ಮೇಯರ್ ಸ್ಥಾನ ಅಲಂಕರಿಸಲು ಯಾರು ಹಿತವರು ಇವರಲ್ಲಿ ?

ಅಂದಹಾಗೆ ಒಂದು ವರ್ಷದ ಅವಧಿಗೆ ಮೇಯರ್ ಮತ್ತು ಉಪಮೇಯರ್ ಆಯ್ಕೆಗೆ BBMP ಕೌನ್ಸಿಲ್ ಸಭೆ ಏಪ್ರಿಲ್ 29ರಂದು ಸೇರಲಿದೆ. ರೂಪಾ ಅವರು ಹುದ್ದೆ ನಿಭಾಯಿಸುವ ಚಾಕಚಕ್ಯತೆ ಹೊಂದಿದ್ದಾರೆ ಎನ್ನಬಹುದು. ಆದರೆ ರಾಜಕೀಯ ಸಮೀಕರಣದಲ್ಲಿ ಶಾರದಮ್ಮ ರಾಮಾಂಜನೇಯ ಕೈಮೇಲಾಗುವ ಸಾಧ್ಯತೆ ಇದೆ. ಕುತೂಹಲಕಾರಿ ಸಂಗತಿಯೆಂದರೆ ಕಣದಲ್ಲಿರುವ ಇಬ್ಬರೂ ಮೊದಲ ಬಾರಿಗೆ ಬಿಬಿಎಂಪಿಗೆ ಆಯ್ಕೆಯಾಗಿದ್ದಾರೆ.
ಐದನೇ ಮಹಿಳಾ ಮೇಯರ್ ಆಯ್ಕೆಗಾಗಿ ಆಡಳಿತಾರೂಢ ಬಿಜೆಪಿಯ ಹಿರಿಯ ನಾಯಕರು ಮಂಗಳವಾರ ಹೋಟೆಲೊಂದಲ್ಲಿ ಸಭೆ ನಡೆಸಿದರು. ಆದರೆ ಯಾರದೇ ಹೆಸರನ್ನು ಅಂತಿಮಗೊಳಿಸಲು ಅವರಿಗೆ ಸಾಧ್ಯವಾಗಿಲ್ಲ. ಗೃಹ ಸಚಿವ ಆರ್. ಅಶೋಕ್ ಅವರು ಶಾರದಮ್ಮ ಆಯ್ಕಗೆ ಒಲವು ತೋರಿದ್ದರೆ ಶಾಸಕ ಸತೀಶ್ ರೆಡ್ಡಿ ಅವರು ರೂಪಾ ಅವರೇ ಮೇಯರ್ ಆಗಬೇಕೆಂದು ಭಾರಿ ಹೋರಾಟ ನಡೆಸಿದ್ದಾರೆ.
ಇನ್ನು, ಉಪಮೇಯರ್ ಸ್ಥಾನಕ್ಕೆ ಪರಿಶಿಷ್ಟ ವರ್ಗಕ್ಕೆ (ಎ ಕೆಟಗರಿ) ಮೀಸಲಾಗಿದೆ. ಇದು ಶಾಕಾಬಾಯಿ ನಗರದ ಬಿ. ಸೋಮಶೇಖರ್ ಅವರ ಪಾಲಾಗುವ ಸಾಧ್ಯತೆ ಇದೆ. ಇವರು ಬಿಜೆಪಿ ಅಧ್ಯಕ್ಷ ಈಶ್ವರಪ್ಪ ಅವರ ನಿಕಟವರ್ತಿ ಜತೆಗೆ ಜಾಂತಿಬಾಂಧವರು ಹೌದು.
ಬೆಂಗಳೂರಿನಂತಹ ಮಹತ್ವದ ನಗರಕ್ಕೆ ಉತ್ತಮ ಶಿಕ್ಷಣದ ಜತೆಗೆ ಸಮರ್ಥವಾಗಿ ಆಡಳಿತ ನಿಭಾಯಿಸುವ ಸಾಮರ್ಥ್ಯವೂ ಇರಬೇಕು. ಈ ಹಿನ್ನೆಲೆಯಲ್ಲಿ ಮೇಯರ್ ಗಾದಿಯಲ್ಲಿ ಯಾರು ಕುಳಿತುಕೊಳ್ಳುತ್ತಾರೋ ನೋಡಬೇಕಿದೆ. BBMPಯ ಒಟ್ಟು ಕೌಲ್ಸಿಲರ್ ಗಳ ಸಂಖ್ಯೆ 198. ಪದವೀಧರರು 26 ಮಂದಿ. ಎಸ್ಎಸ್ಎಲ್ ಸಿಗಿಂತ ಕಡಿಮೆ ಓದಿರುವವರ ಸಂಖ್ಯೆ 60. ಉಳಿದವರೆಲ್ಲ ಪಿಯುಸಿ, ಡಿಪ್ಲೊಮಾ, ಐಐಟಿ ಮಾಡಿದ್ದಾರೆ.
ಈ ಮಧ್ಯೆ, ಎಂ.ಟೆಕ್ ಮಾಡಿರುವ ನಮ್ಮ ಉಪ ಮೇಯರ್ ಎನ್. ದಯಾನಂದ ಅವರ ವಿವಾಹ ಇಂದು ಅಸ್ಟಿನ್ ಟೌನ್ ನ ಜಸ್ಮಾ ಮಂದಿರದಲ್ಲಿ ಅದ್ದೂರಿಯಾಗಿ ನಡೆದಿದೆ. ಅವರ ವೈವಾಹಿಕ ಜೀವನಕ್ಕೆ ಶುಭವಾಗಲಿ.
-
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
B Khata: ಬಿ ಖಾತಾದಿಂದ ಎ ಖಾತಾ ಪರಿವರ್ತನೆ ಸವಾಲುಗಳು: ವೆಚ್ಚ, ಪ್ರಕ್ರಿಯೆ ಸ್ವಂತ ವಿವರ ಹಂಚಿಕೊಂಡ ಆಸ್ತಿದಾರ ಶ್ರೀನಿವಾಸ ಮಠ -
Rain in Karnataka: ಬಿರು ಬಿಸಿಲಿನ ನಡುವೆ ಬೆಂಗಳೂರು ಸೇರಿ ಕರ್ನಾಟಕದ ಈ ಜಿಲ್ಲೆಗಳಲ್ಲಿ ನಾಲ್ಕು ದಿನ ಮಳೆ: ಐಎಂಡಿ ರಿಪೋರ್ಟ್ -
ವಿಶ್ವಕಪ್ ಕಿರೀಟದ ಹಿಂದೆ ದೈವಬಲ: ಕರಾವಳಿಯ ಅಳಿಯ ಸೂರ್ಯಕುಮಾರ್ ಯಾದವ್ ನಡೆಗೆ ಮೆಚ್ಚುಗೆಗಳ ಸುರಿಮಳೆ -
New Airport: 3 ಜಿಲ್ಲೆ ಜನರ ಅನುಕೂಲಕ್ಕಾಗಿ ಸರ್ಕಾರದ ಮಾಸ್ಟರ್ ಪ್ಲ್ಯಾನ್: ಬಳ್ಳಾರಿ ಬಳಿ ಹೊಸ ಏರ್ಪೋರ್ಟ್ -
KSRTC: ಸಾರಿಗೆ ಲೋಕಕ್ಕೆ 'ಪಲ್ಲಕ್ಕಿ' ಮೆರುಗು: ವಿಶ್ವ ಮಹಿಳಾ ದಿನಾಚರಣೆ ಪ್ರಯುಕ್ತ 115 ಹೊಸ ಬಸ್ಗಳ ಲೋಕಾರ್ಪಣೆ -
ಬೆಂಗಳೂರಲ್ಲಿ ಗ್ಯಾಸ್ ಏಜೆನ್ಸಿಗಳ ಭರ್ಜರಿ ದಂಧೆ: ಸಿಲಿಂಡರ್ ಸಿಗದೇ ಗ್ರಾಹಕರು ಕಂಗಾಲು; ಕಾಳಸಂತೆಯಲ್ಲಿ ₹3,000ಕ್ಕೆ ಮಾರಾಟ -
LPG Gas: ಎಲ್ಪಿಜಿ ನಿಯಮಗಳಲ್ಲಿ ಭಾರೀ ಬದಲಾವಣೆ; ಗ್ರಾಹಕರು ದೂರು ನೀಡಲು ಸಹಾಯವಾಣಿ ಸಂಖ್ಯೆಗಳ ಬಿಡುಗಡೆ -
Gold Rate March 13: ಸತತ 3ನೇ ದಿನವೂ ಚಿನ್ನ - ಬೆಳ್ಳಿ ಬೆಲೆ ಭರ್ಜರಿ ಕುಸಿತ, ಎಷ್ಟಾಗಿದೆ ಇಂದಿನ ಬಂಗಾರದ ಬೆಲೆ -
Resort: ಕರ್ನಾಟಕದಲ್ಲಿ ಶುರುವಾಯ್ತು ರೆಸಾರ್ಟ್ ರಾಜಕೀಯ: ‘ಅವರು ನಮ್ಮ ಅತಿಥಿಗಳು’ ಎಂದ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ -
Horoscope March 13: ಈ ರಾಶಿಯವರ ಬದುಕಲ್ಲಿ ಸಕಾರಾತ್ಮಕ ಬೆಳವಣಿಗೆ, ಅಧಿಕ ಲಾಭ; ದಿನ ಭವಿಷ್ಯ












Click it and Unblock the Notifications