ಜೋಶಿ ಪಟ್ಟಶಿಷ್ಯ ಮಾಧವ ಗುಡಿ ಗಾನಲೀನ

ಧಾರವಾಡದಲ್ಲಿ ಜನಿಸಿದ್ದ ಮಾಧವ ಗುಡಿ ಅವರು ಸುಮಾರು 12 ವರ್ಷಗಳ ಕಾಲ ಭೀಮಸೇನ ಜೋಶಿ ಅವರಲ್ಲಿ ಹಿಂದೂಸ್ತಾನಿ ಸಂಗೀತ ಅಭ್ಯಾಸ ಮಾಡಿದ್ದರು. ಕಿರಾಣಾ ಘರಾಣಾದಲ್ಲಿ ಅಪ್ರತಿಮ ಸಾಧನೆಗೈದಿದ್ದ ಮಾಧವ ಗುಡಿ ಅವರನ್ನು ಕರ್ನಾಟಕ ಸರಕಾರ ನೀಡುವ ಸಂಗೀತ ನೃತ್ಯ ಅಕಾಡೆಮಿಯ ಪ್ರಶಸ್ತಿ ಹುಡುಕಿಕೊಂಡು ಬಂದಿತ್ತು. ಜೋಶಿ ಮತ್ತು ಗುಡಿ ಅವರ ಜುಗಲಬಂದಿ ಭಾರತದ ಎಲ್ಲಾ ಪ್ರದೇಶಗಳಲ್ಲಿ ಮಾತ್ರವಲ್ಲ ವಿದೇಶದಲ್ಲಿಯೂ ಶ್ರೋತೃಗಳನ್ನು ಮಂತ್ರಮುಗ್ಧರನ್ನಾಗಿಸಿತ್ತು.
ಭೀಮಸೇನ ಜೋಶಿ ಅವರಲ್ಲಿ ಶಿಷ್ಯತ್ವ ಸ್ವೀಕರಿಸುವ ಮೊದಲು ಮಾಧವ ಗುಡಿ ಅವರು ಬಸವರಾಜ ರಾಜಗುರು ಅವರಲ್ಲಿ ಆರಂಭಿಕ ತರಬೇತಿ ಪಡೆದಿದ್ದರು. ಜೋಶಿ ಅವರಂತೆಯೇ ಮಾಧವ ಗುಡಿ ಅವರು ಕರ್ನಾಟಕ ಮತ್ತು ಮಹಾರಾಷ್ಟ್ರದಲ್ಲಿ ಅನೇಕ ಯುವ ಪ್ರತಿಭೆಗಳಿಗೆ ತರಬೇತಿ ನೀಡಿದ್ದಾರೆ. ಮಾಧವ ಗುಡಿಯವರು ಆಕಾಶವಾಣಿಯ ಅಗ್ರ ಕಲಾವಿದರಾಗಿದ್ದರು. ಅವರ ಅಂತ್ಯಕ್ರಿಯೆಯನ್ನು ಸಲಕ ಸರಕಾರಿ ಮರ್ಯಾದೆಗಳೊಂದಿಗೆ ಶುಕ್ರವಾರ ಹೊಸಯಲ್ಲಾಪುರದಲ್ಲಿ ಮಾಡಲಾಯಿತು.
ಗಣ್ಯರ ಸಂತಾಪ : ಖ್ಯಾತ ಹಿಂದೂಸ್ತಾನಿ ಗಾಯಕ ಮಾಧವ ಗುಡಿಯವರನ್ನು ಕಳೆದುಕೊಂಡ ಕರ್ನಾಟಕದ ಸಂಗೀತಲೋಕ ಇಂದು ಬಡವಾಗಿದೆ. ಜೋಶಿ ಅವರ ಶಿಷ್ಯರಾಗಿ ಗುಡಿಯವರು ಅಪ್ರತಿಮ ಸಾಧನೆ ಮಾಡಿದ್ದರು. ಅವರ ನಿಧನದ ದುಃಖವನ್ನು ಭರಿಸಲು ದೇವರು ಅವರ ಕುಟುಂಬ ವರ್ಗದವರಿಗೆ ಶಕ್ತಿಕೊಡಲೆಂದು ಅವರು ಪ್ರಾರ್ಥಿಸಿದ್ದಾರೆ.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಸಣ್ಣ ನೀರಾವರಿ ಖಾತೆ ಸಚಿವ ಗೋವಿಂದ ಎಂ. ಕಾರಜೋಳ, ವಾರ್ತಾ ಇಲಾಖೆ ನಿರ್ದೇಶಕ ಡಾ| ಮುದ್ದು ಮೋಹನ್ ಮತ್ತಿತರ ಗಣ್ಯರು ಗುಡಿ ಅವರ ನಿಧನಕ್ಕೆ ಕಂಬನಿ ಮಿಡಿದಿದ್ದಾರೆ. ಮಾಧವಗುಡಿ ಅವರು ಕಿರಾಣಾ-ಘರಾಣಾ ಪರಂಪರೆಯ ಸರ್ವಶ್ರೇಷ್ಠ ಗಾಯಕರಾಗಿದ್ದರು ಎಂದು ಡಾ: ಮುದ್ದು ಮೋಹನ್ ಅವರು ತಮ್ಮ ಸಂದೇಶದಲ್ಲಿ ತಿಳಿಸಿದ್ದಾರೆ.
-
Bengaluru Second Airport: ಬೆಂಗಳೂರು ಎರಡನೇ ಅಂತರರಾಷ್ಟ್ರೀಯ ವಿಮಾನ ನಿಲ್ದಾಣ: ಜಾಗ ಆಯ್ಕೆ ಕರ್ನಾಟಕಕ್ಕೆ ಬಿಟ್ಟ ಕೇಂದ್ರ -
Weekly Horoscope March 23-29: ಯಾರಿಗೆ ಲಾಭ, ಯಾರಿಗೆ ಸವಾಲು? ಸಂಪೂರ್ಣ ವಿವರ ಇಲ್ಲಿದೆ -
Karnataka weather: ಬೆಂಗಳೂರು ಸೇರಿದಂತೆ 10ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ IMD -
Bengaluru Property: ಬೆಂಗಳೂರಿನ ಪ್ರಾಪರ್ಟಿ, ನಿರ್ಮಾಣ ಹಂತದ ಕಟ್ಟಡ - ರಿಯಲ್ ಎಸ್ಟೇಟ್ಗೆ ಏಕಾಏಕಿ ಪೆಟ್ಟು -
Jobs: ಆಯುಷ್ ಇಲಾಖೆ ನೇಮಕಾತಿ; ಬಿ.ಕಾಂ, ಬಿಬಿಎ ಓದಿದವರಿಗೆ ಬೆಂಗಳೂರಿನಲ್ಲಿ ಭರ್ಜರಿ ಉದ್ಯೋಗಾವಕಾಶ -
March 23 Horoscope: ಈ 3 ರಾಶಿಗಳಿಗೆ ಭಾರಿ ಲಾಭ! ಉಳಿದವರು ಜಾಗ್ರತೆ -
SWR: ಶಿವಮೊಗ್ಗ, ಅರಸೀಕೆರೆ, ಮೈಸೂರು ರೈಲು ಪ್ರಯಾಣಿಕರೇ ಗಮನಿಸಿ: ರೈಲುಗಳ ಪುನರ್ ಸಂಚಾರ -
ಷೇರು ಪೇಟೆ ಧೂಳೀಪಟ: ಹೂಡಿಕೆದಾರರಿಗೆ 10 ಲಕ್ಷ ಕೋಟಿ ಲಾಸ್; ಸೆನ್ಸೆಕ್ಸ್, ನಿಫ್ಟಿ ಶೇ. 2.4ರಷ್ಟು ಇಳಿಕೆ! -
ಏ.1ರಿಂದ ಅರಣ್ಯ ಇಲಾಖೆ ಹೊರಗುತ್ತಿಗೆ ನೌಕರರಿಂದ ಮುಷ್ಕರ: ಈಶ್ವರ್ ಖಂಡ್ರೆ ಮಹತ್ವದ ಸೂಚನೆ -
'ಧುರಂಧರ್ 2' ರಣವೀರ್ ಸಿಂಗ್ ಎಂಟ್ರಿ ದೃಶ್ಯ ಮರುಸೃಷ್ಟಿಸಿದ ಯೂಟ್ಯೂಬರ್: 13 ಮಿಲಿಯನ್ ವೀಕ್ಷಣೆ ಪಡೆದ Viral Video -
Video: ಬೆಂಗಳೂರು ರಸ್ತೆಯಲ್ಲಿ ಯುವಕರ 'ಬಿಯರ್' ದರ್ಬಾರ್: ಬೈಕ್ನಲ್ಲೇ ಟ್ರಿಪಲ್ ರೈಡಿಂಗ್ ಜತೆ ಮದ್ಯಪಾನ -
KPSC- KEA: ಕೆಪಿಎಸ್ಸಿಗೆ ಬಿಗ್ ಶಾಕ್! ಕೃಷಿ ಇಲಾಖೆಯ 945 ಹುದ್ದೆಗಳ ನೇಮಕಾತಿ ಹೊಣೆ ಕೆಇಎಗೆ, ಮಹತ್ವದ ಆದೇಶ












Click it and Unblock the Notifications