ವೀರಪ್ಪನ್ ಪತ್ನಿ ಮುತ್ತುಲಕ್ಷ್ಮಿ ಇನ್ನು ಸ್ವತಂತ್ರ ಹಕ್ಕಿ

ಒಟ್ಟು ಐದು ಪ್ರಕರಣಗಳಲ್ಲಿ ಆರೋಪಿಯಾಗಿದ್ದ ಮುತ್ತುಲಕ್ಷ್ಮಿಯನ್ನು ರಾಜ್ಯ ಪೊಲೀಸರು 2008ರ ನವೆಂಬರ್ 26ರಂದು ಮೆಟ್ಟೂರಿನಲ್ಲಿ ಬಂಧಿಸಿದ್ದರು. ಎಲ್ಲ ಐದೂ ಪ್ರಕರಣಗಳಲ್ಲಿ ಖುಲಾಸೆಗೊಂಡ ಮುತ್ತುಲಕ್ಷ್ಮಿಯನ್ನು ಗುರುವಾರ ಬೆಂಗಳೂರಿನ ಕಾರಾಗೃಹದಲ್ಲಿ ಬಿಡುಗಡೆ ಮಾಡುವ ನಿರೀಕ್ಷೆಯಿದೆ.
1993ರ ಮೇ 24ರಂದು ಮಹದೇಶ್ವರ ಬೆಟ್ಟ ಠಾಣೆ ಸರಹದ್ದಿನ ರಂಗಸ್ವಾಮಿ ವಡ್ಡುವಿನಲ್ಲಿ ನಡೆದ ಆರು ಪೊಲೀಸರ ಹತ್ಯೆ ಪ್ರಕರಣದಲ್ಲಿ ಸಾಕ್ಷ್ಯಾಧಾರದ ಕೊರತೆಯ ನೆಪವೊಡ್ಡಿ ಮುತ್ತುಲಕ್ಷ್ಮಿ ಮತ್ತು ವೀರಪ್ಪನ್ ನ ಸಹಚರೆ ಪಾಪತ್ತಿ ಎಂಬುವಳನ್ನು ಖುಲಾಸೆಗೊಳಿಸಿದೆ. ತೀರ್ಪು ಪ್ರಕಟವಾದ ಬಳಿಕ ನ್ಯಾಯಾಲಯದ ಆವರಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಳು. ಸಂತೋಷ ತಡೆಯಲಾರದೆ ಭಾವೋದ್ವೇಗಕ್ಕೆ ಒಳಗಾಗಿ ಕಣ್ಣಿರು ಹಾಕುತ್ತಲೇ ಮಾತನಾಡಿದ ಮುತ್ತುಲಕ್ಷ್ಮಿ, ಕೊನೆಗೂ ನನಗೆ ನ್ಯಾಯ ದಕ್ಕಿತು. ಇಬ್ಬರು ಹೆಣ್ಣುಮಕ್ಕಳೊಂದಿಗೆ ಮೆಟ್ಟೂರಿನಲ್ಲಿ ನೆಮ್ಮದಿಯಾಗಿ ಜೀವನ ನಡೆಸುವೆ ಎಂದು ಹೇಳಿದಳು.
ನಾನು ನಿರಪರಾಧಿ. ನನ್ನ ಪತಿ ವೀರಪ್ಪನ್ ಮಾಡಿದ ತಪ್ಪಿಗಾಗಿ ನನ್ನನ್ನು ಜೈಲಿನಲ್ಲಿ ಕೂಡಿಹಾಕಿದ್ದರು. ನನ್ನ ಮೇಲಿರುವ ಎಲ್ಲ ಆರೋಪಗಳಿಂದ ಮುಕ್ತಳಾಗಿ ಹೊರಬರುವ ವಿಶ್ವಾಸ ಹೊಂದಿದ್ದೆ. ನಂಬಿಕೆ ಸುಳ್ಳಾಗಲಿಲ್ಲ. ಎಲ್ಲ ಪ್ರಕರಣಗಳಿಂದಲೂ ಮುಕ್ತಳಾಗಿದ್ದೇನೆ ಎಂದು ಸಂತೋಷಗೊಂಡಳು.
-
Prakash Raj: ‘ಅಪ್ಪನ ಮನೆ ಆಸ್ತಿ ಮಾರ್ತಿದೀರಾ?’: ಕೇಂದ್ರದ ಹೊಸ ನಿಯಮದ ವಿರುದ್ಧ ನಟ ಪ್ರಕಾಶ್ ರಾಜ್ ಟೀಕೆ -
Abhishek Sharma: ದಯವಿಟ್ಟು ಕ್ಷಮಿಸಿ ಎಂದು ಬೇಡಿಕೊಂಡ ಅಭಿಷೇಕ್ ಶರ್ಮಾ -
"ನನ್ನನ್ನೇಕೆ ಮದುವೆಗೆ ಕರೆದಿಲ್ಲ" ಎಂದು ದಬಾಯಿಸಿದ ಪುಟಾಣಿ ಅಭಿಮಾನಿ: ಮನೆಗೆ ಊಟಕ್ಕೆ ಆಹ್ವಾನಿಸಿದ ವಿಜಯ್ ದೇವರಕೊಂಡ-ರಶ್ಮಿಕಾ -
Petrol Price: ಇರಾನ್,ಅಮೆರಿಕ – ಇಸ್ರೇಲ್ ಯುದ್ಧ: ಕಚ್ಚಾ ತೈಲ ದರ ಏರಿಕೆ, ಭಾರತದಲ್ಲಿ ಪೆಟ್ರೋಲ್ ಬೆಲೆ ಶೀಘ್ರ 200 ರೂ. ? -
Viral Video: ಅಮೆರಿಕದ ಯುದ್ಧ ಸ್ಮಾರಕದ ಮುಂದೆ ಭಾರತೀಯ ದಂಪತಿ ಎಡವಟ್ಟು: ಶುರುವಾಯ್ತು ಗಡೀಪಾರು ಭೀತಿ, ವೈರಲ್ ವಿಡಿಯೋ -
Sapthami Gowda: ಅಸಭ್ಯವಾಗಿ ವಿಡಿಯೋ ಚಿತ್ರೀಕರಣ: ಫಿಲ್ಮ್ ಚೇಂಬರ್ ಮೆಟ್ಟಿಲೇರಿದ ಸಪ್ತಮಿ ಗೌಡ, ಸಭೆಯಲ್ಲಿ ಮಹತ್ವದ ತೀರ್ಮಾನ -
Namma Metro Phase 3 Project: ಮೆಟ್ರೋ 2 ಕಾರಿಡಾರ್ ನಿರ್ಮಾಣಕ್ಕೆ 2031ರ ಹೊಸ ಗಡುವು -
"ನಂದಿನಿ" ನಕಲಿ ತುಪ್ಪಕ್ಕೆ ಕೆಎಂಎಫ್ ಕ್ಯೂಆರ್ ಕೋಡ್ ಅಸ್ತ್ರ; ಪತ್ತೆ ಹಚ್ಚುವುದು ಈಗ ಸುಲಭ -
Imd Weather Forecast: ಭಾರೀ ಬಿಸಿಲಿನ ನಡುವೆ ಈ ಭಾಗಗಳಲ್ಲಿ ಮಳೆ: ಐಎಂಡಿ ಮುನ್ಸೂಚನೆ ಇಲ್ಲಿದೆ -
Bengaluru Second Airport: ಬೆಂಗಳೂರಿಗೆ ಟಕ್ಕರ್ ಕೊಡಲು ಬಂದ ತಮಿಳುನಾಡಿಗೆ ಮುಖಭಂಗ, ಹೊಸೂರು ವಿಮಾನ ನಿಲ್ದಾಣ ಕಷ್ಟ -
Sanju Samson Father: ಅಂದು ಮಗನನ್ನು ಅಲೆದಾಡಿಸಿದವರು ಇಂದು ಕ್ಷಮೆ ಕೇಳುತ್ತಿದ್ದಾರೆ: ಸಂಜು ಸ್ಯಾಮ್ಸನ್ ತಂದೆಯ ಭಾವುಕ ನುಡಿ -
Horoscope March 10: ಈ ರಾಶಿಯವರಿಗೆ ಹಣಕಾಸಿನಲ್ಲಿ ಲಾಭ, ಯಾರಿಗೆ ಶುಭ-ಅಶುಭ, ದಿನ ಭವಿಷ್ಯ












Click it and Unblock the Notifications