ನಾಲ್ಕನೇ ಬಾರಿ ಜವರಾಯ ಆಕೆಯ ಕೈಬಿಡಲಿಲ್ಲ!

ಜೀವನದಲ್ಲಿ ಕಂಡ ಏರಿಳಿತಗಳಿಂದ ಬೇಸತ್ತು ಏರ್ ಪೋರ್ಟ್ ರಸ್ತೆಯಲ್ಲಿರುವ ತನ್ನ ಮನೆಯಲ್ಲಿ ಚೈತ್ರಾ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಆಕೆ ಕಿರಣ್ ಕುಮಾರ್ ಎಂಬುವವರನ್ನು ಹತ್ತು ವರ್ಷಗಳ ಕೆಳಗೆ ಪ್ರೇಮ ವಿವಾಹವಾಗಿದ್ದಳು. ಹಳೆಯ ಪ್ರೇಮಿಗಳು ಅವಳನ್ನು ಕೈಬಿಟ್ಟಿದ್ದರೂ, ಪ್ರೇಮದ ಕಹಿಬಿಟ್ಟುಹೋದ ಹಳೆಯ ನೆನಪುಗಳು ಅವಳನ್ನು ಬಿಟ್ಟಿರಲಿಲ್ಲ. ಇದರಿಂದ ಜೀವಿಸುವ ಆಶೆಯನ್ನೇ ಕಳೆದುಕೊಂಡು ಮೂರು ಬಾರಿ ಆತ್ಮಹತ್ಯೆಗೆ ಯತ್ನಿಸಿದ್ದಳು ಚೈತ್ರಾ.
ನಗರದಲ್ಲಿ ಬಿಪಿಓ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಚೈತ್ರಾ ಓದುತ್ತಿರುವಾಗಲೇ ಇಬ್ಬರೊಂದಿಗೆ ವಿಭಿನ್ನ ಕಾಲಘಟ್ಟದಲ್ಲಿ ಪ್ರೇಮದ ಬಲೆಯಲ್ಲಿ ಸಿಲುಕಿದ್ದಳು. ನಂತರ ಬೆಂಗಳೂರಿನಲ್ಲಿ 2005ರಲ್ಲಿ ಕೆಲಸಕ್ಕೆ ಸೇರಿಕೊಂಡಾಗ ಕೂಡ ಒಬ್ಬರನ್ನು ಪ್ರೇಮಿಸಿದ್ದಳು. ಮೂವರ ಜೊತೆಯೂ ಪ್ರೇಮ ಫಲಿಸಲಿಲ್ಲ. ಇದರಿಂದ ಆಕೆ ಸಹಜವಾಗಿ ನೊಂದಿದ್ದಳು. ನಂತರ ಕಿರಣ್ ರನ್ನು ಪ್ರೇಮಿಸಿ 2010ರ ಏಪ್ರಿಲ್ 18ರಂದು ಮದುವೆಯಾಗಿದ್ದಳು.
ಇದೇ ವರ್ಷ ಮದುವೆಯ ವಾರ್ಷಿಕೋತ್ಸವದ ಹಿಂದಿನ ದಿನ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಳು. ಸಕಾಲದಲ್ಲಿ ಆಸ್ಪತ್ರೆಗೆ ದಾಖಲಿಸಿದ್ದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಳು. ಹಿಂದೆ ಕೂಡ ನರ ಕತ್ತರಿಸಿ ಜೀವ ಕಳೆದುಕೊಳ್ಳಲು ಯತ್ನಿಸಿದ್ದಳು. ಮೂರು ಸಲವೂ ಅದೃಷ್ಟ ಆಕೆಯಪರವಿತ್ತು. ಆದರೆ, ನಾಲ್ಕನೇ ಬಾರಿ ದುರಾದೃಷ್ಟ ಆಕೆಯ ಪರ ವಹಿಸಲಿಲ್ಲ. ಏರ್ ಪೋರ್ಟ್ ರಸ್ತೆ ಪೊಲೀಸರು ದೂರು ದಾಖಲಿಸಿಕೊಂಡು ಅಸಹಜ ಸಾವಿನ ಕೇಸು ದಾಖಲಿಸಿದ್ದಾರೆ.
-
Karnataka Weather Mar 12: ಬಿಸಿಲು ಹೆಚ್ಚಳದ ನಡುವೆ ಮಾರ್ಚ್ 15ರಿಂದ ಕರ್ನಾಟಕದಲ್ಲಿ ಮಳೆ, ಹೇಗಿದೆ ಇಂದಿನ ವೆದರ್ -
Gold Rate March 12: ಚಿನ್ನದ ಬೆಲೆ 10,900 ರೂ., ಬೆಳ್ಳಿ ಬೆಲೆ 10,000 ರೂ. ಭರ್ಜರಿ ಇಳಿಕೆ, ಬಂಗಾರ ಪ್ರಿಯರು ಫಿದಾ -
ಇರಾನ್ ಪರಮಾಣು ವಿಜ್ಞಾನಿ ಕಥೆ ಮುಗಿಸಿದ ಇಸ್ರೇಲ್, ಮತ್ತಷ್ಟು ತಿಕ್ಕಾಟ ಶುರು | Operation Roaring Lion -
ಹೊಸೂರು ವಿಮಾನ ನಿಲ್ದಾಣ: ಬೆಂಗಳೂರು ಸಮೀಪ 2,979 ಎಕರೆ ಭೂಮಿ ಸ್ವಾಧೀನ; ಕನ್ನಡದಲ್ಲೇ ಮಾತನಾಡಿದ ತಮಿಳುನಾಡು ಶಾಸಕ -
Bengaluru Property Sale: ಬೆಂಗಳೂರಲ್ಲಿ 50 ಆಸ್ತಿದಾರರಿಗೆ ತಮ್ಮ ಆಸ್ತಿಯನ್ನೇ ಕಳೆದುಕೊಳ್ಳುವ ಆತಂಕ: ಜಿಬಿಎ ಹೇಳಿದ್ದೇನು -
ಭಾರತೀಯ ಸೇನೆಯನ್ನ ಅಪಹಾಸ್ಯ ಮಾಡಿದ್ದ ಪಾಕ್ ಆಟಗಾರನಿಗೆ 2.34 ಕೋಟಿ ಆಫರ್; ಕಾವ್ಯಾ ಮಾರನ್ ವಿರುದ್ಧ ಭುಗಿಲೆದ್ದ ಆಕ್ರೋಶ -
ಒಣ ಮೆಣಸಿನಕಾಯಿ ಬಳಸುವ ಮುನ್ನ ಈ ಕೆಲಸ ಮಾಡಿದ್ದೀರಾ? ಆರೋಗ್ಯ ಕಾಪಾಡಲು ಇಲ್ಲಿದೆ ಸೂಪರ್ ಐಡಿಯಾ -
Rashmika Mandanna: ಆ ಆಡಿಯೋ, ವಿಷಯವನ್ನ 24 ಗಂಟೆಯೊಳಗೆ ಡಿಲೀಟ್ ಮಾಡದಿದ್ದರೆ ಕಾನೂನು ಕ್ರಮ ಎಂದ ರಶ್ಮಿಕಾ ಮಂದಣ್ಣ -
Bengaluru: ಬೆಂಗಳೂರಿನ ಹೋಟೆಲ್ಗಳಲ್ಲಿ ಗ್ರಾಹಕರಿಗೆ ಶಾಕ್: ಸಾಂಬಾರ್ ಬದಲು ಬೇರೆ ಆಯ್ಕೆ - ಪೋಸ್ಟ್ ವೈರಲ್, ಡಿಸಿ ಹೇಳಿದ್ದೇನು -
Sulekere: ಮಂಡ್ಯದಲ್ಲಿ ಸೂಳೇಕೆರೆ ಮರುನಾಮಕರಣ ಚರ್ಚೆ: ಇತಿಹಾಸಕ್ಕೆ ಮಸಿ ಬಳಿಯಬೇಡಿ ಎಂದ ಜಗದೀಶ್ ಕೊಪ್ಪ -
ವಿಶ್ವಗುರು ಬಸವಣ್ಣ ಮತ್ತು ಅಕ್ಕಮಹಾದೇವಿ ಬಗ್ಗೆ ಅವಹೇಳನಕಾರಿ ಪೋಸ್ಟ್: ಆರೋಪಿ ಬಂಧನಕ್ಕೆ ಆಗ್ರಹ -
Horoscope March 12: ಗುರುವಾರ ದ್ವಾದಶ ರಾಶಿಗಳ ಫಲಾಫಲ ಹೇಗಿದೆ, ಇಲ್ಲಿದೆ ದಿನ ಭವಿಷ್ಯ












Click it and Unblock the Notifications