ಕಚೇರಿ ಉದ್ಘಾಟನೆಗಷ್ಟೇ ಸೀಮಿತವಾದ ಆಡ್ವಾಣಿ ಭೇಟಿ

ಗಮನಾರ್ಹವೆಂದರೆ, ಹಿರಿಯ ನಾಯಕನ ಬೆಂಗಳೂರು ಭೇಟಿಯು ಉದ್ಘಾಟನೆಗಷ್ಟೇ ಸೀಮಿತಗೊಂಡಿತ್ತಾದರೂ ಉದ್ಘಾಟನೆಯ ವೇಳೆ ನೆರೆದಿದ್ದ ಪಕ್ಷದ ಕಾರ್ಯಕರ್ತರಿಗೆ 'ಕಚೇರಿ ಕಟ್ಟಿದ್ದು ಆಯಿತು. ಇದರ ಜತೆಗೆ ಪಕ್ಷವನ್ನೂ ಕಟ್ಟಲೂ ಶ್ರಮಿಸಿ' ಎಂದು ಚುಟುಕಾಗಿ ಹೇಳಿ ಮಾತು ಮುಗಿಸಿದರು.
ಕುತೂಹಲದ ಸಂಗತಿಯೆಂದರೆ ಅವರು ಪಕ್ಷದ ಭಿನ್ನಮತೀಯರು, ಸಚಿವರು, ಪಕ್ಷದ ನಾಯಕರು ಕೊನೆಗೆ ಮಾಧ್ಯಮದವರನ್ನೂ ಭೇಟಿಯಾಗದೆ ವಾಪಸಾದರು. ಪಕ್ಷದ ಹಲವು ಶಾಸಕರು, ಸಂಸದರು ಅಡ್ವಾಣಿ ಅವರನ್ನು ಪ್ರತ್ಯೇಕವಾಗಿ ಭೇಟಿ ಮಾಡಿ, ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ದೂರು ನೀಡಲು ಹೊಂಚುಹಾಕಿದರಾದರೂ ಪಕ್ಷದ ಅಧ್ಯಕ್ಷ ಈಶ್ವರಪ್ಪ ಅವರು ಜಪ್ಪಯ್ಯ ಅಂದರೂ ಅದಕ್ಕೆ ಅವಕಾಶ ನೀಡಲಿಲ್ಲ.
ವಾಸ್ತವವಾಗಿ ರಾಜ್ಯ ಬಿಜೆಪಿಯಲ್ಲಿ ಭಿನ್ನಮತ ಕೊತಕೊತನೆ ಕುದಿಯುತ್ತಿರುವ ಬಗ್ಗೆ ಸ್ಪಷ್ಟ ಅರಿವು ಹೊಂದಿರುವ ಅಡ್ವಾಣಿ ಬೆಂಗಳೂರು ಭೇಟಿಗೆ ಒಲವು ಹೊಂದಿರಲಿಲ್ಲ. ಬಹಳ ಹಿಂದೆಯೇ ಭೇಟಿಯನ್ನು ನಿಗದಿಪಡಿಸಲಾಗಿತ್ತು. ಆದರೆ ಇತ್ತೀಚೆಗೆ ಯಡಿಯೂರಪ್ಪ ವಿರುದ್ಧ ಆರೋಪಗಳು ಹೆಚ್ಚಾದಾಗ ಬೆಂಗಳೂರು ಭೇಟಿಯನ್ನು ರದ್ದುಪಡಿಸುವ ಬೆದರಿಕೆಯೊಡ್ಡಿದ್ದರು. ಕಚೇರಿ ಉದ್ಘಾಟನೆ ಸಮಾರಂಭದಲ್ಲಿ ಪಕ್ಷದ ರಾಜ್ಯಾಧ್ಯಕ್ಷ ಕೆ. ಎಸ್. ಈಶ್ವರಪ್ಪ, ಮುಖ್ಯಮಂತ್ರಿ ಯಡಿಯೂರಪ್ಪ, ಸಂಸದ ಅನಂತಕುಮಾರ್, ಸದಾನಂದ ಗೌಡ ಮುಂತಾದವರು ಉಪಸ್ಥಿತರಿದ್ದರು.
-
Hardik Pandya: ವಾಂಖೆಡೆ ಸ್ಟೇಡಿಯಂ ಸಿಬ್ಬಂದಿಗೆ ನೀಡಿದ್ದ ಸಹಾಯಹಸ್ತದ ಮಾತು ಉಳಿಸಿಕೊಂಡ ಹಾರ್ದಿಕ್ ಪಾಂಡ್ಯ -
Karnataka Rain: ಬೇಸಿಗೆಯಲ್ಲೂ ಮಳೆರಾಯನ ಆರ್ಭಟ: ಏಪ್ರಿಲ್ 4ರವರೆಗೆ ಕರ್ನಾಟಕದ 16 ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ -
Gold Rate Today: ವಾರದ ಆರಂಭದಲ್ಲೇ ಚಿನ್ನದ ಬೆಲೆ ಕುಸಿತ; 100 ಗ್ರಾಂ ಖರೀದಿಸಿದರೆ 8,100 ರೂಪಾಯಿವರೆಗೆ ಉಳಿತಾಯ -
ಬೆಂಗಳೂರು ಬಿಸಿನೆಸ್ ಕಾರಿಡಾರ್ ಯೋಜನೆಗೆ ಚಾಲನೆ: ಕಾಮಗಾರಿಗೆ 3,348 ಕೋಟಿ ರೂ ಟೆಂಡರ್ ಆಹ್ವಾನ -
Kerosene: ಎಲ್ಪಿಜಿ ಸಮಸ್ಯೆಗೆ ಕೇಂದ್ರದಿಂದ ಹೊಸ ಪರಿಹಾರ: ಮತ್ತೆ ಸಿಗಲಿದೆ ಸೀಮೆಎಣ್ಣೆ, ಪೆಟ್ರೋಲ್ ಬಂಕ್ಗಳಲ್ಲಿ ವಿತರಣೆ -
Dolly Dhananjay: ಆ ಚಿತ್ರಕಥೆ.. 6 ತಿಂಗಳು ನನ್ನ ಟೇಬಲ್ ಮೇಲೆ ಬಿದ್ದಿತ್ತು: ನಟ ಡಾಲಿ ಧನಂಜಯ್ -
SSLC Maths Exam: ಎಸ್ಎಸ್ಎಲ್ಸಿ ಗಣಿತ ಪರೀಕ್ಷೆಯಲ್ಲಿ ಪಠ್ಯದ ಹೊರತಾದ ಪ್ರಶ್ನೆಗಳ ಆರೋಪ, ಕೃಪಾಂಕಕ್ಕಾಗಿ ಹೆಚ್ಚಿದ ಒತ್ತಾಯ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Tamil Nadu Election: ತನ್ನ ಡ್ರೈವರ್ ಮಗನಿಗೆ MLA ಟಿಕೆಟ್ ಘೋಷಿಸಿದ ನಟ ದಳಪತಿ ವಿಜಯ್, ಭಾವುಕ ಕ್ಷಣದ ವಿಡಿಯೋ ವೈರಲ್ -
ವಿರಾಟ್ ಅಸಲಿ ಆಟ ಇನ್ನೂ ಬಾಕಿಯಿದೆ; ಕಿಂಗ್ ಕೊಹ್ಲಿಗೆ ವಿಶೇಷ ಮನವಿ ಮಾಡಿಕೊಂಡ ಅಂಬಟಿ ರಾಯುಡು, ಭಾರೀ ವೈರಲ್ -
Bengaluru Weather: ನಗರಕ್ಕೆ ಇಂದು ಸೋಮವಾರವು ಗುಡುಗು ಸಹಿತ ಮಳೆ ಎಚ್ಚರಿಕೆ, ಸವಾರರೇ ಗಮನಿಸಿ -
Prakash Raj Mother passed Away: ನಟ ಪ್ರಕಾಶ್ ರಾಜ್ ತಾಯಿ ಸ್ವರ್ಣಲತಾ ನಿಧನ, ಚಿತ್ರರಂಗದ ಗಣ್ಯರಿಂದ ಸಂತಾಪ












Click it and Unblock the Notifications