ಸಾಯಿ ಟ್ರಸ್ಟ್ ಸೇವೆ ಅಬಾಧಿತ, ಆತಂಕ ಬೇಡ: ರತ್ನಾಕರ್

ಸಾಯಿಬಾಬಾ ಅವರ ಅಂತ್ಯಸಂಸ್ಕಾರದ ಏರ್ಪಾಡುಗಳ ಬಗ್ಗೆ ಮತ್ತು ಟ್ರಸ್ಟ್ ನ ಭವಿಷ್ಯದ ಬಗ್ಗೆ ಚರ್ಚಿಸಲು ಟ್ರಸ್ಟ್ ನ ಪದಾಧಿಕಾರಿಗಳು ಸುದೀರ್ಘ ಸಭೆ ನಡೆಸಿದರು. ಬಾಬಾ ನಿಧನಾನಂತರ ಟ್ರಸ್ಟ್ ನ ಮೊದಲ ಸಭೆ ಇದಾಗಿತ್ತು. ಟ್ರಸ್ಟ್ ಆರಂಭವಾದಾಗಿನಿಂದ ಬಾಬಾ ತಪ್ಪದೇ ಎಲ್ಲ ಸಭೆಗಳಲ್ಲೂ ಪಾಲ್ಗೊಳ್ಳುತ್ತಿದ್ದರು ಎಂಬುದು ಗಮನಾರ್ಹ.
ಸಭೆ ಮುಕ್ತಾಯವಾಗುತ್ತಿದ್ದಂತೆ ರತ್ನಾಕರ್ ಅವರು ಸುದ್ದಿಗಾರರೊಂದಿಗೆ ಮಾತಾಡಿ, ಬಾಬಾ ಸಂಕಲ್ಪಗಳನ್ನು ನಿರ್ವಂಚನೆಯಿಂದ ಪೂರೈಸಲಾಗುವುದು. ಟ್ರಸ್ಟ್ ನ ಎಲ್ಲ ಸದಸ್ಯರೂ ಒಗ್ಗಟ್ಟಿನಿಂದ ಸಮಾಜ ಸೇವೆಯನ್ನು ಮುಂದುವರಿಸಿಕೊಂಡು ಹೋಗಲು ತೀರ್ಮಾನಿಸಿದ್ದಾರೆ ಎಂದು ಅವರು ಹೇಳಿದರು.
ಈಮಧ್ಯೆ, ಪುಟ್ಟಪರ್ತಿಗೆ ಸಂಜೆ ಆಗಮಿಸಿದ ಪ್ರಧಾನಿ ಮನಮೋಹನ್ ಸಿಂಗ್, ವಿದೇಶಾಂಗ ಸಚಿವ ಎಸ್. ಎಂ. ಕೃಷ್ಣ, ಗೃಹ ಸಚಿವ ಚಿದಂಬರಂ, ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ, ಕೇಂದ್ರ ವಾರ್ತಾ ಸಚಿವೆ ಅಂಬಿಕಾ ಸೋನಿ, ಆಂಧ್ರ ಸಿಎಂ ಕಿರಣ್ ಕುಮಾರ್ ರೆಡ್ಡಿ, ಬಿಡದಿಯ ನಿತ್ಯಾನಂದ ಸ್ವಾಮಿ ಮುಂತಾದವರು ಕುಲವಂತ್ ಹಾಲ್ ನಲ್ಲಿ ಬಾಬಾ ಅವರ ಅಂತಿಮ ದರ್ಶನ ಪಡೆದರು.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications