ಇನ್ಫಿಗೆ ಪೈ ರಾಜೀನಾಮೆ ರಹಸ್ಯ ಬಯಲು

ಸಂಪ್ರದಾಯ ಪ್ರಕಾರ ಹಿರಿಯ ಅನುಭವಿಗಳಿಗೆ ಆದ್ಯತೆ ನೀಡಲು ಐಟಿ ಸಂಸ್ಥೆಯಲ್ಲಿ ಸಾಧ್ಯವಿಲ್ಲ ಎಂಬುದು ಬೋರ್ಡ್ ನಲ್ಲಿದ್ದ ಹಲವರಿಗೆ ಮನವರಿಕೆ ಆಗಿಲ್ಲದಿರುವುದು ದುರದೃಷ್ಟದ ಸಂಗತಿ ಎಂದು ಎನ್ಡಿಟಿವಿಗೆ ಮಂಗಳವಾರ ನೀಡಿರುವ ಸಂದರ್ಶನದಲ್ಲಿ ಸಂಸ್ಥೆಯ ನಿರ್ದೇಶಕ ಮಂಡಳಿಯ ಧೋರಣೆಗಳ ವಿರುದ್ಧ ಕಟು ಟೀಕಾ ಪ್ರಹಾರ ಮಾಡಿದ್ದಾರೆ.
ಸಂಸ್ಥೆಯ ಸ್ಥಾಪಕರಾಗಿರುವ ಎನ್ ಆರ್ ನಾರಾಯಣಮೂರ್ತಿ ಮತ್ತವರ ತಂಡದ ಸದಸ್ಯರ ಸಂಪ್ರದಾಯಶೀಲತೆಯ ಕಾರಣ ಇನ್ಫೋಸಿಸ್ ಜಾಗತಿಕ ಸ್ಪರ್ಧೆಯಲ್ಲಿ ಹಿಂದೆ ಬೀಳಬೇಕಾಯಿತು. ತೀವ್ರ ಪೈಪೋಟಿಯಿಂದಾಗಿ ಕಳೆದ ಮೂರು ವರ್ಷಗಳಲ್ಲಿ ಹಲವು ರಂಗಗಳಲ್ಲಿ ಸಂಸ್ಥೆಯು ಹಿಂದೆ ಬೀಳಬೇಕಾಯಿತು ಎಂದು ಹೇಳಿದ್ದಾರೆ.
ಯವ ನೇತಾರರು ಬೇಕು:ಯಥಾಸ್ಥಿತಿ ಬದಲಿಗೆ ಹೊಸ ಆಲೋಚನೆ, ಬೆಳವಣಿಗೆಗಳು ನಡೆಯಲು ಮತ್ತು ಆಡಳಿತ ಮಂಡಳಿಗೆ ಹೊಸ ಬಿಸಿ ರಕ್ತ ತುಂಬಲು ಅವಕಾಶ ಮಾಡಿಕೊಡಬೇಕಾಗಿತ್ತು. ಯುವಕರು ಬಂಡಾಯಗಾರರಾಗಿರುತ್ತಾರೆ. ವ್ಯಕ್ತಿಗೆ ವಯಸ್ಸಾಗುತ್ತಿದ್ದಂತೆ ಸಂಪ್ರದಾಯಕ್ಕೆ ಮೊರೆ ಹೋಗುತ್ತಾನೆ. ಇದು ಮಾನವ ಸ್ವಭಾವ ಎಂದು ಪೈ ಅಭಿಪ್ರಾಯಪಟ್ಟಿದ್ದಾರೆ.
ಸಂಸ್ಥೆಯನ್ನು ಮುನ್ನಡೆಸಲು ಯುವ ಪೀಳಿಗೆಗೆ ಅವಕಾಶ ಕಲ್ಪಿಸಲು ತಾವು ತಮ್ಮ ಹುದ್ದೆ ತ್ಯಜಿಸುತ್ತಿರುವುದಾಗಿ ಪೈ ಕಳೆದ ಶುಕ್ರವಾರವಷ್ಟೇ ಹೇಳಿಕೊಂಡಿದ್ದರು. ಆದರೆ, ಹೊಸ ಸಿಇಒ ಆಗಿ ನೇಮಕಗೊಳ್ಳಲಿರುವ ಎಸ್ ಡಿ ಶಿಬುಲಾಲ್ ಅವರ ಕೈಕೆಳಗೆ ಕೆಲಸ ಮಾಡಲು ಇಚ್ಛೆ ಇರದ ಕಾರಣಕ್ಕೆ ಸಂಸ್ಥೆ ತೊರೆಯಲು ನಿರ್ಧರಿಸಿದ್ದಾರೆ ಎನ್ನುವ ಸುದ್ದಿ ಹರಡಿತ್ತು. ಕಾರ್ಪೊರೇಟ್ ಜಗತ್ತಿನಲ್ಲಿ ಹೊಸ ಸಿಇಒಗಳ ನೇಮಕ ಪ್ರಕ್ರಿಯೆಯಲ್ಲಿಯೇ ಪಾರದರ್ಶಕತೆ ಅಳವಡಿಸಿಕೊಳ್ಳಬೇಕಾದ ಅಗತ್ಯ ಇದೆ ಎಂದು ಪೈ ಪ್ರತಿಪಾದಿಸಿದ್ದಾರೆ.
-
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ -
ಫೈನಲ್ನಲ್ಲಿ ಶಿವಂ ದುಬೆ ಬ್ಯಾಟ್ ಬಳಸಿದ ಬಗ್ಗೆ ರಹಸ್ಯ ಬಿಚ್ಚಿಟ್ಟ ಅಭಿಷೇಕ್ ಶರ್ಮಾ -
New Rent Rules 2026: ಬಾಡಿಗೆದಾರರಿಗೆ ಗುಡ್ನ್ಯೂಸ್: ಆಸ್ತಿದಾರರಿಗೆ ಸಂಕಷ್ಟ, ಹೊಸ ಕಾನೂನಿನ 5 ಪ್ರಮುಖ ಅಂಶಗಳು -
Suryakumar Yadav: ಟಿ20 ವಿಶ್ವಕಪ್ ಗೆದ್ದರೂ ಸೂರ್ಯಕುಮಾರ್ಗೆ ಐಸಿಸಿ ಆಘಾತ, ನಾಯಕತ್ವ ಬದಲಾವಣೆ ನಿರೀಕ್ಷೆ -
LPG Cylinder Booking: ಎಲ್ಪಿಜಿ ಸಿಲಿಂಡರ್ ಬುಕಿಂಗ್ನಲ್ಲಿ ಮಹತ್ವದ ಬದಲಾವಣೆ: ಕೇಂದ್ರ ಸರ್ಕಾರದಿಂದ ಹೊಸ ನಿಯಮ ಜಾರಿ -
Petrol Price Hike: ಗ್ಯಾಸ್ ಸಿಲಿಂಡರ್ ನಂತರ ಪೆಟ್ರೋಲ್ - ಡೀಸೆಲ್ ಬೆಲೆ 20 - 22 ರೂ. ಹೆಚ್ಚಳ ಸಾಧ್ಯತೆ, ಬೆಂಗಳೂರಲ್ಲಿ ಎಷ್ಟಿದೆ -
Vande Bharat Express: ಬೆಂಗಳೂರು, ಹುಬ್ಬಳ್ಳಿ, ಧಾರವಾಡ, ಪುಣೆ ವಂದೇ ಭಾರತ್ ರೈಲುಗಳ ಸಮಯ ಬದಲಾವಣೆ -
Kannada: ಸರ್ಕಾರದ ಈ ಕ್ರಮ ನಿಮ್ಮ ತಾಯಿಯನ್ನು ಕೈಬಿಟ್ಟು, ಬೇರೆಯ ತಾಯಿಯನ್ನು ತಾಯಿ ಎಂದಂತೆ: ನಾರಾಯಣಗೌಡ -
ಬೆಂಗಳೂರಿಗೆ ಇರಾನ್ ಯುದ್ಧದ ಬಿಸಿ: ಇದು ಹೋಟೆಲ್ ಬಂದ್ ಅಲ್ಲ, ನಮ್ಮ ಅಸಹಾಯಕತೆ ಎಂದ ಮಾಲೀಕರು -
ಉಚಿತ ಸೌಲಭ್ಯ ನೀಡಿದರೂ ಸರ್ಕಾರಿ ಶಾಲೆಗಳತ್ತ ಮುಖ ಮಾಡದ ಮಕ್ಕಳು: 3 ವರ್ಷಗಳಲ್ಲಿ ಶೇ.11.20ರಷ್ಟು ದಾಖಲಾತಿ ಕುಸಿತ -
"ನಿನಗೆ ಒಂದು ತಿಂಗಳು, ನನಗೆ ಎರಡು ವರ್ಷ": ಇಶಾನ್ ಕಿಶನ್-ಅಭಿಷೇಕ್ ಶರ್ಮಾ ನಡುವೆ ಜಟಾಪಟಿ -
ತಿರುಮಲಕ್ಕೆ ಹೋಗುತ್ತಿದ್ದ ತುಪ್ಪದ ಟ್ಯಾಂಕರ್ ಪಲ್ಟಿ: ತುಪ್ಪಕ್ಕಾಗಿ ಬಕೆಟ್ ಹಿಡಿದು ಬಂದ ಜನ, ವಿಡಿಯೋ Viral












Click it and Unblock the Notifications