಎನ್ ಆರ್ ನಾರಾಯಣಮೂರ್ತಿ ಮತ್ತವರ ತಂಡದ ಸದಸ್ಯರ ಸಂಪ್ರದಾಯಶೀಲತೆಯ ಕಾರಣ ಇನ್ಫೋಸಿಸ್ ಜಾಗತಿಕ ಸ್ಪರ್ಧೆಯಲ್ಲಿ ಹಿಂದೆ ಬೀಳಬೇಕಾಯಿತು. ತೀವ್ರ ಪೈಪೋಟಿಯಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಹಲವು ರಂಗಗಳಲ್ಲಿ ಸಂಸ್ಥೆಯು ಹಿಂದೆ ಬೀಳಬೇಕಾಯಿತು ಎಂದು ಹೇಳಿದ್ದಾರೆ.
ಯವ ನೇತಾರರು ಬೇಕು:ಯಥಾಸ್ಥಿತಿ ಬದಲಿಗೆ ಹೊಸ ಆಲೋಚನೆ, ಬೆಳವಣಿಗೆಗಳು ನಡೆಯಲು ಮತ್ತು ಆಡಳಿತ ಮಂಡಳಿಗೆ ಹೊಸ ಬಿಸಿ ರಕ್ತ ತುಂಬಲು ಅವಕಾಶ ಮಾಡಿಕೊಡಬೇಕಾಗಿತ್ತು. ಯುವಕರು ಬಂಡಾಯಗಾರರಾಗಿರುತ್ತಾರೆ. ವ್ಯಕ್ತಿಗೆ ವಯಸ್ಸಾಗುತ್ತಿದ್ದಂತೆ ಸಂಪ್ರದಾಯಕ್ಕೆ ಮೊರೆ ಹೋಗುತ್ತಾನೆ. ಇದು ಮಾನವ ಸ್ವಭಾವ ಎಂದು ಪೈ ಅಭಿಪ್ರಾಯಪಟ್ಟಿದ್ದಾರೆ.
ಸಂಸ್ಥೆಯನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ಕಲ್ಪಿಸಲು ತಾವು ತಮ್ಮ ಹುದ್ದೆ ತ್ಯಜಿಸುತ್ತಿರುವುದಾಗಿ ಪೈ ಕಳೆದ ಶುಕ್ರವಾರವಷ್ಟೇ ಹೇಳಿಕೊಂಡಿದ್ದರು. ಆದರೆ, ಹೊಸ ಸಿಇಒ ಆಗಿ ನೇಮಕಗೊಳ್ಳಲಿರುವ ಎಸ್ ಡಿ ಶಿಬುಲಾಲ್ ಅವರ ಕೈಕೆಳಗೆ ಕೆಲಸ ಮಾಡಲು ಇಚ್ಛೆ ಇರದ ಕಾರಣಕ್ಕೆ ಸಂಸ್ಥೆ ತೊರೆಯಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಕಾರ್ಪೊರೇಟ್ ಜಗತ್ತಿನಲ್ಲಿ ಹೊಸ ಸಿಇಒಗಳ ನೇಮಕ ಪ್ರಕ್ರಿಯೆಯಲ್ಲಿಯೇ ಪಾರದರ್ಶಕತೆ ಅಳವಡಿಸಿಕೊಳ್ಳಬೇಕಾದ ಅಗತ್ಯ ಇದೆ ಎಂದು ಪೈ ಪ್ರತಿಪಾದಿಸಿದ್ದಾರೆ.
-
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Gold Price: ದಿಢೀರ್ ಏರಿಕೆ ಕಂಡ ಚಿನ್ನದ ದರ: ಪ್ರತಿ ಗ್ರಾಂಗೆ 14,929 ರೂಪಾಯಿ, ಕೆ.ಜಿಗೆ 2.5 ಲಕ್ಷ ರೂ. ತಲುಪಿದ ಬೆಳ್ಳಿ -
Kannada: ಕರ್ನಾಟಕದಲ್ಲಿರುವ ಬ್ಯಾಂಕ್ಗಳಲ್ಲಿ ಸ್ಪಷ್ಟ ಕನ್ನಡ; ತುಳು, ಕೊಂಕಣಿ ಭಾಷೆಯ ಕಲರವ ಈಗ ಉಳಿದಿಲ್ಲ: ಕವಿರಾಜ್












Click it and Unblock the Notifications